AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದರು.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 04, 2022 | 10:17 AM

Share

ಜಮ್ಮು-ಕಾಶ್ಮೀರದ (Jammu Kashmir)ಪೂಂಚ್​ ಜಿಲ್ಲೆಯಲ್ಲಿ, ಗಡಿ ನಿಯಂತ್ರಣ ರೇಖೆ ಬಳಿಯೇ ಇರುವ ನೂರ್​ಕೋಟೆ ಹಳ್ಳಿಯಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಈ ಅಡಗುತಾಣಗಳಲ್ಲಿ ಚೈನೀಸ್ ಪಿಸ್ತೂಲ್​, ಎಕೆ 47 ರೈಫಲ್ಸ್​, ವಿವಿಧ ಮಾದರಿಯ ಗನ್​ಗಳು ಸೇರಿ ಹಲವು ಮಾರಕಾಸ್ತ್ರಗಳು ಇದ್ದವು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.  ಭಾನುವಾರ ಸಾಯಂಕಾಲ ಈ ದಾಳಿ ನಡೆದಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿ, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಮತ್ತು ರಾಖ್​​ ಹಾಜಿನ್​ ಎಂಬಲ್ಲಿ ಇನ್ನೊಬ್ಬಾತನನ್ನು ಅರೆಸ್ಟ್ ಮಾಡಿದ್ದರು. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಇವವರೆಲ್ಲ ಉಗ್ರರಿಗೆ ಸಾರಿಗೆ, ಸಂಪರ್ಕ ಮತ್ತಿತರ ವಿಚಾರಗಳಿಗೆ ನೆರವು ನೀಡುತ್ತಿದ್ದರು. ಇವರಿಂದಲೂ ಅಪಾರ ಪ್ರಮಾಣದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

Published On - 9:57 am, Mon, 4 April 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ