AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು.

Omicron: ದೆಹಲಿಯಲ್ಲಿ ಇನ್ನೊಂದು ಒಮಿಕ್ರಾನ್​ ಕೇಸ್​ ದಾಖಲು; ಭಾರತದಲ್ಲೀಗ ಹೊಸ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 11, 2021 | 11:34 AM

Share

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಎರಡನೇ ಹಾಗೂ ದೇಶದಲ್ಲಿ 33ನೇ ಒಮಿಕ್ರಾನ್ (Omicron) ಸೋಂಕಿನ ಪ್ರಕರಣ ಪತ್ತೆಯಾಗಿದೆ. ದೆಹಲಿ (Delhi)ಯಲ್ಲಿ ಇಂದು 2ನೇ ಒಮಿಕ್ರಾನ್​ ಕೇಸ್​ ದಾಖಲಾಗಿದ್ದನ್ನು ಅಲ್ಲಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ದೃಢಪಡಿಸಿದ್ದಾರೆ.  ಇವರು ಜಿಂಬಾಬ್ವೆಯಿಂದ ದೆಹಲಿಗೆ ಬಂದವರಾಗಿದ್ದು, ಕೊವಿಡ್​ 19 ಸೋಂಕು ದೃಢಪಟ್ಟಿತ್ತು. ನಂತರ ಅವರ ಮಾದರಿಗಳನ್ನು ಜಿನೋಮ್ ಸಿಕ್ವೆನ್ಸಿಂಗ್​​ಗೆ ಕಳಿಸಲಾಗಿತ್ತು. ಅದರಲ್ಲಿ ಒಮಿಕ್ರಾನ್​ ಇರುವುದು ದೃಢಪಟ್ಟಿದೆ.  

ಒಮಿಕ್ರಾನ್​ ಸೋಂಕಿತನನ್ನು ಸದ್ಯ ದೆಹಲಿಯ ಲೋಕ ನಾಯಕ ಜೈ ಪ್ರಕಾಶ್​ ನಾರಾಯಣ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. ಅಲ್ಲಿ ಒಮಿಕ್ರಾನ್​ ಸೋಂಕಿತರಿಗೆಂದೇ ಪ್ರತ್ಯೇಕ್​ ವಾರ್ಡ್​ ಕೂಡ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಒಟ್ಟಾರೆ 27 ಪ್ರಯಾಣಿಕರನ್ನು ಅಡ್ಮಿಟ್ ಮಾಡಲಾಗಿತ್ತು. ಅದರಲ್ಲಿ ಇದೀಗ ಎರಡನೇ ವ್ಯಕ್ತಿಗೆ ಸೋಂಕು ತಗುಲಿದೆ. ಕೆಲವೇ ದಿನಗಳ ಹಿಂದೆ ಒಬ್ಬರಲ್ಲಿ ಒಮಿಕ್ರಾನ್​ ಕಾಣಿಸಿಕೊಂಡಿತ್ತು. ಉಳಿದ 25ಜನರಲ್ಲಿ ವರದಿ ನೆಗೆಟಿವ್​ ಬಂದಿದೆ.

ಭಾರತದಲ್ಲಿ ಈಗ ಒಮಿಕ್ರಾನ್​ ಪ್ರಕರಣ 33ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಒಟ್ಟಿಗೇ 7 ಕೇಸ್​ಗಳು ದಾಖಲಾಗಿ, ಗುಜರಾತ್​​ನಲ್ಲಿ ಇಬ್ಬರಿಗೆ ಈ ಸೋಂಕು ದೃಢಪಟ್ಟಿತ್ತು. ಮಹಾರಾಷ್ಟ್ರದಲ್ಲೇ 17 ಒಮಿಕ್ರಾನ್​ ಸೋಂಕಿತರು ಇದ್ದು, ಸದ್ಯ ಮುಂಬೈನಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ. ಯಾವುದೇ ಮೆರವಣಿಗೆ, ರ್ಯಾಲಿ, ಗುಂಪುಗೂಡುವಿಕೆಯನ್ನು ನಿಷೇಧಿಸಲಾಗಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆಂದು ದೇಶದಲ್ಲಿ ಮಾರ್ಗಸೂಚಿ ಬದಲಾಗಿದೆ. ಒಮಿಕ್ರಾನ್​ ನಿಯಂತ್ರಣಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸೋಮವಾರದಿಂದ 3 ದಿನ ಸಿಎಂ ಪ್ರವಾಸ; ಕುಟುಂಬ ಸಮೇತರಾಗಿ ಕಾಶಿ, ಅಯೋಧ್ಯೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬೊಮ್ಮಾಯಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್