AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್

ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್
ನೊಯ್ಡಾ ಅಪಾರ್ಟ್​ಮೆಂಟ್ ಗಲಾಟೆಯ ದೃಶ್ಯ
TV9 Web
| Edited By: |

Updated on:Oct 21, 2022 | 1:08 PM

Share

ನೋಯ್ಡಾ: ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ (Noida) ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಪಾರ್ಟ್​ಮೆಂಟ್ ನಿವಾಸಿಗಳು ಮತ್ತು ಸೆಕ್ಯುರಿಟಿ ಗಾರ್ಡ್​ಗಳ ನಡುವೆ ಗಲಾಟೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ಹೊಡೆದಾಡಿಕೊಳ್ಳುತ್ತಿದ್ದು, ಸೆಕ್ಯುರಿಟಿ ಗಾರ್ಡ್​ಗಳು ಅವರನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ

ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ಎಒಎ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಸೆಕ್ಟರ್ -113 ವ್ಯಾಪ್ತಿಯ ಹೈಡ್ ಪಾರ್ಕ್ ಸೊಸೈಟಿಯಲ್ಲಿ 2 ಗುಂಪಿನ ನಡುವೆ ವಿವಾದ ನಡೆಯುತ್ತಿದ್ದು, ಈ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 107/116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ 2 ಗುಂಪುಗಳ ಜನರ ನಡುವೆ ನಿನ್ನೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನೋಯ್ಡಾ ಡಿಸಿಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Fri, 21 October 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?