AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ

ಮಾರ್ಚ್​ 1ರಂದು ಹಾವೇರಿ ಮೂಲದ ನವೀನ್​ ಖಾರ್ಕೀವ್​​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಬಲಿಯಾಗಿದ್ದರು. ಮುಂಜಾನೆ ಎದ್ದು ತಿಂಡಿ ತರಲೆಂದು ತಾವಿದ್ದ ಬಂಕರ್​ನಿಂದ ಸ್ವಲ್ಪವೇ ದೂರದಲ್ಲಿದ್ದ ಸೂಪರ್​ ಮಾರ್ಕೆಟ್​​ಗೆ ಹೋಗಿದ್ದ ನವೀನ್​ ಮೃತಪಟ್ಟಿದ್ದರು.

Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 02, 2022 | 5:20 PM

Share

ಉಕ್ರೇನ್​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪಂಜಾಬ್​​ ಮೂಲದ ಚಂದನ್ ಜಿಂದಾಲ್ (22) ಮೃತ ಯುವಕ. ಈತ ಉಕ್ರೇನ್​​(Ukraine)ನಲ್ಲಿರುವ ವಿನ್ನಿಟ್ಸಿಯಾ ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್​ ಮಾಡುತ್ತಿದ್ದ. ಚಂದನ್​​ಗೆ ಇಸ್ಕೆಮಿಕ್ ಸ್ಟ್ರೋಕ್ ಆಗಿತ್ತು(ಅಂದರೆ ಮಿದುಳಿಗೆ ರಕ್ತ ಪೂರೈಕೆ ಸರಿಯಾಗಿ ಆಗದಾಗ ಉಂಟಾಗುವ ಪಾರ್ಶ್ವವಾಯು​).

ಪಂಜಾಬ್​ನ ಬರ್ನಾಲಾದವರಾದ ಚಂದನ್​ ಜಿಂದಾಲ್​ಗೆ ಪಾರ್ಶವಾಯು ಉಂಟಾಗಿ ಅವರನ್ನು ವಿನ್ನಿಟ್ಸಿಯಾದ ಆಸ್ಪತ್ರೆಯ ತುರ್ತುಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.  ಅವರ ಕುಟುಂಬಕ್ಕೂ ಈಗಾಗಲೇ ವಿಷಯ ತಿಳಿಸಲಾಗಿದ್ದು, ಚಂದನ್ ಮೃತದೇಹವನ್ನು ವಾಪಸ್​ ತರಲು ಸಹಾಯ ಮಾಡುವಂತೆ ಅವರ ತಂದೆ, ಕೇಂದ್ರ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ. ರಷ್ಯಾ ಆಕ್ರಮಣಕ್ಕೆ ಒಳಗಾಗಿರುವ ಉಕ್ರೇನ್​​ನಲ್ಲಿ ಮೃತಪಡುತ್ತಿರುವ ಎರಡನೇ ವಿದ್ಯಾರ್ಥಿ ಚಂದನ್​. ಹಾಗಂತ ಇವರು ರಷ್ಯಾದ ದಾಳಿಗೆ ಬಲಿಯಾಗಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಮಾರ್ಚ್​ 1ರಂದು ಹಾವೇರಿ ಮೂಲದ ನವೀನ್​ ಖಾರ್ಕೀವ್​​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಬಲಿಯಾಗಿದ್ದರು. ಮುಂಜಾನೆ ಎದ್ದು ತಿಂಡಿ ತರಲೆಂದು ತಾವಿದ್ದ ಬಂಕರ್​ನಿಂದ ಸ್ವಲ್ಪವೇ ದೂರದಲ್ಲಿದ್ದ ಸೂಪರ್​ ಮಾರ್ಕೆಟ್​​ಗೆ ಹೋಗಿದ್ದ ನವೀನ್​ ಮೃತಪಟ್ಟಿದ್ದರು. ಅವರ ಮೃತದೇಹವನ್ನೂ ವಾಪಸ್​ ತರುವ ಪ್ರಯತ್ನಗಳು ನಡೆಯುತ್ತಿವೆ. ಕೊನೇಬಾರಿಗೆ ತಮ್ಮ ಮಗನ ಮುಖ ನೋಡಬೇಕು ಎಂದು ನವೀನ್​ ಕುಟುಂಬದವರು ದುಃಖಿಸುತ್ತಿದ್ದಾರೆ.

ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಆಪರೇಶನ್​ ಗಂಗಾ ಪ್ರಾರಂಭಿಸಿದ್ದು, ಇದಕ್ಕೆ ಭಾರತೀಯ ವಾಯುಸೇನೆಯೂ ಸಾಥ್​ ನೀಡಿದೆ. ಉಕ್ರೇನ್​​ನಲ್ಲಿರುವ ಪ್ರತಿಯೊಬ್ಬ ಭಾರತೀಯನನ್ನೂ ವಾಪಸ್ ಕರೆತರುವವರೆಗೆ ವಿಶ್ರಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇನ್ನು ಮುಂದೆ ರಷ್ಯಾ ಗಡಿಯ ಮೂಲಕವೂ ಭಾರತೀಯರನ್ನು ಸ್ಥಳಾಂತರ ಮಾಡಲು ಅನುಮತಿ ಸಿಕ್ಕಿದ್ದು, ಕಾರ್ಯಾಚರಣೆ ಇನ್ನಷ್ಟು ಚುರುಕಾಗಿ ನಡೆಯಲಿದೆ.

ಇದನ್ನೂ ಓದಿ: ಅಣು ಯುದ್ಧದ ಭೀತಿ ವ್ಯಕ್ತಪಡಿಸ್ತಾ ಹಾಲಿ​ ಅಧ್ಯಕ್ಷ ಝೆಲೆನ್​ಸ್ಕಿ ಪದಚ್ಯುತಿಗೆ ರಷ್ಯಾ ಹುನ್ನಾರ ನಡೆಸಿದೆ -ಉಕ್ರೇನ್ ಆತಂಕ

Published On - 5:03 pm, Wed, 2 March 22

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ