AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ
ಜನರನ್ನು ರಕ್ಷಣೆ ಮಾಡುತ್ತಿರುವ ಫೋಟೋ
TV9 Web
| Edited By: |

Updated on: Nov 20, 2021 | 7:11 PM

Share

ಜಮ್ಮು-ಕಾಶ್ಮೀರದ  ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣವಿದೆ. ಈ ಮಧ್ಯೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ, ಶಾಲಾ ಮಕ್ಕಳೂ ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಅಂದಹಾಗೆ ಈ ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ.  ಕುಲಗಾಂವ್​​ನ ಅಶ್ಮುಂಜಿ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದವು. ಸೈನಿಕರು ಪ್ರದೇಶವನ್ನು ಸುತ್ತುವರಿದು ಹುಡುಕಾಟ ನಡೆಸುತ್ತಿದ್ದಂತೆ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಭದ್ರತಾ ಸಿಬ್ಬಂದಿಯೂ ಪ್ರತಿದಾಳಿ ನಡೆಸಲು ಶುರು ಮಾಡಿದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಒಂದೆಡೆ ಎನ್​ಕೌಂಟರ್​ ಶುರುವಾಗಿತ್ತು..ಇನ್ನೊಂದೆಡೆ ಅಲ್ಲಿದ್ದ ನಾಗರಿಕರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿತ್ತು ಎಂದೂ ತಿಳಿಸಿದ್ದಾರೆ.   ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಅಲಿಬಾಬ ಸೇರಿ ವಿವಿಧ ಕಂಪೆನಿಗಳಿಗೆ ಚೀನಾದಲ್ಲಿ ವಿಶ್ವಾಸ ಧಕ್ಕೆ ಪ್ರಕರಣದಲ್ಲಿ ಹೊಸದಾಗಿ ಭಾರೀ ದಂಡ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ