Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಲೂಟಿ ಮಾಡಿದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶ ಪಡಿಸಿದ ಭದ್ರತಾ ಪಡೆ

ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಖಮೆನ್ಲೋಕ್-ಗ್ವಾಲ್ತಾಬಿ, ವಾಕನ್ ಮತ್ತು ಶಾಂತಿಪುರ ರೇಖೆಗಳು ಮೈತಿ ಮತ್ತು ಬುಡಕಟ್ಟು ಕುಕಿ ಸಮುದಾಯಗಳ ಪ್ರತ್ಯೇಕ ಗ್ರಾಮಗಳಾಗಿವೆ ಎಂದು ಹೇಳಿಕೆ ತಿಳಿಸಿದೆ. ಗುಪ್ತಚರ ವರದಿಗಳು ರೇಖೆಗಳ ಎರಡೂ ಬದಿಗಳಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಆಯುಧ ಸಂಗ್ರಹವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮಣಿಪುರದಲ್ಲಿ ಲೂಟಿ ಮಾಡಿದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶ ಪಡಿಸಿದ ಭದ್ರತಾ ಪಡೆ
ಮಣಿಪುರದಲ್ಲಿ ಶಸ್ತ್ರಾಸ್ತ್ರ ವಶಕ್ಕೆ
Follow us
ರಶ್ಮಿ ಕಲ್ಲಕಟ್ಟ
|

Updated on: Oct 20, 2023 | 2:38 PM

ಇಂಫಾಲ್ ಅಕ್ಟೋಬರ್ 20: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur)  ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ಕಳೆದ ತಿಂಗಳು ಮೂರು ಕಾರ್ಯಾಚರಣೆಗಳಲ್ಲಿ 1085 ಬಾಂಬ್‌ಗಳು ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಜನರು ಪೊಲೀಸ್ ಠಾಣೆಗಳು ಮತ್ತು ಶಸ್ತ್ರಾಗಾರಗಳಿಂದ ಲೂಟಿ ಮಾಡಿದವುಗಳು ಎಂದು ರಕ್ಷಣಾ ಸಚಿವಾಲಯದ ( defence ministry) ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಖಾಮೆನ್ಲೋಕ್-ಗ್ವಾಲ್ತಾಬಿ, ವಾಕನ್ ಮತ್ತು ಶಾಂತಿಪುರ್ ಪರ್ವತಶ್ರೇಣಿಗಳಲ್ಲಿ ಮೂರು ಪ್ರಮುಖ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೊಹಿಮಾ (ನಾಗಾಲ್ಯಾಂಡ್) ಮೂಲದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅದರಲ್ಲಿ 18 ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, 1085 ಬಾಂಬ್‌ಗಳು, 14 ಸುಧಾರಿತ ಮೋರ್ಟಾರ್‌ಗಳು/ರಾಕೆಟ್ ಲಾಂಚರ್‌ಗಳು, ಆರು ರೈಫಲ್‌ಗಳು/ಪಿಸ್ತೂಲ್‌ಗಳು, ಒಂದು ಮಾರ್ಟರ್, 530 ಬಗೆಬಗೆಯ ಮದ್ದುಗುಂಡುಗಳು ಮತ್ತು 132 ಇತರ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು,ಗುರುವಾರ ಮಣಿಪುರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಖಮೆನ್ಲೋಕ್-ಗ್ವಾಲ್ತಾಬಿ, ವಾಕನ್ ಮತ್ತು ಶಾಂತಿಪುರ ರೇಖೆಗಳು ಮೈತಿ ಮತ್ತು ಬುಡಕಟ್ಟು ಕುಕಿ ಸಮುದಾಯಗಳ ಪ್ರತ್ಯೇಕ ಗ್ರಾಮಗಳಾಗಿವೆ ಎಂದು ಹೇಳಿಕೆ ತಿಳಿಸಿದೆ. ಗುಪ್ತಚರ ವರದಿಗಳು ರೇಖೆಗಳ ಎರಡೂ ಬದಿಗಳಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಆಯುಧ ಸಂಗ್ರಹವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇವುಗಳನ್ನು ದುರುದ್ದೇಶಪೂರಿತ ಪ್ರಯತ್ನಕ್ಕಾಗಿ ಸಂಗ್ರಹಿಸಲಾಗಿದೆ. ಭದ್ರತಾ ಪಡೆಗಳು ಗುಪ್ತಚರ ಒಳಹರಿವುಗಳನ್ನು ಗಮನಿಸಿದವು ಮತ್ತು ವ್ಯಾಪಕವಾದ ಕಣ್ಗಾವಲು ನಡೆಸಿತು. ದುಷ್ಕರ್ಮಿಗಳಿಂದ ಗುಂಡಿನ ಅಥವಾ ಬೆಂಕಿ ಹಚ್ಚುವ ಯಾವುದೇ ಪ್ರಯತ್ನಗಳನ್ನು ತಡೆಯುವ ಉದ್ದೇಶದಿಂದ ಗರಿಷ್ಠ ಆಯುಧಗಳನ್ನ ಮರುಪಡೆಯಲು ಅನೇಕ ಶೋಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಿತು ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್​ ಮೇಲೆ ಹೆಚ್ಚು ಆಸಕ್ತಿ : ರಾಹುಲ್ ಗಾಂಧಿ

ಮೇ 3 ರಂದು ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಕನಿಷ್ಠ 175 ಜನರು ಸಾವಿಗೀಡಾಗಿದ್ದು, 50,000 ಸ್ಥಳಾಂತರಗೊಂಡಿದ್ದಾರೆ. ಈ ಹೊತ್ತಲ್ಲಿ ಜನರ ಗುಂಪು 5669 ವಿಧದ ಶಸ್ತ್ರಾಸ್ತ್ರಗಳನ್ನು ಮತ್ತು ಸುಮಾರು 500,000 ಸುತ್ತು ಮದ್ದುಗುಂಡುಗಳನ್ನು ಪೊಲೀಸ್ ಠಾಣೆಗಳು ಮತ್ತು ಶಸ್ತ್ರಾಗಾರಗಳಿಂದ ಲೂಟಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಸುಮಾರು 1300ನ್ನು ಅಕ್ಟೋಬರ್ ಮೊದಲ ವಾರದವರೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೇನೆ, ಮಣಿಪುರ ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ