AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಅವರ ಮನೆಯ ವಿಳಾಸ ಕೇಳಿ ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

Mukesh Ambani ದೊಡ್ಡ ಚೀಲವನ್ನು ಹೊತ್ತಿದ್ದ ಇಬ್ಬರು ವ್ಯಕ್ತಿಗಳು ಬಂದು ವಿಳಾಸವನ್ನು ಕೇಳಿದ ನಂತರ ಟ್ಯಾಕ್ಸಿ ಡ್ರೈವರ್ ಒಬ್ಬರು ಫೋನ್ ಮಾಡಿದ್ದಾರೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದರು.

ಮುಕೇಶ್ ಅಂಬಾನಿ ಅವರ ಮನೆಯ ವಿಳಾಸ ಕೇಳಿ ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ
ಅಂಬಾನಿ ಮನೆ ಮುಂದೆ ಬಿಗಿ ಭದ್ರತೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 09, 2021 | 11:23 AM

Share

ಮುಂಬೈ: ಸೋಮವಾರ ರಾತ್ರಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ (Mukesh Ambanis)ಅವರ ನಗರದ ನಿವಾಸದ ಸುತ್ತಲೂ ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಏರ್ಪಡಿಸಿದ್ದು 40 ವರ್ಷದ ವ್ಯಕ್ತಿಯೊಬ್ಬರನ್ನು ಸೋಮವಾರ ರಾತ್ರಿ ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸುರೇಶ್ ವಿಸಾಂಜಿ ಪಟೇಲ್ (Suresh Visanji Patel) ಎಂದು ಗುರುತಿಸಲಾದ ವ್ಯಕ್ತಿಯನ್ನು ನವಿ ಮುಂಬೈನಿಂದ (Navi Mumbai) ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರಂಭಿಕ ವಿಚಾರಣೆಯಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸರು ಮಂಗಳ ಬೆಳಿಗ್ಗೆ ಹೇಳಿದ್ದಾರೆ. ಪಟೇಲ್ ಅವರು ಪ್ರವಾಸಿ ಆಗಿದ್ದು ಅಂಬಾನಿ ಅವರ ಮನೆಯ ಬಗ್ಗೆ ವಿಚಾರಿಸಿದ್ದರು. ಆದಾಗ್ಯೂ ಯಾವುದೇ ಸಂಭವನೀಯ ಬೆದರಿಕೆಯನ್ನು ತಳ್ಳಿಹಾಕಲು ಪಟೇಲ್ ಅವರನ್ನು ಸಂಪೂರ್ಣವಾಗಿ ಪ್ರಶ್ನಿಸುವುದಾಗಿ ಪೊಲೀಸರು ಹೇಳಿದ್ದಾರೆ. ಕಳೆದ ರಾತ್ರಿ ಅಂಬಾನಿ ಅವರ ನಿವಾಸ ಆಂಟಿಲಿಯಾ ಇರುವ ಸ್ಥಳದ ಬಗ್ಗೆ ಇಬ್ಬರು ವ್ಯಕ್ತಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಅಂಶವನ್ನು ಪೊಲೀಸರು ಎಚ್ಚರಿಸಿದ ನಂತರ ಭದ್ರತೆಯನ್ನು ಬಲಪಡಿಸಲಾಯಿತು.

ದೊಡ್ಡ ಚೀಲವನ್ನು ಹೊತ್ತಿದ್ದ ಇಬ್ಬರು ವ್ಯಕ್ತಿಗಳು ಬಂದು ವಿಳಾಸವನ್ನು ಕೇಳಿದ ನಂತರ ಟ್ಯಾಕ್ಸಿ ಡ್ರೈವರ್ ಒಬ್ಬರು ಫೋನ್ ಮಾಡಿದ್ದಾರೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದರು. ಮಂಗಳವಾರ ಬೆಳಗ್ಗೆ ಪೊಲೀಸರು ಟ್ಯಾಕ್ಸಿ ಚಾಲಕನನ್ನು (ಅವನು ಗುಜರಾತ್‌ನಿಂದ ಬಂದಿದ್ದಾನೆ) ಮತ್ತು ವಾಹನವನ್ನು (ವ್ಯಾಗನ್ ಆರ್ ಟೂರಿಸ್ಟ್ ಟ್ಯಾಕ್ಸಿ) ಗುರುತಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:  ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ