Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್
ಜಿ20 ಶೃಂಗಸಭೆ
Follow us
ರಶ್ಮಿ ಕಲ್ಲಕಟ್ಟ
|

Updated on: May 25, 2023 | 3:30 PM

ಜಮ್ಮು ಮತ್ತು ಕಾಶ್ಮೀರದಲ್ಲಿ( Jammu and Kashmir) ನಡೆದ ಜಿ20 (G20 )ಸಮ್ಮೇಳನಕ್ಕೆ ವಿದೇಶಿ ಪ್ರತಿನಿಧಿಗಳು ತಂಗುವ ಹೋಟೆಲ್‌ಗಳು ಹಾಗೂ ಅವರು ಭೇಟಿ ನೀಡುವ ಸ್ಥಳಗಳ ಬಳಿ ಹೆಚ್ಚಿನ ಭದ್ರತೆ ನೀಡಲಾಗಿತ್ತು.ಜಿ 20 ಪ್ರವಾಸೋದ್ಯಮ ಸಮ್ಮೇಳನಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಚು (Terror Plot) ಬಯಲಾಗಿದ ಹಿನ್ನಲೆಯಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿತ್ತು. ಚೀನಾ ಮತ್ತು ಪಾಕಿಸ್ತಾನದ ಷಡ್ಯಂತ್ರವನ್ನು ಗ್ರಹಿಸಿದ ಗುಪ್ತಚರರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದ್ದರು. ಎನ್​​ಎಸ್​ಜಿ  ಮತ್ತು ಮಾರ್ಕೋಸ್ನಂತಹ ಬಲಿಷ್ಠ ಭದ್ರತಾ ಪಡೆಗಳನ್ನು ಇಲ್ಲಿ ನಿಯೋಜಿಸಿದ್ದು ಶ್ರೀನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ. ಪ್ರತಿ ಚಲನೆಯನ್ನು ಗ್ರಹಿಸಿದ NSG ಮತ್ತು ಮಾರ್ಕೋಸ್ (ಜಲ ಯುದ್ಧ ವೀರರು) ಪ್ರಸ್ತುತ ಪ್ರದೇಶದ ಮೇಲೆ ಹಿಡಿತ ಸಾಧಿಸಿದರು.

ಗುಲ್ಮಾರ್ಗ್‌ನಲ್ಲಿ ವಿದೇಶಿ ಪ್ರತಿನಿಧಿಗಳು ತಂಗಿದ್ದ ಹೋಟೆಲ್‌ ಮೇಲೆ ಉಗ್ರರು ದಾಳಿ ಸಂಚು ಹೂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭಿಸಿದ ಕೂಡಲೇ ಜಿ20 ಪ್ರವಾಸೋದ್ಯಮ ಪ್ರತಿನಿಧಿಗಳು ತಂಗಿರುವ ಹೋಟೆಲ್‌ನ ಸ್ಥಳವನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿG20 Meeting: ಶ್ರೀನಗರದಲ್ಲಿ ಜಿ20 ಸಭೆ, ಉಗ್ರರ ದಾಳಿಯ ಎಚ್ಚರಿಕೆ ಹಿನ್ನೆಲೆ ಗಡಿಯಲ್ಲಿ ಬಿಗಿ ಬಂದೋಬಸ್ತ್​

ಪಾಕಿಸ್ತಾನದಿಂದ ಭಯೋತ್ಪಾದನಾ ಸಂಚು

ಗುಲ್ಮಾರ್ಗ್‌ನಲ್ಲಿ ಮುಂಬೈ ಮಾದರಿಯ ದಾಳಿ ನಡೆಸಲು ಪಾಕಿಸ್ತಾನದ ಭಯೋತ್ಪಾದಕರು ಸಂಚು ರೂಪಿಸಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮೇ 22- 24ರವರೆಗೆ ಶ್ರೀನಗರದಲ್ಲಿ ಜಿ20 ಶೃಂಗಸಭೆ ನಡೆದಿದೆ. ಸುಮಾರು 60 ದೇಶಗಳ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್