AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

President Security Breach: ರಾಷ್ಟ್ರಪತಿ ದ್ರೌಪದಿ ಮುರ್ಮು ಪಾದ ಸ್ಪರ್ಶಿಸಲು ಯತ್ನಿಸಿದ ಸರ್ಕಾರಿ ಇಂಜಿನಿಯರ್ ಅಮಾನತು

ಜನವರಿ 4 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ ಮತ್ತು ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಕ್ಕಾಗಿ ರಾಜಸ್ಥಾನದ ಸರ್ಕಾರಿ ಇಂಜಿನಿಯರ್​​ನ್ನು ಅಮಾನತುಗೊಳಿಸಲಾಯಿತು.

President Security Breach: ರಾಷ್ಟ್ರಪತಿ ದ್ರೌಪದಿ ಮುರ್ಮು ಪಾದ ಸ್ಪರ್ಶಿಸಲು ಯತ್ನಿಸಿದ ಸರ್ಕಾರಿ ಇಂಜಿನಿಯರ್ ಅಮಾನತು
Draupadi MurmuImage Credit source: BW
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 14, 2023 | 11:43 AM

ರಾಜಸ್ಥಾನ: ಜನವರಿ 4ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರ ಭದ್ರತಾ ಪ್ರೋಟೋಕಾಲ್ (Security Breach) ಅನ್ನು ಉಲ್ಲಂಘಿಸಿದ ಮತ್ತು ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಕ್ಕಾಗಿ ಶುಕ್ರವಾರ, ಜನವರಿ 13 ರಂದು ರಾಜಸ್ಥಾನದ ಸರ್ಕಾರಿ ಇಂಜಿನಿಯರ್​​ನ್ನು ಅಮಾನತುಗೊಳಿಸಲಾಯಿತು. ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ವಿಭಾಗವು ಇಂಜಿನಿಯರ್ ಅನ್ನು ಅಮಾನತುಗೊಳಿಸಿತು.

ಪಿಎಚ್‌ಇಡಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ಅಂಬಾ ಸಿಯೋಲ್ ಅವರು ಜನವರಿ 4 ರಂದು ರೋಹೆತ್‌ನಲ್ಲಿ ನಡೆದ ಸ್ಕೌಟ್ ಗೈಡ್ ಜಾಂಬೋರಿಯ ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಪಾದಗಳನ್ನು ಮುಟ್ಟುವ ಪ್ರಯತ್ನವನ್ನು ಮಾಡುವ ಮೂಲಕ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ, ಆದ್ದರಿಂದ ರಾಜಸ್ಥಾನದ ನಾಗರಿಕ ಸೇವಾ ನಿಯಮದ ಅಡಿಯಲ್ಲಿ ಅಧಿಕಾರದಿಂದ ಅಮಾನತು ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಇಂಜಿನಿಯರ್ (ಆಡಳಿತ), PHED ರ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:PM Modi Security Breach: ಹುಬ್ಬಳ್ಳಿಯಲ್ಲಿ ಪ್ರಧಾನಿ ರೋಡ್‌ ಶೋ ವೇಳೆ ಭದ್ರತಾಲೋಪ, ಅಂಗ ರಕ್ಷಕರನ್ನು ತಳ್ಳಿ ಮೋದಿ ಸಮೀಪಕ್ಕೆ ತೆರಳಿದ ಬಾಲಕ

ನೀರಿನ ವ್ಯವಸ್ಥೆಯನ್ನು ನೋಡಿಕೊಳ್ಳಲು ಸಿಯೋಲ್ ಸ್ಥಳದಲ್ಲಿಯೇ ಇದ್ದರು. ಆದರೆ ರಾಷ್ಟ್ರಪತಿಗಳ ಭದ್ರತಾ ಗ್ರಿಡ್ ಅನ್ನು ಉಲ್ಲಂಘಿಸಿ, ಅವರು ರಾಷ್ಟ್ರಪತಿಯವರನ್ನು ಸ್ವಾಗತಿಸಲು ಅಲ್ಲಿದ್ದ ಅಧಿಕಾರಿಗಳಿಂತ ಮೊದಲೇ ಹೋಗಿ ಅವರ ಪಾದವನ್ನು ಸ್ಪರ್ಶ ಮಾಡಿದ್ದಾರೆ.

ರಾಷ್ಟ್ರಪತಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದಂತೆ ಅಂಬಾ ಸಿಯೋಲ್ ಹಠಾತ್ ಅವರ ಬಳಿಗೆ ಬಂದಿದ್ದು, ಪಾದ ಸ್ಪರ್ಶಿಸಲು ಪ್ರಯತ್ನಿಸಿದ್ದಾರೆ, ಆದರೆ ಅಧ್ಯಕ್ಷರ ಭದ್ರತೆಯಿಂದ ತಡೆದಿದ್ದಾರೆ. ಸ್ಥಳೀಯ ಪೊಲೀಸರು ಔಪಚಾರಿಕ ವಿಚಾರಣೆಯ ನಂತರ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರಪತಿಗಳ ಭದ್ರತೆಯಲ್ಲಿ ಗಂಭೀರ ಲೋಪವಾಗಿದೆ ಎಂದು ಪರಿಗಣಿಸಿ ರಾಜಸ್ಥಾನ ಪೊಲೀಸರಿಂದ ವರದಿ ನೀಡಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ