ಟ್ರಕ್‌ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್‌ಯುವಿ, 5 ವೈದ್ಯರು ಸಾವು

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕಾರ್ಪಿಯೋ ಎಸ್‌ಯುವಿವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ವೈದ್ಯರು ಸಾವನ್ನಪ್ಪಿದ್ದಾರೆ, ಇದರ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್‌ಯುವಿ, 5 ವೈದ್ಯರು ಸಾವು

Updated on: Nov 27, 2024 | 12:55 PM

ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕಾರ್ಪಿಯೋ ಎಸ್‌ಯುವಿವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ವೈದ್ಯರು ಸಾವನ್ನಪ್ಪಿದ್ದಾರೆ, ಇದರ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮುಂಜಾನೆ 3.30ರ ಸುಮಾರಿಗೆ ಲಕ್ನೋದಲ್ಲಿ ಮದುವೆ ಮುಗಿಸಿ ಹೊರಟ್ಟಿದ್ದಾರೆ. ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ತಪ್ಪಿ ಡಿವೈಡರ್‌ ಮುರಿದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. SUV ಚಾಲಕನು ಚಕ್ರದಲ್ಲಿ ನಿದ್ರಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಈ ಅಪಘಾತ ಸಂಭವಿಸಿದ ನಂತರ ವೈದ್ಯರನ್ನು ಆಸ್ಪತ್ರೆ ಸಾಗಿಸಲಾಗಿದೆ. ಅಷ್ಟೊತ್ತಿಗೆ ಕಾರಿನಲ್ಲಿದ್ದ ಐವರು ವೈದ್ಯರು ಸಾವನ್ನಪ್ಪಿದ್ದಾರೆ. ಒಬ್ಬರ ತಲೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಸಾವನ್ನಪಿದ್ದವರನ್ನು ಡಾ ಅನಿರುದ್ಧ್ ವರ್ಮಾ, ಡಾ ಸಂತೋಷ್ ಕುಮಾರ್ ಮೌರ್ಯ, ಡಾ ಜೈವೀರ್ ಸಿಂಗ್, ಡಾ ಅರುಣ್ ಕುಮಾರ್ ಮತ್ತು ಡಾ ನಾರ್ದೇವ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಬ್ಯಾಲೆಟ್ ಪೇಪರ್ ಮತದಾನ ಬೇಕು ಎಂಬ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ, ಕಾಂಗ್ರೆಸ್​​​ಗೆ ಶಾಕ್ 

ಇನ್ನು ಈ ಬಗ್ಗೆ ಮಾತನಾಡಿದ ತಿರ್ವಾ ವಲಯದ ಅಧಿಕಾರಿ ಪ್ರಿಯಾಂಕಾ ಬಾಜಪೈ ಅವರು, ಇಂದು ಮುಂಜಾನೆ 3.30ರ ಸುಮಾರಿಗೆ ಲಕ್ನೋದಿಂದ ಆಗ್ರಾ ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ತಪ್ಪಿ, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವೈದ್ಯರು ಸಾವನ್ನಪ್ಪಿದ್ದಾರೆ. ಇನ್ನು ಸಾವನ್ನಪ್ಪಿದರವನ್ನು ಸೈಫೈ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಲ್ಯಾಬ್ ತಂತ್ರಜ್ಞರು ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಪ್ರಕರಣ ಕೂಡ ದಾಖಲಿಸಲಾಗಿದೆ. ಜತೆಗೆ ತನಿಖೆ ನಡೆಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us