AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 11, 2021 | 11:34 AM

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಎರಡನೇ ಹಾಗೂ ದೇಶದಲ್ಲಿ 33ನೇ ಒಮಿಕ್ರಾನ್ (Omicron) ಸೋಂಕಿನ ಪ್ರಕರಣ ಪತ್ತೆಯಾಗಿದೆ. ದೆಹಲಿ (Delhi)ಯಲ್ಲಿ ಇಂದು 2ನೇ ಒಮಿಕ್ರಾನ್​ ಕೇಸ್​ ದಾಖಲಾಗಿದ್ದನ್ನು ಅಲ್ಲಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ದೃಢಪಡಿಸಿದ್ದಾರೆ.  ಇವರು ಜಿಂಬಾಬ್ವೆಯಿಂದ ದೆಹಲಿಗೆ ಬಂದವರಾಗಿದ್ದು, ಕೊವಿಡ್​ 19 ಸೋಂಕು ದೃಢಪಟ್ಟಿತ್ತು. ನಂತರ ಅವರ ಮಾದರಿಗಳನ್ನು ಜಿನೋಮ್ ಸಿಕ್ವೆನ್ಸಿಂಗ್​​ಗೆ ಕಳಿಸಲಾಗಿತ್ತು. ಅದರಲ್ಲಿ ಒಮಿಕ್ರಾನ್​ ಇರುವುದು ದೃಢಪಟ್ಟಿದೆ.  

ಒಮಿಕ್ರಾನ್​ ಸೋಂಕಿತನನ್ನು ಸದ್ಯ ದೆಹಲಿಯ ಲೋಕ ನಾಯಕ ಜೈ ಪ್ರಕಾಶ್​ ನಾರಾಯಣ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. ಅಲ್ಲಿ ಒಮಿಕ್ರಾನ್​ ಸೋಂಕಿತರಿಗೆಂದೇ ಪ್ರತ್ಯೇಕ್​ ವಾರ್ಡ್​ ಕೂಡ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಒಟ್ಟಾರೆ 27 ಪ್ರಯಾಣಿಕರನ್ನು ಅಡ್ಮಿಟ್ ಮಾಡಲಾಗಿತ್ತು. ಅದರಲ್ಲಿ ಇದೀಗ ಎರಡನೇ ವ್ಯಕ್ತಿಗೆ ಸೋಂಕು ತಗುಲಿದೆ. ಕೆಲವೇ ದಿನಗಳ ಹಿಂದೆ ಒಬ್ಬರಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿತ್ತು. ಉಳಿದ 25ಜನರಲ್ಲಿ ವರದಿ ನೆಗೆಟಿವ್​ ಬಂದಿದೆ.

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು. ಮಹಾರಾಷ್ಟ್ರದಲ್ಲೇ 17 ಒಮಿಕ್ರಾನ್​ ಸೋಂಕಿತರು ಇದ್ದು, ಸದ್ಯ ಮುಂಬೈನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ. ಯಾವುದೇ ಮೆರವಣಿಗೆ, ರ್ಯಾಲಿ, ಗುಂಪುಗೂಡುವಿಕೆಯನ್ನು ನಿಷೇಧಿಸಲಾಗಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆಂದು ದೇಶದಲ್ಲಿ ಮಾರ್ಗಸೂಚಿ ಬದಲಾಗಿದೆ. ಒಮಿಕ್ರಾನ್​ ನಿಯಂತ್ರಣಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು