AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit: ಪಾಕ್​​ ವಿದೇಶಾಂಗ ಸಚಿವರನ್ನು ಸ್ವಾಗತಿಸಿದ ಸಚಿವ ಎಸ್ ಜೈಶಂಕರ್

ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶಕ್ಕೆ ಇಂದು (ಮೇ 5) ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರನ್ನು ಸ್ವಾಗತಿಸಿದರು.

SCO Summit: ಪಾಕ್​​ ವಿದೇಶಾಂಗ ಸಚಿವರನ್ನು ಸ್ವಾಗತಿಸಿದ ಸಚಿವ ಎಸ್ ಜೈಶಂಕರ್
ಎಸ್ ಜೈಶಂಕರ್ ಮತ್ತು ಬಿಲಾವಲ್ ಭುಟ್ಟೋ-ಜರ್ದಾರಿ
ಅಕ್ಷಯ್​ ಪಲ್ಲಮಜಲು​​
|

Updated on: May 05, 2023 | 10:59 AM

Share

ದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO Summit) ಸಮಾವೇಶಕ್ಕೆ ಇಂದು (ಮೇ 5) ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರನ್ನು ಸ್ವಾಗತಿಸಿದರು. ಜತೆಗೆಯಾಗಿ ನಿಂತು ಎರಡು ದೇಶಗಳ ಸಚಿವರುಗಳು ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನೂ ಭಾರತದ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಸಾಂಪ್ರದಾಯಿಕವಾಗಿ ಪಾಕಿಸ್ತಾನ ವಿದೇಶಾಂಗ ಸಚಿವರಿಗೆ ಶುಭಾಶಯ ತಿಳಿಸಿದರು. ಪಾಕಿಸ್ತಾನದ ಒಬ್ಬ ಮಂತ್ರಿ ಭಾರತಕ್ಕೆ 12 ವರ್ಷಗಳ ನಂತರ ಭೇಟಿ ನೀಡಿರುವ ನೆರೆಯ ದೇಶದ ಮೊದಲ ಹಿರಿಯ ನಾಯಕ ಬಿಲಾವಲ್ ಭುಟ್ಟೊ ಎಂದು ಹೇಳಲಾಗಿದೆ. ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವರ ನಡುವಿನ ದ್ವಿಪಕ್ಷೀಯ ಸಂಬಂಧದ ಮಾತುಕತೆಗಳ ಬಗ್ಗೆ ಇನ್ನೂ ಯಾವುದೇ ಸಮಯ ನಗದಿಯಾಗಿಲ್ಲ. ಯಾವಾಗಲ್ಲೂ ಭಾರತ ಹಾಗೂ ಪಾಕಿಸ್ತಾನ ಶುತ್ರಗಳಂತೆ ಇದ್ದರು. ಈ ಸಭೆಯಲ್ಲಿ ಪಾಕಿಸ್ತಾನದ ಮಂತ್ರಿ ಭಾಗವಾಹಿಸಿರುವುದು ಆಶ್ಚರ್ಯವಾಗಿದೆ, ಗಡಿ ವಿವಾದಗಳು ಅಥವಾ ಇನ್ನೂ ಅನೇಕ ವಿಚಾರಗಳಲ್ಲಿ ಎರಡು ದೇಶಗಳ ನಡುವೆ ಒಂದಲ್ಲ ಒಂದು ವಿವಾದಗಳು ನಡೆಯುತ್ತಿತ್ತು.

SCO ಕೌನ್ಸಿಲ್ ಆಫ್ ಫಾರಿನ್ ಮಿನಿಸ್ಟರ್ಸ್ (CFM) ಸಭೆಯಲ್ಲಿ ಪಾಲ್ಗೊಳ್ಳಲು ಭುಟ್ಟೋ ಭಾರತಕ್ಕೆ ಭೇಟಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಾಬಾದ್‌ನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬಳಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಒಂದಲ್ಲ ಒಂದು ಜಿದ್ದಾಜಿದ್ದಿ ಇತ್ತು.

ಇಂದು ಮುಂಜಾನೆ ಗೋವಾದ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಮುಖ್ಯಸ್ಥರಾಗಿರುವ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಅವರು ಬರಮಾಡಿಕೊಂಡರು.

ಇದನ್ನೂ ಓದಿ: SCO Summit 2022 ಇದು ಯುದ್ಧದ ಯುಗವಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​​ ಪುಟಿನ್​​ಗೆ ಹೇಳಿದ ಪ್ರಧಾನಿ ಮೋದಿ

2022ರಲ್ಲಿ ನಡೆದ ಸಮರ್ಕಂಡ್ SCO ಶೃಂಗಸಭೆಯಲ್ಲಿ ಭಾರತವು SCOದ ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಈ ವರ್ಷ, ಮೇ 4-5 ರಿಂದ ಗೋವಾದಲ್ಲಿ ವಿದೇಶಾಂಗ ಮಂತ್ರಿಗಳ ಸಭೆ ಸೇರಿದಂತೆ ಹಲವಾರು ಪ್ರಮುಖ SCO ಸಭೆಗಳನ್ನು ಭಾರತ ಆಯೋಜಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ