AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

"ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಮೆಚ್ಚುವವರು ತಾಲಿಬಾನಿ ಮನಸ್ಥಿತಿಯವರು ಎಂದು ನೀವು ಹೇಗೆ ಹೇಳಬಹುದು? ಇದನ್ನು ನಾವು ಒಪ್ಪುವುದಿಲ್ಲ ಎಂದು ಸೇನಾ ಮುಖವಾಣಿ 'ಸಾಮ್ನಾದ ಸಂಪಾದಕೀಯ ಹೇಳಿದೆ.

Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ
ಜಾವೇದ್ ಅಖ್ತರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 06, 2021 | 3:25 PM

Share

ಮುಂಬೈ: ಬರಹಗಾರ-ಸಾಹಿತಿ ಜಾವೇದ್ ಅಖ್ತರ್ (Javed Akhtar) ಆರ್​​ಎಸ್ಎಸ್​​ನ್ನು ತಾಲಿಬಾನ್ ಜತೆ ಹೋಲಿಸಿದ್ದಕ್ಕಾಗಿ ಕ್ಷಮೆ ಕೇಳಬೇಕೆಂದು ಮಹಾರಾಷ್ಟ್ರ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ.ಅದೇ ವೇಳೆ ಮುಂಬೈನಲ್ಲಿ ಅಖ್ತರ್ ಅವರ ಮನೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜುಹು ಪ್ರದೇಶದ ಇಸ್ಕಾನ್ ದೇವಾಲಯದ ಬಳಿ ಅಖ್ತರ್ ನಿವಾಸದ ಹೊರಗೆ ಸಾಕಷ್ಟು ಪೊಲೀಸ್ ಬಂದೋಬಸ್ತ್ ಇದೆ ಎಂದು ಅಧಿಕಾರಿ ಹೇಳಿದರು. ಮಹಿಳಾ ಕಾನ್ಸ್‌ಟೇಬಲ್‌ಗಳು ಸೇರಿದಂತೆ ಭದ್ರತಾ ಸಿಬ್ಬಂದಿಯನ್ನು ಮನೆಯ ಹೊರಗೆ ನಿಯೋಜಿಸಲಾಗಿದೆ. ಪ್ರಪಂಚದಾದ್ಯಂತ ಬಲಪಂಥೀಯರು ಅಸಾಧಾರಣವಾದ ಸಾಮ್ಯತೆಯನ್ನು ಹೊಂದಿದ್ದಾರೆ ಎಂದು ಅಖ್ತರ್ ಇತ್ತೀಚೆಗೆ ಸುದ್ದಿವಾಹಿನಿಯಲ್ಲಿ ಹೇಳಿದ್ದರು. “ತಾಲಿಬಾನ್ ಇಸ್ಲಾಮಿಕ್ ದೇಶವನ್ನು ಬಯಸುತ್ತದೆ. ಈ ಜನರು ಹಿಂದೂ ರಾಷ್ಟ್ರವನ್ನು ಮಾಡಲು ಬಯಸುತ್ತಾರೆ, ”ಎಂದು ಅಖ್ತರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್) ಹೆಸರಿಸದೆ ಹೇಳಿದ್ದರು.

ಬಿಜೆಪಿ ಶಾಸಕ ಮತ್ತು ರಾಜ್ಯ ಪಕ್ಷದ ವಕ್ತಾರ ರಾಮ್ ಕದಮ್ ಅಖ್ತರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಅವರು ತಮ್ಮ ಹೇಳಿಕೆಗೆ ಸಂಘದ ಪದಾಧಿಕಾರಿಗಳ ಕ್ಷಮೆ ಕೇಳುವವರೆಗೆ ಅಖ್ತರ್ ಅವರು ಭಾಗಿಯಾಗಿರುವ ಯಾವುದೇ ಚಿತ್ರವನ್ನು ದೇಶದಲ್ಲಿ ಪ್ರದರ್ಶಿಸಲು ಅನುಮತಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರ ಹಂಚಿಕೊಳ್ಳುವ ಶಿವಸೇನಾ, ಸೋಮವಾರ ಆರ್‌ಎಸ್‌ಎಸ್‌ ಅನ್ನು ತಾಲಿಬಾನ್‌ನೊಂದಿಗೆ ಹೋಲಿಸಿದ  ಅಖ್ತರ್ ಹೇಳಿಕೆ ಸಂಪೂರ್ಣ ತಪ್ಪು ಎಂದು ಹೇಳಿದೆ.

“ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಮೆಚ್ಚುವವರು ತಾಲಿಬಾನಿ ಮನಸ್ಥಿತಿಯವರು ಎಂದು ನೀವು ಹೇಗೆ ಹೇಳಬಹುದು? ಇದನ್ನು ನಾವು ಒಪ್ಪುವುದಿಲ್ಲ ಎಂದು ಸೇನಾ ಮುಖವಾಣಿ ‘ಸಾಮ್ನಾದ ಸಂಪಾದಕೀಯ ಹೇಳಿದೆ.

ಇದನ್ನೂ ಓದಿ: ಪಂಜಶಿರ್​ ಹೋರಾಟ ಪಡೆಯ ವಕ್ತಾರ ಫಾಹಿಮ್​ ದಷ್ಟಿ ಸಾವು; ಮೂವರು ಪ್ರಮುಖ ನಾಯಕರನ್ನು ಕೊಂದ ತಾಲಿಬಾನ್​

ಇದನ್ನೂ ಓದಿ: ನಮ್ಮ ತಾಳ್ಮೆ ಪರೀಕ್ಷಿಸುತ್ತಿದ್ದೀರಿ: ನ್ಯಾಯಾಧಿಕರಣ ಸುಧಾರಣಾ ಕಾಯ್ದೆ ವಿಚಾರದಲ್ಲಿ ಕೇಂದ್ರಕ್ಕೆ ಸುಪ್ರೀಂಕೋರ್ಟ್ ತರಾಟೆ

(Security beefed up outside the residence of writer-lyricist Javed Akhtar in Mumbai )

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​