AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಜಿ20 ಸಮ್ಮೇಳನಕ್ಕೆ ಮುನ್ನ ಉಗ್ರ ದಾಳಿಗೆ ಸಂಚು ನಡೆಸಿತ್ತು ಪಾಕ್
ಜಿ20 ಶೃಂಗಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2023 | 3:30 PM

Share

ಜಮ್ಮು ಮತ್ತು ಕಾಶ್ಮೀರದಲ್ಲಿ( Jammu and Kashmir) ನಡೆದ ಜಿ20 (G20 )ಸಮ್ಮೇಳನಕ್ಕೆ ವಿದೇಶಿ ಪ್ರತಿನಿಧಿಗಳು ತಂಗುವ ಹೋಟೆಲ್‌ಗಳು ಹಾಗೂ ಅವರು ಭೇಟಿ ನೀಡುವ ಸ್ಥಳಗಳ ಬಳಿ ಹೆಚ್ಚಿನ ಭದ್ರತೆ ನೀಡಲಾಗಿತ್ತು.ಜಿ 20 ಪ್ರವಾಸೋದ್ಯಮ ಸಮ್ಮೇಳನಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಚು (Terror Plot) ಬಯಲಾಗಿದ ಹಿನ್ನಲೆಯಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿತ್ತು. ಚೀನಾ ಮತ್ತು ಪಾಕಿಸ್ತಾನದ ಷಡ್ಯಂತ್ರವನ್ನು ಗ್ರಹಿಸಿದ ಗುಪ್ತಚರರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದ್ದರು. ಎನ್​​ಎಸ್​ಜಿ  ಮತ್ತು ಮಾರ್ಕೋಸ್ನಂತಹ ಬಲಿಷ್ಠ ಭದ್ರತಾ ಪಡೆಗಳನ್ನು ಇಲ್ಲಿ ನಿಯೋಜಿಸಿದ್ದು ಶ್ರೀನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

ಮುಂಬೈ ಮಾದರಿಯ ಭಯೋತ್ಪಾದಕ ದಾಳಿ ನಡೆಸುವ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಜಿ20 ಶೃಂಗಸಭೆಯನ್ನು ಯಶಸ್ವಿಗೊಳಿಸಿವೆ. ಪ್ರತಿ ಚಲನೆಯನ್ನು ಗ್ರಹಿಸಿದ NSG ಮತ್ತು ಮಾರ್ಕೋಸ್ (ಜಲ ಯುದ್ಧ ವೀರರು) ಪ್ರಸ್ತುತ ಪ್ರದೇಶದ ಮೇಲೆ ಹಿಡಿತ ಸಾಧಿಸಿದರು.

ಗುಲ್ಮಾರ್ಗ್‌ನಲ್ಲಿ ವಿದೇಶಿ ಪ್ರತಿನಿಧಿಗಳು ತಂಗಿದ್ದ ಹೋಟೆಲ್‌ ಮೇಲೆ ಉಗ್ರರು ದಾಳಿ ಸಂಚು ಹೂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭಿಸಿದ ಕೂಡಲೇ ಜಿ20 ಪ್ರವಾಸೋದ್ಯಮ ಪ್ರತಿನಿಧಿಗಳು ತಂಗಿರುವ ಹೋಟೆಲ್‌ನ ಸ್ಥಳವನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿG20 Meeting: ಶ್ರೀನಗರದಲ್ಲಿ ಜಿ20 ಸಭೆ, ಉಗ್ರರ ದಾಳಿಯ ಎಚ್ಚರಿಕೆ ಹಿನ್ನೆಲೆ ಗಡಿಯಲ್ಲಿ ಬಿಗಿ ಬಂದೋಬಸ್ತ್​

ಪಾಕಿಸ್ತಾನದಿಂದ ಭಯೋತ್ಪಾದನಾ ಸಂಚು

ಗುಲ್ಮಾರ್ಗ್‌ನಲ್ಲಿ ಮುಂಬೈ ಮಾದರಿಯ ದಾಳಿ ನಡೆಸಲು ಪಾಕಿಸ್ತಾನದ ಭಯೋತ್ಪಾದಕರು ಸಂಚು ರೂಪಿಸಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮೇ 22- 24ರವರೆಗೆ ಶ್ರೀನಗರದಲ್ಲಿ ಜಿ20 ಶೃಂಗಸಭೆ ನಡೆದಿದೆ. ಸುಮಾರು 60 ದೇಶಗಳ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ