AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಅವರ ಮನೆಯ ವಿಳಾಸ ಕೇಳಿ ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

Mukesh Ambani ದೊಡ್ಡ ಚೀಲವನ್ನು ಹೊತ್ತಿದ್ದ ಇಬ್ಬರು ವ್ಯಕ್ತಿಗಳು ಬಂದು ವಿಳಾಸವನ್ನು ಕೇಳಿದ ನಂತರ ಟ್ಯಾಕ್ಸಿ ಡ್ರೈವರ್ ಒಬ್ಬರು ಫೋನ್ ಮಾಡಿದ್ದಾರೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದರು.

ಮುಕೇಶ್ ಅಂಬಾನಿ ಅವರ ಮನೆಯ ವಿಳಾಸ ಕೇಳಿ ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ
ಅಂಬಾನಿ ಮನೆ ಮುಂದೆ ಬಿಗಿ ಭದ್ರತೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 09, 2021 | 11:23 AM

Share

ಮುಂಬೈ: ಸೋಮವಾರ ರಾತ್ರಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ (Mukesh Ambanis)ಅವರ ನಗರದ ನಿವಾಸದ ಸುತ್ತಲೂ ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಏರ್ಪಡಿಸಿದ್ದು 40 ವರ್ಷದ ವ್ಯಕ್ತಿಯೊಬ್ಬರನ್ನು ಸೋಮವಾರ ರಾತ್ರಿ ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸುರೇಶ್ ವಿಸಾಂಜಿ ಪಟೇಲ್ (Suresh Visanji Patel) ಎಂದು ಗುರುತಿಸಲಾದ ವ್ಯಕ್ತಿಯನ್ನು ನವಿ ಮುಂಬೈನಿಂದ (Navi Mumbai) ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರಂಭಿಕ ವಿಚಾರಣೆಯಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸರು ಮಂಗಳ ಬೆಳಿಗ್ಗೆ ಹೇಳಿದ್ದಾರೆ. ಪಟೇಲ್ ಅವರು ಪ್ರವಾಸಿ ಆಗಿದ್ದು ಅಂಬಾನಿ ಅವರ ಮನೆಯ ಬಗ್ಗೆ ವಿಚಾರಿಸಿದ್ದರು. ಆದಾಗ್ಯೂ ಯಾವುದೇ ಸಂಭವನೀಯ ಬೆದರಿಕೆಯನ್ನು ತಳ್ಳಿಹಾಕಲು ಪಟೇಲ್ ಅವರನ್ನು ಸಂಪೂರ್ಣವಾಗಿ ಪ್ರಶ್ನಿಸುವುದಾಗಿ ಪೊಲೀಸರು ಹೇಳಿದ್ದಾರೆ. ಕಳೆದ ರಾತ್ರಿ ಅಂಬಾನಿ ಅವರ ನಿವಾಸ ಆಂಟಿಲಿಯಾ ಇರುವ ಸ್ಥಳದ ಬಗ್ಗೆ ಇಬ್ಬರು ವ್ಯಕ್ತಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಅಂಶವನ್ನು ಪೊಲೀಸರು ಎಚ್ಚರಿಸಿದ ನಂತರ ಭದ್ರತೆಯನ್ನು ಬಲಪಡಿಸಲಾಯಿತು.

ದೊಡ್ಡ ಚೀಲವನ್ನು ಹೊತ್ತಿದ್ದ ಇಬ್ಬರು ವ್ಯಕ್ತಿಗಳು ಬಂದು ವಿಳಾಸವನ್ನು ಕೇಳಿದ ನಂತರ ಟ್ಯಾಕ್ಸಿ ಡ್ರೈವರ್ ಒಬ್ಬರು ಫೋನ್ ಮಾಡಿದ್ದಾರೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದರು. ಮಂಗಳವಾರ ಬೆಳಗ್ಗೆ ಪೊಲೀಸರು ಟ್ಯಾಕ್ಸಿ ಚಾಲಕನನ್ನು (ಅವನು ಗುಜರಾತ್‌ನಿಂದ ಬಂದಿದ್ದಾನೆ) ಮತ್ತು ವಾಹನವನ್ನು (ವ್ಯಾಗನ್ ಆರ್ ಟೂರಿಸ್ಟ್ ಟ್ಯಾಕ್ಸಿ) ಗುರುತಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:  ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?