AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 09, 2021 | 3:37 PM

Share

ಪಂಜಾಬ್​: ಇಲ್ಲಿನ ಅಮೃತಸರ್​​ನ ದಲೆಕೆ ಎಂಬ ಗ್ರಾಮದಲ್ಲಿ ತಿಂಡಿಯ ಬಾಕ್ಸ್​​ನಲ್ಲಿ (ಟಿಫಿನ್ ಬಾಕ್ಸ್​) ಐಇಡಿ (IED) ಪತ್ತೆಯಾಗಿದೆ. ಸ್ವಾತಂತ್ರ್ಯ ದಿನ ಕೆಲವೇ ದಿನ ಇರುವಾಗ ಹೀಗೆ ಮಗುವೊಂದರ ಟಿಫಿನ್ ಬಾಕ್ಸ್​ನಲ್ಲಿ ಐಇಡಿ ಕಾಣಿಸಿಕೊಂಡಿದ್ದು ತೀವ್ರ ಆತಂಕವನ್ನೂ ಸೃಷ್ಟಿಸಿತ್ತು. ಇದು ಉಗ್ರಕೃತ್ಯ ಎಂದು ಹೇಳಲಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾದಂತಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಂಪೂರ್ಣ ವಿವರಣೆಯನ್ನು ಪಂಜಾಬ್​ ಡಿಜಿಪಿ ದಿನಕರ್ ಗುಪ್ತಾ ನೀಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಈ ಐಇಡಿಯನ್ನು ಅಮೃತಸರ್​ನ ಈ ಹಳ್ಳಿಗೆ ಪೂರೈಸಲಾಗಿದೆ ಎಂದು ಭದ್ರತಾ ಪಡೆಗಳು ಶಂಕೆ ವ್ಯಕ್ತಪಡಿಸಿವೆ. ಮಗುವೊಂದರ ಬ್ಯಾಗ್​ನಲ್ಲಿದ್ದ ಟಿಫಿನ್​ ಬಾಕ್ಸ್​​ನಲ್ಲಿ ಐಇಡಿ ಪತ್ತೆಯಾಗಿದೆ. ಅದೇ ಬ್ಯಾಗ್​​ನಲ್ಲಿ 5 ಹ್ಯಾಂಡ್​ ಗ್ರೆನೇಡ್​ಗಳೂ ಇದ್ದವು ಎಂದು ಹೇಳಲಾಗಿದೆ. ಅದನ್ನು ಸದ್ಯ ನಿಷ್ಕ್ರಿಯಗೊಳಿಸಲಾಗಿದೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ಅದರಲ್ಲೂ ಇನ್ನೇನು ಕೆಲವೇ ದಿನಗಳಲ್ಲಿ ದೇಶದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಲಿದ್ದು, ಇಂಥ ಬೆದರಿಕೆಗಳು ಪದೇಪದೆ ಬರುತ್ತಲೇ ಇರುತ್ತವೆ. ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಾಸಿವೆ ಕಾಳುಗಳಂತೆ ಉದುರಿ ಬಿದ್ದ ಸಾವಿರಾರು ಜನ! ಮೈನವಿರೇಳಿಸುವ ಈ ವಿಡಿಯೋ ಮಿಸ್​ ಮಾಡ್ಕೋಬೇಡಿ​

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ; ಇಂದು ಸಂಜೆ 5.30ಕ್ಕೆ ವಿಡಿಯೊ ಸಂವಾದ

Published On - 2:04 pm, Mon, 9 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ