AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್​ ಬಳಿಕ ಇನ್ನೊಂದು ಮದುವೆಯಾಗುವುದು ಕೌಟುಂಬಿಕ ದೌರ್ಜನ್ಯವಲ್ಲ; ಮಹಿಳೆಯ ಅರ್ಜಿ ವಜಾಗೊಳಿಸಿ, ತೀರ್ಪು ನೀಡಿದ ಬಾಂಬೆ ಹೈಕೋರ್ಟ್​

ಮಾಜಿ ಪತಿ ಎರಡನೇ ಮದುವೆಯಾಗುತ್ತಿದ್ದಂತೆ ಇತ್ತು ಈ ಮಹಿಳೆ ಮತ್ತೆ ಕೋರ್ಟ್ ಮೆಟ್ಟಿಲೇರಿ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ಮಾಜಿ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಡಿವೋರ್ಸ್​ ಬಳಿಕ ಇನ್ನೊಂದು ಮದುವೆಯಾಗುವುದು ಕೌಟುಂಬಿಕ ದೌರ್ಜನ್ಯವಲ್ಲ; ಮಹಿಳೆಯ ಅರ್ಜಿ ವಜಾಗೊಳಿಸಿ, ತೀರ್ಪು ನೀಡಿದ ಬಾಂಬೆ ಹೈಕೋರ್ಟ್​
ಬಾಂಬೆ ಹೈಕೋರ್ಟ್​
TV9 Web
| Edited By: |

Updated on:Aug 19, 2021 | 4:49 PM

Share

ಒಂದು ದಂಪತಿ ವಿಚ್ಛೇದನ (Divorce)ವಾದ ಬಳಿಕ, ಆ ಪತಿ ಇನ್ನೊಬ್ಬಳನ್ನು ಮದುವೆಯಾದರೆ ಅದು ಆತ ಮೊದಲ (ಮಾಜಿ) ಪತ್ನಿಯ ಮೇಲೆ ನಡೆಸುವ ಕೌಟುಂಬಿಕ ದೌರ್ಜನ್ಯ ಅಲ್ಲ. ಅದು ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005ರಡಿ ಕ್ರೌರ್ಯ ಎನ್ನಿಸಿಕೊಳ್ಳುವುದಿಲ್ಲ ಎಂದು ಬಾಂಬೆ ಹೈಕೋರ್ಟ್ (Bombay Highcourt)​​ನ ನಾಗ್ಪುರ ಪೀಠ ಇತ್ತೀಚೆಗೆ ತೀರ್ಪು ನೀಡಿದೆ. ಈ ಮೂಲಕ ವಿಚ್ಛೇದಿತ ಮಹಿಳೆಯೊಬ್ಬಳು ತನ್ನ ಪತಿಯ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದೆ.

ಈ ದಂಪತಿ 2011ರ ಮಾರ್ಚ್​ 13ರಲ್ಲಿ ವಿವಾಹವಾಗಿದ್ದರು. ಆದರೆ ಕೆಲವೇ ದಿನಗಳಲ್ಲಿ ಅವರಲ್ಲಿ ಅನೇಕ ವಿಚಾರಗಳಲ್ಲಿ ಭಿನ್ನಾಭಿಪ್ರಾy ಎದ್ದು, ವೈವಾಹಿಕ ಜೀವನ ಮುರಿದುಬಿತ್ತು. ಆಗ ಪತಿಯೇ ಮೊದಲು ಡಿವೋರ್ಸ್​ಗೆ ಅರ್ಜಿ ಹಾಕಿದ್ದರು. ಪತ್ನಿಯಿಂದ ಹಿಂಸೆಯಾಗುತ್ತಿದೆ ಎಂಬ ಅಂಶವನ್ನು ಉಲ್ಲೇಖಿಸಿ ಮುಂಬೈನ ಅಕೋಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಾ ಪ್ರಕ್ರಿಯೆ ಶುರು ಮಾಡಿದರು. ಎಲ್ಲವನ್ನೂ ಪರಿಶೀಲಿಸಿದ ಅಕೋಲಾ ನ್ಯಾಯಾಲಯ 2014ರ ಸೆಪ್ಟೆಂಬರ್​ 16ರಂದು ವಿಚ್ಛೇದನಕ್ಕೆ ಅನುಮತಿಸಿತು ಮತ್ತು ತನ್ನ ವೈವಾಹಿಕ ಹಕ್ಕುಗಳನ್ನು ಪತಿಯ ಕುಟುಂಬ ಪಾವತಿಸಬೇಕು ಎಂದು ಮಹಿಳೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಮೇಲೆ ಆ ಮಹಿಳೆ ಹೈಕೋರ್ಟ್​ ಮೊರೆ ಹೋದರು ಅಲ್ಲೂ ಕೂಡ ಹಿನ್ನಡೆಯಾಯಿತು..ಅದೂ ಸಾಲದೆಂಬಂತೆ ಸುಪ್ರೀಂಕೋರ್ಟ್​ ಮೆಟ್ಟಿಲು ಹತ್ತಿದರು. ಸರ್ವೋಚ್ಛ ನ್ಯಾಯಾಲಯ ಕೂಡ ಅಕೋಲಾ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿಯಿತು.

ಅಂತೂ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆ ವ್ಯಕ್ತಿ ಇನ್ನೊಂದು ಮದುವೆಯಾದರು. ಆದರೆ ಅವರು ಎರಡನೇ ಮದುವೆಯಾಗುತ್ತಿದ್ದಂತೆ ಇತ್ತು ಈ ಮಹಿಳೆ ಮತ್ತೆ ಕೋರ್ಟ್ ಮೆಟ್ಟಿಲೇರಿ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ಮಾಜಿ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅರ್ಜಿದಾರ ನಂ.1 (ತನ್ನ ವಿಚ್ಛೇದಿತ ಪತಿ) ಇದೀಗ ಮತ್ತೊಂದು ಮದುವೆಯಾಗುವ ಮೂಲಕ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ಕೌಟುಂಬಿಕ ದೌರ್ಜನ್ಯ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲ, ತನಗೆ ನೀಡಬೇಕಾದ ಮಾಸಿಕ ನಿರ್ವಹಣಾ ವೆಚ್ಚ, ಪರಿಹಾರ ಇತರ ಆರ್ಥಿಕ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದರು. ಇದಾಗಿದ್ದು 2016ರಲ್ಲಿ. ಆದರೆ ಮಹಿಳೆಯ ಈ ಅರ್ಜಿ ವಿರುದ್ಧ ಮಾಜಿ ಪತಿಯ ಕುಟುಂಬಸ್ಥರೂ ಪ್ರತಿ ಅರ್ಜಿ ಸಲ್ಲಿಸಿದ್ದರು. ಅಂಥ ಹುರುಳಿಲ್ಲದ ಅರ್ಜಿಗಳನ್ನು ಪರಿಗಣಿಸಬಾರದು..ವಿಚ್ಛೇದನ ಕೊಟ್ಟ ಮೇಲೆ ಬೇರೆ ಮದುವೆಯಾಗುವುದು ದೌರ್ಜನ್ಯ ಹೇಗಾಗುತ್ತದೆ ಎಂದೂ ಪ್ರಶ್ನಿಸಿದ್ದರು. ಅದರಂತೆ ಅಕೋಲಾ ಮ್ಯಾಜಿಸ್ಟ್ರೇಟ್​ ಮಹಿಳೆಯ ಅರ್ಜಿಯನ್ನು ವಜಾ ಮಾಡಿದ್ದರು. ಪಟ್ಟು ಬಿಡದ ಮಹಿಳೆ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು.

ತೀರ್ಪು ಏನು? ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನೀಶ್​ ಪಿಟಾಲೆ, ವಿಚ್ಛೇದನವಾದ ನಂತರ ಮತ್ತೊಂದು ಮದುವೆಯಾಗುವುದು ಕೌಟುಂಬಿಕ ದೌರ್ಜನ್ಯವಲ್ಲ. ಪ್ರಸ್ತುತ ಪ್ರಕರಣದಲ್ಲೂ ಸಹ ಪುರುಷ ಎರಡನೇ ಮದುವೆಯಾಗಿದ್ದನ್ನು ಮಾಜಿ ಪತ್ನಿಯ ಮೇಲೆ ನಡೆಸಿದ ಕೌಟುಂಬಿಕ ಹಿಂಸೆ ಎಂದು ಪರಿಗಣಿಸಿ, ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹೀಗೆಲ್ಲ ಅರ್ಜಿ ಸಲ್ಲಿಸುವುದೇ ತಪ್ಪು.. ಇದು ಕಾನೂನು ಪ್ರಕ್ರಿಯೆಯ ದುರುಪಯೋಗ ಮಾಡಿಕೊಂಡಂತಾಗಿದೆ. ನ್ಯಾಯ ವ್ಯವಸ್ಥೆಯ ಬಗ್ಗೆ ನಿಂದನೆ ತೋರಿದಂತಾಗಿದೆ ಎಂದು ಕಟುವಾಗಿಯೇ ಹೇಳಿದ್ದಾರೆ.

ಇದನ್ನೂ ಓದಿ:  ಇನ್ನೊಬ್ಬರ ಜತೆ  ಲಿವ್ ಇನ್ ಸಂಬಂಧದಲ್ಲಿರುವ ವಿವಾಹಿತ ಮಹಿಳೆಗೆ ರಕ್ಷಣೆ ನೀಡಿದರೆ ಅದು ಅಕ್ರಮ ಸಂಬಂಧವನ್ನು ಒಪ್ಪಿಕೊಂಡಂತೆ: ರಾಜಸ್ಥಾನ ಹೈಕೋರ್ಟ್

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

Published On - 4:47 pm, Thu, 19 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!