AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಬಾಲರಾಮನ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ್ ಯೋಗಿರಾಜ್

ಕನ್ನಡಿಗ ಶಿಲ್ಪಿ ಅರುಣ್ ಕುಮಾರ್ ಕೆತ್ತನೆ ಮಾಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಮುಗ್ದತೆಯನ್ನು ಒಳಗೊಂಡ ಬಾಲರಾಮನ ಕಣ್ಣುಗಳು ಎಲ್ಲರನ್ನು ಅಚ್ಚರಿಗೊಳಿಸಿದ್ದವು. ಅಷ್ಟಕ್ಕೂ ಈ ಕಣ್ಣುಗಳನ್ನು ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿಯ ಮೂಲಕ ಕೆತ್ತನೆ ಮಾಡಿದ್ದರು. ಈ ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿಯ ಫೋಟೋವನ್ನು ಅರುಣ್ ಯೋಗಿರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಯೋಧ್ಯೆ ಬಾಲರಾಮನ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ್ ಯೋಗಿರಾಜ್
ಅಯೋಧ್ಯೆ ಬಾಲರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ್ ಯೋಗಿರಾಜ್
ಹರೀಶ್ ಜಿ.ಆರ್​.
| Edited By: |

Updated on: Feb 10, 2024 | 4:10 PM

Share

ನವದೆಹಲಿ, ಫೆ.10: ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಕೆತ್ತನೆ ಮಾಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಮುಗ್ದತೆಯನ್ನು ಒಳಗೊಂಡ ಬಾಲರಾಮನ (Ramlalla) ಕಣ್ಣುಗಳು ಎಲ್ಲರನ್ನು ಅಚ್ಚರಿಗೊಳಿಸಿದ್ದವು. ಅಷ್ಟಕ್ಕೂ ಈ ಕಣ್ಣುಗಳನ್ನು ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿಯ ಮೂಲಕ ಕೆತ್ತನೆ ಮಾಡಿದ್ದರು. ಈ ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿಯ ಫೋಟೋವನ್ನು ಅರುಣ್ ಯೋಗಿರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಫೋಟೋವನ್ನು ಇನ್​ಸ್ಟಾಗ್ರಾಮ್ ಹಾಗೂ ಎಕ್ಸ್​ನಲ್ಲಿ (ಟ್ವಿಟರ್) ಹಂಚಿಕೊಂಡಿದ್ದಾರೆ. “ಈ ಬೆಳ್ಳಿಯ ಸುತ್ತಿಗೆಯನ್ನು ಚಿನ್ನದ ಉಳಿಯೊಂದಿಗೆ ಹಂಚಿಕೊಳ್ಳಲು ನಾನು ಯೋಚಿಸಿದೆ, ಇದನ್ನು ನಾನು ಅಯೋಧ್ಯೆಯ ರಾಮಲಲ್ಲಾನ ದೈವಿಕ ಕಣ್ಣುಗಳನ್ನು ಕೆತ್ತಿದ್ದೇನೆ ಎಂದು ಎಕ್ಸ್​ನಲ್ಲಿ ಅರುಣ್ ಯೋಗಿರಾಜ್ ಬರೆದುಕೊಂಡಿದ್ದಾರೆ.

ಇತ್ತೀಚೆಗೆ, ರಾಮಲಲ್ಲಾನ ಕಣ್ಣುಗಳ ಕೆತ್ತನೆ ಬಗ್ಗೆ ಒಂದಷ್ಟು ಮಾಹಿತಿಯನ್ನು ಅರುಣ್ ಯೋಗಿರಾಜ್ ಅವರು ಹಂಚಿಕೊಂಡಿದ್ದರು. ಈ ವೇಳೆ ಅವರು ಕಣ್ಣುಗಳ ಕೆತ್ತನೆಗೆ ಬೆಳ್ಳಿಯ ಸುತ್ತಿಗೆ ಹಾಗೂ ಚಿನ್ನದ ಉಳಿ ಉಪಯೋಗಿಸಿದ್ದಾಗಿ ಹೇಳಿಕೊಂಡಿದ್ದರು. ಅಲ್ಲದೆ, ಕಣ್ಣುಗಳನ್ನು ಕೆತ್ತನೆ ಮಾಡಲು ತೆಗೆದುಕೊಂಡ ಸಮಯದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳಿ ದುಬಾರಿ ಜ್ಯುವೆಲರಿ ನೀಡಿದ ಅಮಿತಾಭ್ ಬಚ್ಚನ್

ವಿಗ್ರಹದ ಮುಖ ಕೆತ್ತನೆಗೆ ಅರುಣ್ ಯೋಗಿರಾಜ್ ಅವರು ಎರಡು ತಿಂಗಳು ಯೋಚನೆ ಮಾಡಿದ್ದರಂತೆ. ಮಗುವಿನ ನಗುಮುಖದ ಆಲೋಚನೆ ಬರುತ್ತಿದ್ದಂತೆ ರಾಮಲಲ್ಲಾನ ಮುಖದ ಕೆತ್ತನೆ ಆರಂಭಿಸಿದ್ದೆ ಎಂದು ಹೇಳಿದ್ದರು, ಕಣ್ಣುಗಳ ಕೆತ್ತನೆಯನ್ನು ಶುಭಮುಹೂರ್ತ ನೋಡಿ ಕೆತ್ತಲಾಗುತ್ತದೆ. ರಾಮಲಲ್ಲಾನ ಕಣ್ಣುಗಳ ಕೆತ್ತನೆಗೆ 20 ನಿಮಿಷಗಳ ಶುಭಮುಹೂರ್ತ ನೀಡಲಾಗಿತ್ತು. ಕೆತ್ತನೆಯನ್ನು ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿಯಲ್ಲಿ ಮಾತ್ರ ಕೆತ್ತನೆ ಮಾಡಬೇಕು. ಹೀಗಾಗಿ ಬೆಳ್ಳಿ ಸುತ್ತಿಗೆ ಹಾಗೂ ಚಿನ್ನದ ಉಳಿ ನನಗೆ ಪೂರೈಸಿದ್ದರು ಎಂದು ಮಾಹಿತಿ ಹಂಚಿಕೊಂಡಿದ್ದರು.

ಅಲ್ಲದೆ, ರಾಮಲಲ್ಲಾನ ಕಣ್ಣುಗಳ ಕೆತ್ತನೆಗೂ ಮುನ್ನ ಅರುಣ್ ಯೋಗಿರಾಜ್ ಅವರು ಸರಯು ನದಿಯಲ್ಲಿ ಸ್ನಾನ ಮಾಡಿದ್ದರು. ಹನುಮಾನ್‌ ಗರ್ಹಿ ಮತ್ತು ಕನಕ ಭವನದಲ್ಲಿ ಪೂಜೆ ಸಲ್ಲಿಸಿದ್ದರು.

ರಾಮಲಲ್ಲಾನ ವಿಗ್ರಹಕ್ಕೆ ಕೃಷ್ಣಶಿಲೆ ಬಳಕೆ

ರಾಮಲಲ್ಲಾನ ವಿಗ್ರಹದ ಕೆತ್ತನೆಗೆ ಬಳಸಿರುವ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಆಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೂಡಿರುವ ಕಲ್ಲೆ ಕೃಷ್ಣ ಶಿಲೆ. ಕಬ್ಬಿಣ 850 ಡಿಗ್ರಿಯಲ್ಲಿ ಕಾಯಿಸಿದರೆ ಕರಗಿ ಹೋಗುತ್ತದೆ. ಆದರೆ ಕೃಷ್ಣ ಶಿಲೆ ಕರಗುವುದಿಲ್ಲ, ಸಿಡಿಯುವುದಿಲ್ಲ, ಆಸಿಡ್ ಹಾಕಿದರೆ ಏನೂ ಆಗಲ್ಲ. ಮಳೆ, ಗಾಳಿ, ಬಿಸಿಲಿಗೂ ಏನು ಆಗಲ್ಲ. ಕೃಷ್ಣ ಶೀಲೆ ಸಾಕಷ್ಟು ಗಟ್ಟಿಯಾದ ಕಲ್ಲು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!