AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ

ಮಾರ್ಚ್​ 1ರಂದು ಹಾವೇರಿ ಮೂಲದ ನವೀನ್​ ಖಾರ್ಕೀವ್​​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಬಲಿಯಾಗಿದ್ದರು. ಮುಂಜಾನೆ ಎದ್ದು ತಿಂಡಿ ತರಲೆಂದು ತಾವಿದ್ದ ಬಂಕರ್​ನಿಂದ ಸ್ವಲ್ಪವೇ ದೂರದಲ್ಲಿದ್ದ ಸೂಪರ್​ ಮಾರ್ಕೆಟ್​​ಗೆ ಹೋಗಿದ್ದ ನವೀನ್​ ಮೃತಪಟ್ಟಿದ್ದರು.

Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 02, 2022 | 5:20 PM

Share

ಉಕ್ರೇನ್​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪಂಜಾಬ್​​ ಮೂಲದ ಚಂದನ್ ಜಿಂದಾಲ್ (22) ಮೃತ ಯುವಕ. ಈತ ಉಕ್ರೇನ್​​(Ukraine)ನಲ್ಲಿರುವ ವಿನ್ನಿಟ್ಸಿಯಾ ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಕೋರ್ಸ್​ ಮಾಡುತ್ತಿದ್ದ. ಚಂದನ್​​ಗೆ ಇಸ್ಕೆಮಿಕ್ ಸ್ಟ್ರೋಕ್ ಆಗಿತ್ತು(ಅಂದರೆ ಮಿದುಳಿಗೆ ರಕ್ತ ಪೂರೈಕೆ ಸರಿಯಾಗಿ ಆಗದಾಗ ಉಂಟಾಗುವ ಪಾರ್ಶ್ವವಾಯು​).

ಪಂಜಾಬ್​ನ ಬರ್ನಾಲಾದವರಾದ ಚಂದನ್​ ಜಿಂದಾಲ್​ಗೆ ಪಾರ್ಶವಾಯು ಉಂಟಾಗಿ ಅವರನ್ನು ವಿನ್ನಿಟ್ಸಿಯಾದ ಆಸ್ಪತ್ರೆಯ ತುರ್ತುಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.  ಅವರ ಕುಟುಂಬಕ್ಕೂ ಈಗಾಗಲೇ ವಿಷಯ ತಿಳಿಸಲಾಗಿದ್ದು, ಚಂದನ್ ಮೃತದೇಹವನ್ನು ವಾಪಸ್​ ತರಲು ಸಹಾಯ ಮಾಡುವಂತೆ ಅವರ ತಂದೆ, ಕೇಂದ್ರ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ. ರಷ್ಯಾ ಆಕ್ರಮಣಕ್ಕೆ ಒಳಗಾಗಿರುವ ಉಕ್ರೇನ್​​ನಲ್ಲಿ ಮೃತಪಡುತ್ತಿರುವ ಎರಡನೇ ವಿದ್ಯಾರ್ಥಿ ಚಂದನ್​. ಹಾಗಂತ ಇವರು ರಷ್ಯಾದ ದಾಳಿಗೆ ಬಲಿಯಾಗಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಮಾರ್ಚ್​ 1ರಂದು ಹಾವೇರಿ ಮೂಲದ ನವೀನ್​ ಖಾರ್ಕೀವ್​​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಬಲಿಯಾಗಿದ್ದರು. ಮುಂಜಾನೆ ಎದ್ದು ತಿಂಡಿ ತರಲೆಂದು ತಾವಿದ್ದ ಬಂಕರ್​ನಿಂದ ಸ್ವಲ್ಪವೇ ದೂರದಲ್ಲಿದ್ದ ಸೂಪರ್​ ಮಾರ್ಕೆಟ್​​ಗೆ ಹೋಗಿದ್ದ ನವೀನ್​ ಮೃತಪಟ್ಟಿದ್ದರು. ಅವರ ಮೃತದೇಹವನ್ನೂ ವಾಪಸ್​ ತರುವ ಪ್ರಯತ್ನಗಳು ನಡೆಯುತ್ತಿವೆ. ಕೊನೇಬಾರಿಗೆ ತಮ್ಮ ಮಗನ ಮುಖ ನೋಡಬೇಕು ಎಂದು ನವೀನ್​ ಕುಟುಂಬದವರು ದುಃಖಿಸುತ್ತಿದ್ದಾರೆ.

ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಆಪರೇಶನ್​ ಗಂಗಾ ಪ್ರಾರಂಭಿಸಿದ್ದು, ಇದಕ್ಕೆ ಭಾರತೀಯ ವಾಯುಸೇನೆಯೂ ಸಾಥ್​ ನೀಡಿದೆ. ಉಕ್ರೇನ್​​ನಲ್ಲಿರುವ ಪ್ರತಿಯೊಬ್ಬ ಭಾರತೀಯನನ್ನೂ ವಾಪಸ್ ಕರೆತರುವವರೆಗೆ ವಿಶ್ರಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇನ್ನು ಮುಂದೆ ರಷ್ಯಾ ಗಡಿಯ ಮೂಲಕವೂ ಭಾರತೀಯರನ್ನು ಸ್ಥಳಾಂತರ ಮಾಡಲು ಅನುಮತಿ ಸಿಕ್ಕಿದ್ದು, ಕಾರ್ಯಾಚರಣೆ ಇನ್ನಷ್ಟು ಚುರುಕಾಗಿ ನಡೆಯಲಿದೆ.

ಇದನ್ನೂ ಓದಿ: ಅಣು ಯುದ್ಧದ ಭೀತಿ ವ್ಯಕ್ತಪಡಿಸ್ತಾ ಹಾಲಿ​ ಅಧ್ಯಕ್ಷ ಝೆಲೆನ್​ಸ್ಕಿ ಪದಚ್ಯುತಿಗೆ ರಷ್ಯಾ ಹುನ್ನಾರ ನಡೆಸಿದೆ -ಉಕ್ರೇನ್ ಆತಂಕ

Published On - 5:03 pm, Wed, 2 March 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?