AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣ ಪತ್ತೆ, 1,761 ಸಾವು

Covid19 India: ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 ಮಂದಿ ಮೃತಪಟ್ಟಿದ್ದು 1,31,08,582 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,31,977 ಆಗಿದ್ದು, 12,71,29,113 ಮಂದಿ ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣ ಪತ್ತೆ, 1,761 ಸಾವು
ಕೊವಿಡ್ ಪರೀಕ್ಷೆ
Follow us
ರಶ್ಮಿ ಕಲ್ಲಕಟ್ಟ
|

Updated on:Apr 20, 2021 | 12:00 PM

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆಏರಿಕೆಯಾಗುತ್ತಲೇಇದ್ದುಕಳೆದ24ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. 1,761 ರೋಗಿಗಳು ಮೃತ ಪಟ್ಟಿದ್ದು 1,54,761 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಹೇಳಿದೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 ಮಂದಿ ಮೃತಪಟ್ಟಿದ್ದು 1,31,08,582 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,31,977 ಆಗಿದ್ದು, 12,71,29,113 ಮಂದಿ ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಮಹಾರಾ ,ಉತ್ತರ ಪ್ರದೇಶ,ದೆಹಲಿ ಮತ್ತುರಾಜಸ್ಥಾನ ಸೇರಿದಂತೆ 10 ರಾಜ್ಯಗಳಲ್ಲಿ ಹೊಸ ಕೊವಿಡ್ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು ಇದು ದೇಶದ ಶೇ 78.58 ರಷ್ಟಿದೆ ಎಂದುಕೇಂದ್ರ ಆರೋಗ್ಯ ಸಚವ ಹರ್ಷವರ್ಧನ್ ಅವರು ಸೋಮವಾರ ಹೇಳಿದ್ದಾರೆ. ಸಚಿವರು ಹೇಳಿದ 10 ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು,ಕರ್ನಾಟಕ,ಗುಜರಾತ್,ಕೇರಳ, ಮಧ್ಯಪ್ರದೇಶ ಮತ್ತು ಛತ್ತೀಸಗಡ ಇದೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 6 ದಿನಗಳ ಲಾಕ್ ಡೌನ್ ಘೋಷಿಸಿದ್ದು, ವಲಸೆಕಾರ್ಮಿಕರು ತಮ್ಮ ಊರುಗಳಿಗೆತೆರಳಲು ಬಸ್ ನಿಲ್ದಾಣ,ರೈಲ್ವೆ ನಿಲ್ದಾಣದಲ್ಲಿ ಗುಂಪುಸೇರಿರುವ ದೃಶ್ಯ ಸೋಮವಾರ ಕಂಡು ಬಂದಿದೆ.

ಮುಂಬೈಯಲ್ಲಿ ಶೇ 90ರಷ್ಟು ಪ್ರಕರಣ ಸ್ಲಂ ಪ್ರದೇಶಗಳಿಂದ ದೂರವಿರುವ ಪ್ರದೇಶಗಳಲ್ಲಿದೆ

ಮುಂಬೈನಲ್ಲಿರುವ ಕಟ್ಟಡ, ವಸತಿ ಸಮುಚ್ಛಯಗಳಲ್ಲಿ ಕೊವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಹೇಳಿದೆ. ಮುಂಬೈನಲ್ಲಿ ಸರಿ ಸುಮಾರು 87,000 ಸಕ್ರಿಯ ಪ್ರಕರಣಗಳಿದ್ದು ಈ ಪೈಕಿ ಶೇ 90 ರಷ್ಟು ಪ್ರಕರಣಗಳು ಕಟ್ಟಡಗಳಲ್ಲಿ ವಾಸಿಸುವವರಲ್ಲಿದೆ. ಅದೇ ವೇಳೆ ಸ್ಲಂಗಳಲ್ಲಿ ವಾಸಿಸುವ ಜನರಲ್ಲಿ ಶೇ10 ರಷ್ಟು ಮಂದಿಗೆ ಸೋಂಕು ತಗುಲಿದೆ ಎಂದು ಬಿಎಂಸಿ ಹೇಳಿದೆ .

ಬಿಎಂಸಿ ಬಿಡುಗಡೆ ಮಾಡಿದ ಏಪ್ರಿಲ್ 16ರ ಅಂಕಿ ಅಂಶಗಳ ಪ್ರಕಾರ ಮುಂಬೈನಲ್ಲಿರುವ 87,443 ಸಕ್ರಿಯ ಪ್ರಕರಣಗಳಲ್ಲಿ 79,032 ಸಕ್ರಿಯ ಪ್ರಕರಣ ಗಳು ಕಟ್ಟಡಗಳಲ್ಲಿ ವಾಸಿಸುವವರಲ್ಲಿದೆ. ಅದೇ ವೇಳೆ ಸ್ಲಂನಲ್ಲಿ 8,411ಪ್ರಕರಣಗಳು ಪತ್ತೆಯಾಗಿದೆ

ಕಳೆದ ವರ್ಷಾಂತ್ಯದಲ್ಲಿನ ಕೊವಿಡ್ ಪ್ರಕರಣ ಹೆಚ್ಚಳ ಮತ್ತು ಈಗಿರುವ ಎರಡನೇ ಅಲೆಯ ಕೊವಿಜ್ ಪ್ರಕರಣಗಳನ್ನು ಹೋಲಿಸಿ ನೋಡಿದರೆ , ಈ ಬಾರಿ ಆಕ್ಸಿಜನ್ ಅವಶ್ಯಕತೆ ಜಾಸ್ತಿ ಇದೆ. ಸಾವಿನ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಿಲ್ಲ .ಆದರೆ ಎರಡನೇ ಅಲೆಯಲ್ಲಿ ಯುವ ಪೀಳಿಗೆ ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ಸರ್ಕಾರದ ಕಾರ್ಯಪಡೆ ಅಭಿಪ್ರಾಯಪಟ್ಟಿದೆ

ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಬೇಡಿಕೆಯೊಡ್ಡಿದ್ದು ಕಾರ್ಯಪಡೆಯು ಉಲ್ಲೇಖಿಸಿದ ಆಸ್ಪತ್ರೆಯ ದತ್ತಾಂಶದ  ಪ್ರಕಾರ ಎರಡನೇ ಅಲೆಯಲ್ಲಿ ಶೇಕಡಾ 54.5 ರಷ್ಟು ರೋಗಿಗಳಿಗೆ ಚಿಕಿತ್ಸೆಯ ಸಮಯದಲ್ಲಿ ಪೂರಕ ಆಮ್ಲಜನಕದ ಅಗತ್ಯವಿದೆ.  ಕಳೆದ ವರ್ಷ ಸೆಪ್ಟೆಂಬರ್ ಮತ್ತು ನವೆಂಬರ್ ಅವಧಿಯಲ್ಲಿ ಇದು ಗರಿಷ್ಠ ಮಟ್ಟದಿಂದ 13.4 ಶೇಕಡಾ ಹೆಚ್ಚಳವಾಗಿದೆ ಎಂದು ದೇಶದಾದ್ಯಂತ 40 ಕೇಂದ್ರಗಳ ಅಂಕಿ ಅಂಶಗಳು ತಿಳಿಸಿವೆ.

ಇದನ್ನೂ ಓದಿ:  ಮೇ ತಿಂಗಳಲ್ಲಿ ಕೊವಿಡ್ ಗಂಭೀರ ಸ್ಥಿತಿ ತಲುಪಲಿದೆ, ತಿಂಗಳ ಕೊನೆಯಲ್ಲಿ ಕಡಿಮೆಯಾಗಬಹುದು: ಐಐಟಿ ಕಾನ್ಪುರ್ ಪ್ರೊಫೆಸರ್ 

(Second wave of the Coronavirus Pandemic 2.59 Lakh new Covid Cases 1761 Covid Deaths reported in India last 24hours)

Published On - 10:21 am, Tue, 20 April 21

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್