AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ
ಜನರನ್ನು ರಕ್ಷಣೆ ಮಾಡುತ್ತಿರುವ ಫೋಟೋ
TV9 Web
| Edited By: |

Updated on: Nov 20, 2021 | 7:11 PM

Share

ಜಮ್ಮು-ಕಾಶ್ಮೀರದ  ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣವಿದೆ. ಈ ಮಧ್ಯೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ, ಶಾಲಾ ಮಕ್ಕಳೂ ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಅಂದಹಾಗೆ ಈ ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ.  ಕುಲಗಾಂವ್​​ನ ಅಶ್ಮುಂಜಿ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದವು. ಸೈನಿಕರು ಪ್ರದೇಶವನ್ನು ಸುತ್ತುವರಿದು ಹುಡುಕಾಟ ನಡೆಸುತ್ತಿದ್ದಂತೆ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಭದ್ರತಾ ಸಿಬ್ಬಂದಿಯೂ ಪ್ರತಿದಾಳಿ ನಡೆಸಲು ಶುರು ಮಾಡಿದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಒಂದೆಡೆ ಎನ್​ಕೌಂಟರ್​ ಶುರುವಾಗಿತ್ತು..ಇನ್ನೊಂದೆಡೆ ಅಲ್ಲಿದ್ದ ನಾಗರಿಕರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿತ್ತು ಎಂದೂ ತಿಳಿಸಿದ್ದಾರೆ.   ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಅಲಿಬಾಬ ಸೇರಿ ವಿವಿಧ ಕಂಪೆನಿಗಳಿಗೆ ಚೀನಾದಲ್ಲಿ ವಿಶ್ವಾಸ ಧಕ್ಕೆ ಪ್ರಕರಣದಲ್ಲಿ ಹೊಸದಾಗಿ ಭಾರೀ ದಂಡ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?