Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದರು.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Apr 04, 2022 | 10:17 AM

ಜಮ್ಮು-ಕಾಶ್ಮೀರದ (Jammu Kashmir)ಪೂಂಚ್​ ಜಿಲ್ಲೆಯಲ್ಲಿ, ಗಡಿ ನಿಯಂತ್ರಣ ರೇಖೆ ಬಳಿಯೇ ಇರುವ ನೂರ್​ಕೋಟೆ ಹಳ್ಳಿಯಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಈ ಅಡಗುತಾಣಗಳಲ್ಲಿ ಚೈನೀಸ್ ಪಿಸ್ತೂಲ್​, ಎಕೆ 47 ರೈಫಲ್ಸ್​, ವಿವಿಧ ಮಾದರಿಯ ಗನ್​ಗಳು ಸೇರಿ ಹಲವು ಮಾರಕಾಸ್ತ್ರಗಳು ಇದ್ದವು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.  ಭಾನುವಾರ ಸಾಯಂಕಾಲ ಈ ದಾಳಿ ನಡೆದಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿ, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಮತ್ತು ರಾಖ್​​ ಹಾಜಿನ್​ ಎಂಬಲ್ಲಿ ಇನ್ನೊಬ್ಬಾತನನ್ನು ಅರೆಸ್ಟ್ ಮಾಡಿದ್ದರು. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಇವವರೆಲ್ಲ ಉಗ್ರರಿಗೆ ಸಾರಿಗೆ, ಸಂಪರ್ಕ ಮತ್ತಿತರ ವಿಚಾರಗಳಿಗೆ ನೆರವು ನೀಡುತ್ತಿದ್ದರು. ಇವರಿಂದಲೂ ಅಪಾರ ಪ್ರಮಾಣದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

Published On - 9:57 am, Mon, 4 April 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್