AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Meet In Goa: ಗೋವಾದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಪಾಕಿಸ್ತಾನ ಸಚಿವ ಬಿಲಾವಲ್​ ನಡುವೆ ರಹಸ್ಯ ಸಭೆ

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಗೋವಾ(Goa) ದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿದ್ದು, ಇಂದು ಭಾರತದ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹಾಗೂ ಭುಟ್ಟೋ ನಡುವೆ ರಹಸ್ಯ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

SCO Meet In Goa: ಗೋವಾದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಪಾಕಿಸ್ತಾನ ಸಚಿವ ಬಿಲಾವಲ್​ ನಡುವೆ ರಹಸ್ಯ ಸಭೆ
ಎಸ್​ಸಿಒ ಸಭೆ
ನಯನಾ ರಾಜೀವ್
|

Updated on: May 05, 2023 | 9:54 AM

Share

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಗೋವಾ(Goa) ದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿದ್ದು, ಇಂದು ಭಾರತದ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹಾಗೂ ಭುಟ್ಟೋ ನಡುವೆ ರಹಸ್ಯ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಸ್ಲಾಮಾಬಾದ್‌ನಿಂದ 2011 ರ ನಂತರ ಮೊದಲ ಬಾರಿಗೆ ಪಾಕಿಸ್ತಾನದ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿಯಾಗುತ್ತಿರುವುದರಿಂದ ಈ ಬೆಳವಣಿಗೆಯು ಮಹತ್ವದ್ದಾಗಿದೆ. ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವರಾದ ಹಿನಾ ರಬ್ಬಾನಿ ಖಾರ್ ಆ ವರ್ಷ ಭಾರತಕ್ಕೆ ಭೇಟಿ ನೀಡಿದ್ದರು. ಈಗ ಸಚಿವ ಬಿಲಾವಲ್ ಬುಟ್ಟೋ ಅವರು ದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಎರಡು ತಿಂಗಳ ಹಿಂದೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರ ಮೊದಲ ಭೇಟಿಯಾಗಿದ್ದು, ಇದೀಗ ಗೋವಾದಲ್ಲಿ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿ0) ಸಭೆಯ ಹಿನ್ನೆಲೆಯಲ್ಲಿ ಉಭಯ ದೇಶಗಳ ಪ್ರತಿನಿಧಿಗಳ ನಡುವೆ ಎರಡನೇ ಸಭೆ ನಡೆದಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಹೊಸ ಬೆಳವಣಿಗೆಗಳ ನಡುವೆ ಈ ಭೇಟಿ ಬಂದಿದೆ. ಎರಡೂ ದೇಶಗಳು ಕನಿಷ್ಠ ಸಂವಹನ ಮಾರ್ಗಗಳನ್ನು ಹೊಂದಿವೆ. 2019 ರ ಪುಲ್ವಾಮಾ ದಾಳಿ ಮತ್ತು ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಭಾರತೀಯ ವಾಯುಪಡೆಯ ಕಾರ್ಯಾಚರಣೆಯ ನಂತರ ಎರಡು ದೇಶಗಳ ನಡುವಿನ ಸಂಬಂಧಗಳಲ್ಲಿ ಬಿರುಕು ಬಂದಿತ್ತು.

SCO ಸಭೆಯ ಎರಡನೇ ಮತ್ತು ಮುಖ್ಯ ದಿನವಾದ ಇಂದು ಮತ್ತು ಸಭೆಯ ಮೊದಲ ದಿನ, SCO ದೇಶಗಳ ವಿದೇಶಾಂಗ ಮಂತ್ರಿಗಳ ನಡುವೆ ಪ್ರತ್ಯೇಕ ದ್ವಿಪಕ್ಷೀಯ ಸಭೆಗಳು ನಡೆಯಲಿವೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದಾರೆ.

SCO Meeting In Goa: ಭಾರತದ ಅಧ್ಯಕ್ಷತೆ: ವಾಘಾ ಗಡಿ ದಾಟಿ ಬಂದ ಪಾಕಿಸ್ತಾನಿ ಪತ್ರಕರ್ತರ ನಿಯೋಗ, ವಿವಿಧ ದೇಶಗಳ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ

ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ಖಾತ್ರಿಪಡಿಸುವುದು ಪ್ರಮುಖವಾದ್ದು, ಮೂರು ವರ್ಷಗಳ ಹಿಂದೆ ಗಡಿಯಲ್ಲಿ ಭಾರತ ಮತ್ತು ಚೀನಾ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಉಭಯ ದೇಶಗಳ ವಿದೇಶಾಂಗ ಮಂತ್ರಿಗಳ ನಡುವಿನ ಸಭೆ ಮಹತ್ವದ್ದಾಗಿದೆ. ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ, ಜಾಗತಿಕ ಮತ್ತು ಬಹುಪಕ್ಷೀಯ ಸಹಕಾರ” ಕುರಿತು ಸಮಗ್ರ ಪರಿಶೀಲನೆ ಕುರಿತು ಮಾತುಕತೆ ನಡೆಸಿದರು.

ರಷ್ಯಾದ ವಿದೇಶಾಂಗ ಸಚಿವರೊಂದಿಗೆ ಸಭೆ ಶಾಂಘೈ ಸಹಕಾರ ಸಂಘಟನೆಯ ಸಭೆ ಪ್ರಾರಂಭವಾಗುವ ಮೊದಲು ಭಾರತ ಮತ್ತು ರಷ್ಯಾದ ವಿದೇಶಾಂಗ ಮಂತ್ರಿಗಳ ನಡುವೆ ಸಭೆಯೂ ನಡೆಯಿತು.

CO ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಮತ್ತು ನಾಲ್ಕು ಮಧ್ಯ ಏಷ್ಯಾದ ದೇಶಗಳನ್ನು ಹೊಂದಿದೆ – ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್, ಅದರ ಸದಸ್ಯರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್