AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit: ಪಾಕ್​​ ವಿದೇಶಾಂಗ ಸಚಿವರನ್ನು ಸ್ವಾಗತಿಸಿದ ಸಚಿವ ಎಸ್ ಜೈಶಂಕರ್

ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶಕ್ಕೆ ಇಂದು (ಮೇ 5) ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರನ್ನು ಸ್ವಾಗತಿಸಿದರು.

SCO Summit: ಪಾಕ್​​ ವಿದೇಶಾಂಗ ಸಚಿವರನ್ನು ಸ್ವಾಗತಿಸಿದ ಸಚಿವ ಎಸ್ ಜೈಶಂಕರ್
ಎಸ್ ಜೈಶಂಕರ್ ಮತ್ತು ಬಿಲಾವಲ್ ಭುಟ್ಟೋ-ಜರ್ದಾರಿ
ಅಕ್ಷಯ್​ ಪಲ್ಲಮಜಲು​​
|

Updated on: May 05, 2023 | 10:59 AM

Share

ದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO Summit) ಸಮಾವೇಶಕ್ಕೆ ಇಂದು (ಮೇ 5) ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರನ್ನು ಸ್ವಾಗತಿಸಿದರು. ಜತೆಗೆಯಾಗಿ ನಿಂತು ಎರಡು ದೇಶಗಳ ಸಚಿವರುಗಳು ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನೂ ಭಾರತದ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಸಾಂಪ್ರದಾಯಿಕವಾಗಿ ಪಾಕಿಸ್ತಾನ ವಿದೇಶಾಂಗ ಸಚಿವರಿಗೆ ಶುಭಾಶಯ ತಿಳಿಸಿದರು. ಪಾಕಿಸ್ತಾನದ ಒಬ್ಬ ಮಂತ್ರಿ ಭಾರತಕ್ಕೆ 12 ವರ್ಷಗಳ ನಂತರ ಭೇಟಿ ನೀಡಿರುವ ನೆರೆಯ ದೇಶದ ಮೊದಲ ಹಿರಿಯ ನಾಯಕ ಬಿಲಾವಲ್ ಭುಟ್ಟೊ ಎಂದು ಹೇಳಲಾಗಿದೆ. ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವರ ನಡುವಿನ ದ್ವಿಪಕ್ಷೀಯ ಸಂಬಂಧದ ಮಾತುಕತೆಗಳ ಬಗ್ಗೆ ಇನ್ನೂ ಯಾವುದೇ ಸಮಯ ನಗದಿಯಾಗಿಲ್ಲ. ಯಾವಾಗಲ್ಲೂ ಭಾರತ ಹಾಗೂ ಪಾಕಿಸ್ತಾನ ಶುತ್ರಗಳಂತೆ ಇದ್ದರು. ಈ ಸಭೆಯಲ್ಲಿ ಪಾಕಿಸ್ತಾನದ ಮಂತ್ರಿ ಭಾಗವಾಹಿಸಿರುವುದು ಆಶ್ಚರ್ಯವಾಗಿದೆ, ಗಡಿ ವಿವಾದಗಳು ಅಥವಾ ಇನ್ನೂ ಅನೇಕ ವಿಚಾರಗಳಲ್ಲಿ ಎರಡು ದೇಶಗಳ ನಡುವೆ ಒಂದಲ್ಲ ಒಂದು ವಿವಾದಗಳು ನಡೆಯುತ್ತಿತ್ತು.

SCO ಕೌನ್ಸಿಲ್ ಆಫ್ ಫಾರಿನ್ ಮಿನಿಸ್ಟರ್ಸ್ (CFM) ಸಭೆಯಲ್ಲಿ ಪಾಲ್ಗೊಳ್ಳಲು ಭುಟ್ಟೋ ಭಾರತಕ್ಕೆ ಭೇಟಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಾಬಾದ್‌ನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಳಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಒಂದಲ್ಲ ಒಂದು ಜಿದ್ದಾಜಿದ್ದಿ ಇತ್ತು.

ಇಂದು ಮುಂಜಾನೆ ಗೋವಾದ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಮುಖ್ಯಸ್ಥರಾಗಿರುವ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಅವರು ಬರಮಾಡಿಕೊಂಡರು.

ಇದನ್ನೂ ಓದಿ: SCO Summit 2022 ಇದು ಯುದ್ಧದ ಯುಗವಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​​ ಪುಟಿನ್​​ಗೆ ಹೇಳಿದ ಪ್ರಧಾನಿ ಮೋದಿ

2022ರಲ್ಲಿ ನಡೆದ ಸಮರ್ಕಂಡ್ SCO ಶೃಂಗಸಭೆಯಲ್ಲಿ ಭಾರತವು SCOದ ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಈ ವರ್ಷ, ಮೇ 4-5 ರಿಂದ ಗೋವಾದಲ್ಲಿ ವಿದೇಶಾಂಗ ಮಂತ್ರಿಗಳ ಸಭೆ ಸೇರಿದಂತೆ ಹಲವಾರು ಪ್ರಮುಖ SCO ಸಭೆಗಳನ್ನು ಭಾರತ ಆಯೋಜಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ