AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 11, 2021 | 11:34 AM

Share

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಎರಡನೇ ಹಾಗೂ ದೇಶದಲ್ಲಿ 33ನೇ ಒಮಿಕ್ರಾನ್ (Omicron) ಸೋಂಕಿನ ಪ್ರಕರಣ ಪತ್ತೆಯಾಗಿದೆ. ದೆಹಲಿ (Delhi)ಯಲ್ಲಿ ಇಂದು 2ನೇ ಒಮಿಕ್ರಾನ್​ ಕೇಸ್​ ದಾಖಲಾಗಿದ್ದನ್ನು ಅಲ್ಲಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ದೃಢಪಡಿಸಿದ್ದಾರೆ.  ಇವರು ಜಿಂಬಾಬ್ವೆಯಿಂದ ದೆಹಲಿಗೆ ಬಂದವರಾಗಿದ್ದು, ಕೊವಿಡ್​ 19 ಸೋಂಕು ದೃಢಪಟ್ಟಿತ್ತು. ನಂತರ ಅವರ ಮಾದರಿಗಳನ್ನು ಜಿನೋಮ್ ಸಿಕ್ವೆನ್ಸಿಂಗ್​​ಗೆ ಕಳಿಸಲಾಗಿತ್ತು. ಅದರಲ್ಲಿ ಒಮಿಕ್ರಾನ್​ ಇರುವುದು ದೃಢಪಟ್ಟಿದೆ.  

ಒಮಿಕ್ರಾನ್​ ಸೋಂಕಿತನನ್ನು ಸದ್ಯ ದೆಹಲಿಯ ಲೋಕ ನಾಯಕ ಜೈ ಪ್ರಕಾಶ್​ ನಾರಾಯಣ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. ಅಲ್ಲಿ ಒಮಿಕ್ರಾನ್​ ಸೋಂಕಿತರಿಗೆಂದೇ ಪ್ರತ್ಯೇಕ್​ ವಾರ್ಡ್​ ಕೂಡ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಒಟ್ಟಾರೆ 27 ಪ್ರಯಾಣಿಕರನ್ನು ಅಡ್ಮಿಟ್ ಮಾಡಲಾಗಿತ್ತು. ಅದರಲ್ಲಿ ಇದೀಗ ಎರಡನೇ ವ್ಯಕ್ತಿಗೆ ಸೋಂಕು ತಗುಲಿದೆ. ಕೆಲವೇ ದಿನಗಳ ಹಿಂದೆ ಒಬ್ಬರಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿತ್ತು. ಉಳಿದ 25ಜನರಲ್ಲಿ ವರದಿ ನೆಗೆಟಿವ್​ ಬಂದಿದೆ.

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು. ಮಹಾರಾಷ್ಟ್ರದಲ್ಲೇ 17 ಒಮಿಕ್ರಾನ್​ ಸೋಂಕಿತರು ಇದ್ದು, ಸದ್ಯ ಮುಂಬೈನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ. ಯಾವುದೇ ಮೆರವಣಿಗೆ, ರ್ಯಾಲಿ, ಗುಂಪುಗೂಡುವಿಕೆಯನ್ನು ನಿಷೇಧಿಸಲಾಗಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆಂದು ದೇಶದಲ್ಲಿ ಮಾರ್ಗಸೂಚಿ ಬದಲಾಗಿದೆ. ಒಮಿಕ್ರಾನ್​ ನಿಯಂತ್ರಣಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ