AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Aug 09, 2021 | 3:37 PM

Share

ಪಂಜಾಬ್​: ಇಲ್ಲಿನ ಅಮೃತಸರ್​​ನ ದಲೆಕೆ ಎಂಬ ಗ್ರಾಮದಲ್ಲಿ ತಿಂಡಿಯ ಬಾಕ್ಸ್​​ನಲ್ಲಿ (ಟಿಫಿನ್ ಬಾಕ್ಸ್​) ಐಇಡಿ (IED) ಪತ್ತೆಯಾಗಿದೆ. ಸ್ವಾತಂತ್ರ್ಯ ದಿನ ಕೆಲವೇ ದಿನ ಇರುವಾಗ ಹೀಗೆ ಮಗುವೊಂದರ ಟಿಫಿನ್ ಬಾಕ್ಸ್​ನಲ್ಲಿ ಐಇಡಿ ಕಾಣಿಸಿಕೊಂಡಿದ್ದು ತೀವ್ರ ಆತಂಕವನ್ನೂ ಸೃಷ್ಟಿಸಿತ್ತು. ಇದು ಉಗ್ರಕೃತ್ಯ ಎಂದು ಹೇಳಲಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾದಂತಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಂಪೂರ್ಣ ವಿವರಣೆಯನ್ನು ಪಂಜಾಬ್​ ಡಿಜಿಪಿ ದಿನಕರ್ ಗುಪ್ತಾ ನೀಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಈ ಐಇಡಿಯನ್ನು ಅಮೃತಸರ್​ನ ಈ ಹಳ್ಳಿಗೆ ಪೂರೈಸಲಾಗಿದೆ ಎಂದು ಭದ್ರತಾ ಪಡೆಗಳು ಶಂಕೆ ವ್ಯಕ್ತಪಡಿಸಿವೆ. ಮಗುವೊಂದರ ಬ್ಯಾಗ್​ನಲ್ಲಿದ್ದ ಟಿಫಿನ್​ ಬಾಕ್ಸ್​​ನಲ್ಲಿ ಐಇಡಿ ಪತ್ತೆಯಾಗಿದೆ. ಅದೇ ಬ್ಯಾಗ್​​ನಲ್ಲಿ 5 ಹ್ಯಾಂಡ್​ ಗ್ರೆನೇಡ್​ಗಳೂ ಇದ್ದವು ಎಂದು ಹೇಳಲಾಗಿದೆ. ಅದನ್ನು ಸದ್ಯ ನಿಷ್ಕ್ರಿಯಗೊಳಿಸಲಾಗಿದೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ಅದರಲ್ಲೂ ಇನ್ನೇನು ಕೆಲವೇ ದಿನಗಳಲ್ಲಿ ದೇಶದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಲಿದ್ದು, ಇಂಥ ಬೆದರಿಕೆಗಳು ಪದೇಪದೆ ಬರುತ್ತಲೇ ಇರುತ್ತವೆ. ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಾಸಿವೆ ಕಾಳುಗಳಂತೆ ಉದುರಿ ಬಿದ್ದ ಸಾವಿರಾರು ಜನ! ಮೈನವಿರೇಳಿಸುವ ಈ ವಿಡಿಯೋ ಮಿಸ್​ ಮಾಡ್ಕೋಬೇಡಿ​

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ; ಇಂದು ಸಂಜೆ 5.30ಕ್ಕೆ ವಿಡಿಯೊ ಸಂವಾದ

Published On - 2:04 pm, Mon, 9 August 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!