AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಧ್ಯಕ್ಷ ವಿಜಯ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆದರೆ ಆ ವ್ಯಕ್ತಿಯ ಮಾನಸಿ ಸ್ಥಿತಿ ಸರಿ ಇಲ್ಲ ಎಂಬುದು ತಿಳಿದುಬಂದಿದೆ. ವಿಜಯ್ ಅವರ ಮನೆಯ ಟೆರೇಸ್ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಬಂಧಿಸಿದರು.

ತಮಿಳು ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ
ದಳಪತಿ ವಿಜಯ್
ನಯನಾ ರಾಜೀವ್
|

Updated on: Sep 19, 2025 | 11:49 AM

Share

ಚೆನ್ನೈ, ಸೆಪ್ಟೆಂಬರ್ 19: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ತಮಿಳು ನಟ ದಳಪತಿ ವಿಜಯ್(Thalapathy Vijay)ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆದರೆ ಆ ವ್ಯಕ್ತಿಯ ಮಾನಸಿ ಸ್ಥಿತಿ ಸರಿ ಇಲ್ಲ ಎಂಬುದು ತಿಳಿದುಬಂದಿದೆ.

ವಿಜಯ್ ಅವರ ಮನೆಯ ಟೆರೇಸ್ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಬಂಧಿಸಿದರು. ನಂತರ ಪೊಲೀಸರಿಗೆ ಒಪ್ಪಿಸಲಾಯಿತು. ಮೂಲಗಳ ಪ್ರಕಾರ, ಆತ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ವೇಲಾಚೇರಿಯಲ್ಲಿ ತಮ್ಮ ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದ. ಘಟನೆಯ ನಂತರ, ಅವರನ್ನು ಸರ್ಕಾರಿ ಆಶ್ರಯ ತಾಣಕ್ಕೆ ಕರೆದೊಯ್ಯಲಾಯಿತು.

ಅವರು ವಿಜಯ್ ಅವರ ನಿವಾಸಕ್ಕೆ ಹೇಗೆ ಪ್ರವೇಶಿಸಿದರು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ, ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿರುವ ನೀಲಂಕಾರೈನಲ್ಲಿರುವ ವಿಜಯ್ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ ಬಂದಿತ್ತು. ನಟ-ರಾಜಕಾರಣಿಯ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಬೆಳಗ್ಗೆ 5.20 ರ ಸುಮಾರಿಗೆ ಕರೆ ಮಾಡಲಾಗಿತ್ತು.

ಮತ್ತಷ್ಟು ಓದಿ: ತಾವು ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ವಿಚಾರವಾಗಿ ಅಚ್ಚರಿಯ ಹೇಳಿಕೆ

ಬೆದರಿಕೆ ಬಂದ ಕೂಡಲೇ, ಮೂವರು ಬಾಂಬ್ ನಿಷ್ಕ್ರಿಯ ದಳದ ತಜ್ಞರು ಮತ್ತು ಸ್ನಿಫರ್ ನಾಯಿಯನ್ನು ವಿಜಯ್ ಅವರ ನಿವಾಸಕ್ಕೆ ಕಳುಹಿಸಲಾಯಿತು. ಸುಮಾರು ಒಂದು ಗಂಟೆ ಪರಿಶೀಲನೆಯ ನಂತರ, ಸ್ಥಳದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಎಂದು ಬಾಂಬ್ ನಿಷ್ಕ್ರಿಯ ದಳ ದೃಢಪಡಿಸಿದೆ. ಅಧಿಕಾರಿಗಳು ಇದನ್ನು ಹುಸಿ ಬಾಂಬ್ ಬೆದರಿಕೆ ಎಂದು ತಿಳಿಸಿದ್ದಾರೆ.

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ