AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದರು.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 04, 2022 | 10:17 AM

Share

ಜಮ್ಮು-ಕಾಶ್ಮೀರದ (Jammu Kashmir)ಪೂಂಚ್​ ಜಿಲ್ಲೆಯಲ್ಲಿ, ಗಡಿ ನಿಯಂತ್ರಣ ರೇಖೆ ಬಳಿಯೇ ಇರುವ ನೂರ್​ಕೋಟೆ ಹಳ್ಳಿಯಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಈ ಅಡಗುತಾಣಗಳಲ್ಲಿ ಚೈನೀಸ್ ಪಿಸ್ತೂಲ್​, ಎಕೆ 47 ರೈಫಲ್ಸ್​, ವಿವಿಧ ಮಾದರಿಯ ಗನ್​ಗಳು ಸೇರಿ ಹಲವು ಮಾರಕಾಸ್ತ್ರಗಳು ಇದ್ದವು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.  ಭಾನುವಾರ ಸಾಯಂಕಾಲ ಈ ದಾಳಿ ನಡೆದಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿ, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಮತ್ತು ರಾಖ್​​ ಹಾಜಿನ್​ ಎಂಬಲ್ಲಿ ಇನ್ನೊಬ್ಬಾತನನ್ನು ಅರೆಸ್ಟ್ ಮಾಡಿದ್ದರು. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಇವವರೆಲ್ಲ ಉಗ್ರರಿಗೆ ಸಾರಿಗೆ, ಸಂಪರ್ಕ ಮತ್ತಿತರ ವಿಚಾರಗಳಿಗೆ ನೆರವು ನೀಡುತ್ತಿದ್ದರು. ಇವರಿಂದಲೂ ಅಪಾರ ಪ್ರಮಾಣದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

Published On - 9:57 am, Mon, 4 April 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ