AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಎನ್​​ಕೌಂಟರ್​​; ಒಟ್ಟು 5 ಭಯೋತ್ಪಾದಕರನ್ನು ಕೊಂದ ಭದ್ರತಾ ಪಡೆಗಳು

ಶನಿವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಹಾಸನಪೊರ ಬಿಜಭೇರದಲ್ಲಿ 53ವರ್ಷದ ಪೊಲೀಸ್ ಹೆಡ್​​ಕಾನ್​​ಸ್ಟೆಬಲ್​​ ಹತ್ಯೆಯಾಗಿತ್ತು. ಗನ್​ ಹಿಡಿದುಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ.

ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಎನ್​​ಕೌಂಟರ್​​; ಒಟ್ಟು 5 ಭಯೋತ್ಪಾದಕರನ್ನು ಕೊಂದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 30, 2022 | 8:26 AM

Share

ಜಮ್ಮು-ಕಾಶ್ಮೀರದ ಬುದ್​ಗಾಂವ್​ ಮತ್ತು ಪುಲ್ವಾಮಾದಲ್ಲಿ ರಕ್ಷಣಾ ಪಡೆಗಳು (Security Forces)  ನಡೆಸಿದ ಎರಡು ಪ್ರತ್ಯೇಕ ಎನ್​ಕೌಂಟರ್​​ನಲ್ಲಿ 5 ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್​ ಇ ತೊಯ್ಬಾ ಮತ್ತು ಜೈಷ್​ ಇ ಮೊಹಮ್ಮದ್​ ಉಗ್ರಸಂಘಟನೆಗೆ ಸೇರಿದವರು ಎಂದು ಕಾಶ್ಮೀರದ ಐಜಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಈಗ ಸತ್ತ ಐದು ಉಗ್ರರರಲ್ಲಿ ಜೈಷ್​ ಇ ಮೊಹಮ್ಮದ್​ ಕಮಾಂಡರ್​ ಜಾಹೀದ್​ ವಾನಿ ಮತ್ತು ಪಾಕಿಸ್ತಾನದ ಉಗ್ರನೊಬ್ಬ ಸೇರಿದ್ದಾರೆ. ಈ ತಿಂಗಳಲ್ಲಿ ಒಟ್ಟು 11 ಎನ್​​ಕೌಂಟರ್​ ನಡೆಸಲಾಗಿದ್ದು, 21 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಅದರಲ್ಲಿ ಎಂಟು ಮಂದಿ ಪಾಕಿಸ್ತಾನದವರೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ಶನಿವಾರ ಸಂಜೆ ಮೊದಲು ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯಿತು. ಅದು ರಾತ್ರಿ ಪೂರ್ತಿ ನಡೆದ ಎನ್​​ಕೌಂಟರ್ ಆಗಿದ್ದು, ಒಟ್ಟು ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರೇ ಆಗಿದ್ದಾರೆ.  ಅಷ್ಟೇ ಅಲ್ಲ, ಉಗ್ರರು ಅಡಗಿದ್ದ ಆ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದಾದ ಬಳಿಕ ಮಧ್ಯ ಕಾಶ್ಮೀರದ ಬುದ್​ ಗಾಂವ್​ನಲ್ಲಿ ನಡೆದ ಪ್ರತ್ಯೇಕ ಎನ್​ಕೌಂಟರ್​​ನಲ್ಲಿ ಲಷ್ಕರ್​  ಇ ತೊಯ್ಬಾ ಸಂಘಟನೆಯ ಉಗ್ರನೊಬ್ಬನ ಹತ್ಯೆಯಾಗಿದೆ. ಈತನಿಂದಲೂ ಸಹ ಹಲವು ಮಾದರಿಯ ಶಸ್ತ್ರಾಸ್ತ್ರಗಳನ್ನು, ಎಕೆ 56 ರೈಫಲ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿ ಹತ್ಯೆ ಶನಿವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಹಾಸನಪೊರ ಬಿಜಭೇರದಲ್ಲಿ 53ವರ್ಷದ ಪೊಲೀಸ್ ಹೆಡ್​​ಕಾನ್​​ಸ್ಟೆಬಲ್​​ ಹತ್ಯೆಯಾಗಿತ್ತು. ಗನ್​ ಹಿಡಿದುಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ. ಈ ಕಾನ್​ಸ್ಟೆಬಲ್​ ಹೆಸರು ಅಲಿ ಮೊಹಮ್ಮದ್​ ಗಾನಿ ಎಂದಾಗಿದ್ದು, ಇವರು ಬಿಜಭೇರದಲ್ಲಿರುವ ತಮ್ಮ ಮನೆ ಸಮೀಪವೇ ನಿಂತಿದ್ದಾಗ ಬಂದೂಕು ಧಾರಿ ಗುಂಡು ಹಾರಿಸಿದ್ದ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು.

ಪೊಲೀಸ್ ಕಾನ್​ಸ್ಟೆಬಲ್​ ಹತ್ಯೆಯನ್ನು ಖಂಡಿಸಿ ಟ್ವೀಟ್ ಮಾಡಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಜನರಲ್​ ಮನೋಜ್​ ಸಿನ್ಹಾ, ಹೆಡ್​ಕಾನ್​ಸ್ಟೆಬಲ್​ ಅಲಿ ಮೊಹಮ್ಮದ್​ ಗಾನಿ ಪ್ರಾಣತ್ಯಾಗ ಸುಮ್ಮನೆ ವ್ಯರ್ಥವಾಗಲು ಬಿಡುವುದಿಲ್ಲ. ಅವರನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಖಂಡಿತ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದರು. ಹಾಗೇ, ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: H-1B Visa: ಯುಎಸ್​ ಪೌರತ್ವ ಮತ್ತು ವಲಸೆ ಸೇವೆಗಳಿಂದ ಎಚ್​- 1ಬಿ ವೀಸಾಗಳ ಆರಂಭಿಕ ನೋಂದಣಿ ಮಾರ್ಚ್ 1ರಂದು ಪ್ರಾರಂಭ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ