AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಎನ್​​ಕೌಂಟರ್​​; ಒಟ್ಟು 5 ಭಯೋತ್ಪಾದಕರನ್ನು ಕೊಂದ ಭದ್ರತಾ ಪಡೆಗಳು

ಶನಿವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಹಾಸನಪೊರ ಬಿಜಭೇರದಲ್ಲಿ 53ವರ್ಷದ ಪೊಲೀಸ್ ಹೆಡ್​​ಕಾನ್​​ಸ್ಟೆಬಲ್​​ ಹತ್ಯೆಯಾಗಿತ್ತು. ಗನ್​ ಹಿಡಿದುಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ.

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಎನ್​​ಕೌಂಟರ್​​; ಒಟ್ಟು 5 ಭಯೋತ್ಪಾದಕರನ್ನು ಕೊಂದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 30, 2022 | 8:26 AM

Share

ಜಮ್ಮು-ಕಾಶ್ಮೀರದ ಬುದ್​ಗಾಂವ್​ ಮತ್ತು ಪುಲ್ವಾಮಾದಲ್ಲಿ ರಕ್ಷಣಾ ಪಡೆಗಳು (Security Forces)  ನಡೆಸಿದ ಎರಡು ಪ್ರತ್ಯೇಕ ಎನ್​ಕೌಂಟರ್​​ನಲ್ಲಿ 5 ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್​ ಇ ತೊಯ್ಬಾ ಮತ್ತು ಜೈಷ್​ ಇ ಮೊಹಮ್ಮದ್​ ಉಗ್ರಸಂಘಟನೆಗೆ ಸೇರಿದವರು ಎಂದು ಕಾಶ್ಮೀರದ ಐಜಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಈಗ ಸತ್ತ ಐದು ಉಗ್ರರರಲ್ಲಿ ಜೈಷ್​ ಇ ಮೊಹಮ್ಮದ್​ ಕಮಾಂಡರ್​ ಜಾಹೀದ್​ ವಾನಿ ಮತ್ತು ಪಾಕಿಸ್ತಾನದ ಉಗ್ರನೊಬ್ಬ ಸೇರಿದ್ದಾರೆ. ಈ ತಿಂಗಳಲ್ಲಿ ಒಟ್ಟು 11 ಎನ್​​ಕೌಂಟರ್​ ನಡೆಸಲಾಗಿದ್ದು, 21 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಅದರಲ್ಲಿ ಎಂಟು ಮಂದಿ ಪಾಕಿಸ್ತಾನದವರೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಶನಿವಾರ ಸಂಜೆ ಮೊದಲು ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯಿತು. ಅದು ರಾತ್ರಿ ಪೂರ್ತಿ ನಡೆದ ಎನ್​​ಕೌಂಟರ್ ಆಗಿದ್ದು, ಒಟ್ಟು ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರೇ ಆಗಿದ್ದಾರೆ.  ಅಷ್ಟೇ ಅಲ್ಲ, ಉಗ್ರರು ಅಡಗಿದ್ದ ಆ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದಾದ ಬಳಿಕ ಮಧ್ಯ ಕಾಶ್ಮೀರದ ಬುದ್​ ಗಾಂವ್​ನಲ್ಲಿ ನಡೆದ ಪ್ರತ್ಯೇಕ ಎನ್​ಕೌಂಟರ್​​ನಲ್ಲಿ ಲಷ್ಕರ್​  ಇ ತೊಯ್ಬಾ ಸಂಘಟನೆಯ ಉಗ್ರನೊಬ್ಬನ ಹತ್ಯೆಯಾಗಿದೆ. ಈತನಿಂದಲೂ ಸಹ ಹಲವು ಮಾದರಿಯ ಶಸ್ತ್ರಾಸ್ತ್ರಗಳನ್ನು, ಎಕೆ 56 ರೈಫಲ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿ ಹತ್ಯೆ ಶನಿವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಹಾಸನಪೊರ ಬಿಜಭೇರದಲ್ಲಿ 53ವರ್ಷದ ಪೊಲೀಸ್ ಹೆಡ್​​ಕಾನ್​​ಸ್ಟೆಬಲ್​​ ಹತ್ಯೆಯಾಗಿತ್ತು. ಗನ್​ ಹಿಡಿದುಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ. ಈ ಕಾನ್​ಸ್ಟೆಬಲ್​ ಹೆಸರು ಅಲಿ ಮೊಹಮ್ಮದ್​ ಗಾನಿ ಎಂದಾಗಿದ್ದು, ಇವರು ಬಿಜಭೇರದಲ್ಲಿರುವ ತಮ್ಮ ಮನೆ ಸಮೀಪವೇ ನಿಂತಿದ್ದಾಗ ಬಂದೂಕು ಧಾರಿ ಗುಂಡು ಹಾರಿಸಿದ್ದ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.

ಪೊಲೀಸ್ ಕಾನ್​ಸ್ಟೆಬಲ್​ ಹತ್ಯೆಯನ್ನು ಖಂಡಿಸಿ ಟ್ವೀಟ್ ಮಾಡಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಜನರಲ್​ ಮನೋಜ್​ ಸಿನ್ಹಾ, ಹೆಡ್​ಕಾನ್​ಸ್ಟೆಬಲ್​ ಅಲಿ ಮೊಹಮ್ಮದ್​ ಗಾನಿ ಪ್ರಾಣತ್ಯಾಗ ಸುಮ್ಮನೆ ವ್ಯರ್ಥವಾಗಲು ಬಿಡುವುದಿಲ್ಲ. ಅವರನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಖಂಡಿತ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದರು. ಹಾಗೇ, ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: H-1B Visa: ಯುಎಸ್​ ಪೌರತ್ವ ಮತ್ತು ವಲಸೆ ಸೇವೆಗಳಿಂದ ಎಚ್​- 1ಬಿ ವೀಸಾಗಳ ಆರಂಭಿಕ ನೋಂದಣಿ ಮಾರ್ಚ್ 1ರಂದು ಪ್ರಾರಂಭ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ