AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಲಾಕ್ 3.0: ಶಾಲಾ ಕಾಲೇಜುಗಳನ್ನು ಆಗಸ್ಟ್ 31ರವರೆಗೆ ತೆರೆಯುವಂತಿಲ್ಲ

ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಇಂದು ಸಂಪುಟ ಸಭೆ ನಡೆಸಿದ ನಂತರ ಕೇಂದ್ರ ಗೃಹ ಸಚಿವಾಲಯವು ಅನ್ಲಾಕ್ 3.0 ಮಾರ್ಗಸೂಚಿ ಬಿಡುಗಡೆ ಮಾಡಿತು. ಮಾರ್ಗಸೂಚಿಯ ಪ್ರಕಾರ, ಅನ್ಲಾಕ್ 3.0 ನಲ್ಲಿ ರಾತ್ರಿ ಕರ್ಫ್ಯೂ ಇರುವುದಿಲ್ಲ. ಶಾಲಾ ಕಾಲೇಜುಗಳನ್ನು ಆಗಸ್ಟ್ 31ರ ವರೆಗೆ ತೆರೆಯದಂತೆ ಸೂಚಿಸಲಾಗಿದೆ. ಆದರೆ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಬಹುದಾಗಿದೆ. ಕ್ರೀಡಾಪಟು ಮತ್ತು ಕ್ರೀಡಾಸಕ್ತರಿಗೆ ಒಳ್ಳೆಯ ಸುದ್ದಿ ಇಲ್ಲ. ಕ್ರೀಡಾ ಚಟುವಟಿಕೆಗಳನ್ನು ಇನ್ನೂ ಸ್ವಲ್ಪ ಸಮಯದವರೆಗೆ […]

ಅನ್ಲಾಕ್ 3.0: ಶಾಲಾ ಕಾಲೇಜುಗಳನ್ನು ಆಗಸ್ಟ್ 31ರವರೆಗೆ ತೆರೆಯುವಂತಿಲ್ಲ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 30, 2020 | 11:03 AM

Share

ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಇಂದು ಸಂಪುಟ ಸಭೆ ನಡೆಸಿದ ನಂತರ ಕೇಂದ್ರ ಗೃಹ ಸಚಿವಾಲಯವು ಅನ್ಲಾಕ್ 3.0 ಮಾರ್ಗಸೂಚಿ ಬಿಡುಗಡೆ ಮಾಡಿತು.

ಮಾರ್ಗಸೂಚಿಯ ಪ್ರಕಾರ, ಅನ್ಲಾಕ್ 3.0 ನಲ್ಲಿ ರಾತ್ರಿ ಕರ್ಫ್ಯೂ ಇರುವುದಿಲ್ಲ. ಶಾಲಾ ಕಾಲೇಜುಗಳನ್ನು ಆಗಸ್ಟ್ 31ರ ವರೆಗೆ ತೆರೆಯದಂತೆ ಸೂಚಿಸಲಾಗಿದೆ. ಆದರೆ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಬಹುದಾಗಿದೆ.

ಕ್ರೀಡಾಪಟು ಮತ್ತು ಕ್ರೀಡಾಸಕ್ತರಿಗೆ ಒಳ್ಳೆಯ ಸುದ್ದಿ ಇಲ್ಲ. ಕ್ರೀಡಾ ಚಟುವಟಿಕೆಗಳನ್ನು ಇನ್ನೂ ಸ್ವಲ್ಪ ಸಮಯದವರೆಗೆ ನಿರ್ಭಂಧಿಸಲು ಗೃಹ ಇಲಾಖೆ ನಿರ್ಧರಿಸಿದೆ. ಜೊತೆಗೆ ಸಿನಿಮಾ ಪ್ರಿಯರಿಗೂ ನಿರಾಶೆ ಕಾದಿದೆ. ಥಿಯೇಟರ್, ಈಜುಕೊಳ ಮತ್ತು ಮೆಟ್ರೊ ರೈಲು ಸೇವೆಯನ್ನು ಆರಂಭಿಸದಿರಲು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಬಾರ್, ಮನರಂಜನಾ ಪಾರ್ಕ್, ಅಸೆಂಬ್ಲಿ ಹಾಲ್ಗಳು ಮತ್ತಷ್ಟು ಸಮಯದವರೆಗೆ ಮುಚ್ಚಿರುತ್ತವೆ.

ಹಾಗೆಯೇ, ರಾಜಕೀಯ ಹಾಗೂ ಧಾರ್ಮಿಕ ಸಭೆ-ಸಮಾರಂಭಗಳಿಗೆ ನಿಷೇಧ ಮುಂದುವರಿದಿದೆ. ಆದರೆ ಕ್ರಮೇಣವಾಗಿ ವಿಮಾನಯಾನ ಪುನಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆಗಸ್ಟ 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆಚರಣೆಯಲ್ಲಿ ಭಾಗವಹಿಸುವವರು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

Published On - 9:20 am, Thu, 30 July 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!