AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​​​ಗೆ ಉಗ್ರ ಯಾಸಿನ್ ಮಲಿಕ್​​ ಖುದ್ದು ಹಾಜರಿ: ತಿಹಾರ್ ಜೈಲಿನ ನಾಲ್ವರು ಸಿಬ್ಬಂದಿ ಅಮಾನತು

"ತಪ್ಪು ಮಾಡಿದ ಅಧಿಕಾರಿಗಳ ಜವಾಬ್ದಾರಿಯನ್ನು ಸರಿಪಡಿಸಲು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಜೈಲು ಪ್ರಧಾನ ಕಛೇರಿ) ರಾಜೀವ್ ಸಿಂಗ್ ಅವರು ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ನಡೆಸುವಂತೆ ನಾನು ಈಗಾಗಲೇ ಆದೇಶಿಸಿದ್ದೇನೆ. ಜೈಲು ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿರುವುದರಿಂದ ಸೋಮವಾರದೊಳಗೆ ಈ ಸಂಬಂಧ ತಮ್ಮ ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಬನಿವಾಲ್ ಹೇಳಿದ್ದಾರೆ.

ಸುಪ್ರೀಂಕೋರ್ಟ್​​​ಗೆ ಉಗ್ರ ಯಾಸಿನ್ ಮಲಿಕ್​​ ಖುದ್ದು ಹಾಜರಿ: ತಿಹಾರ್ ಜೈಲಿನ ನಾಲ್ವರು ಸಿಬ್ಬಂದಿ ಅಮಾನತು
ಯಾಸಿನಿ ಮಲಿಕ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 22, 2023 | 6:15 PM

Share

ದೆಹಲಿ ಜುಲೈ 22: ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್ ಮಲಿಕ್​​ನ್ನು(Yasin Malik) ಸುಪ್ರೀಂಕೋರ್ಟ್‌ನಲ್ಲಿ (Supreme Court) ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ (Tihar Central prison) ಜೈಲು ಸಂಖ್ಯೆ 7 ರ ಒಬ್ಬ ಉಪ ಅಧೀಕ್ಷಕರು, ಇಬ್ಬರು ಸಹಾಯಕ ಸೂಪರಿಂಟೆಂಡೆಂಟ್‌ಗಳು ಮತ್ತು ಒಬ್ಬ ಮುಖ್ಯ ವಾರ್ಡರ್ ಸೇರಿದಂತೆ ನಾಲ್ವರು ಸಿಬ್ಬಂದಿಗಳನ್ನು ದೆಹಲಿ ಕಾರಾಗೃಹ ಅಧಿಕಾರಿಗಳು ಶನಿವಾರ ಅಮಾನತುಗೊಳಿಸಿದ್ದಾರೆ. ಗಂಭೀರ ಭದ್ರತಾ ಲೋಪವನ್ನು ಉಲ್ಲೇಖಿಸಿ ಇವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿರುವ ಡೈರೆಕ್ಟರ್ ಜನರಲ್ (ಜೈಲು) ಸಂಜಯ್ ಬನಿವಾಲ್, ಮೇಲ್ನೋಟಕ್ಕೆ ಈ ನಾಲ್ವರು ಅಧಿಕಾರಿಗಳು ಮಲಿಕ್​​ನ್ನು ಉನ್ನತ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿಸಲು ಜವಾಬ್ದಾರರು ಎಂದು ಕಂಡುಬಂದಿದೆ ಎಂದು ಹೇಳಿದರು.

“ತಪ್ಪು ಮಾಡಿದ ಅಧಿಕಾರಿಗಳ ಜವಾಬ್ದಾರಿಯನ್ನು ಸರಿಪಡಿಸಲು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಜೈಲು ಪ್ರಧಾನ ಕಛೇರಿ) ರಾಜೀವ್ ಸಿಂಗ್ ಅವರು ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ನಡೆಸುವಂತೆ ನಾನು ಈಗಾಗಲೇ ಆದೇಶಿಸಿದ್ದೇನೆ. ಜೈಲು ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿರುವುದರಿಂದ ಸೋಮವಾರದೊಳಗೆ ಈ ಸಂಬಂಧ ತಮ್ಮ ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಬನಿವಾಲ್ ಹೇಳಿದ್ದಾರೆ.

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತ್ರ ಮಲಿಕ್‌ನನ್ನು ಹಾಜರುಪಬಡಿಸಲು ಸ್ಪಷ್ಟವಾದ ಸೂಚನೆ ಇದೆ. ಇದರ ಬದಲಾಗಿ, ಮಲಿಕ್ ನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಲಾಯಿತು. ಇದು ಖಂಡಿತವಾಗಿಯೂ ನಮ್ಮ ಕಡೆಯಿಂದ ಘೋರ ಲೋಪವಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬನಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: Manipur violence: ‘ಮಣಿಪುರ ಫೈಲ್ಸ್’ ಹೆಸರಿನ ಸಿನಿಮಾ ಮಾಡಬೇಕು: ಶಿವಸೇನೆ

ಭಯೋತ್ಪಾದಕನನ್ನು ಖುದ್ದಾಗಿ ಹಾಜರು ಮಾಡುವುದಕ್ಕೆ ನಿರ್ಬಂಧವಿದೆ. ಆದರೆ ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್ ಶುಕ್ರವಾರ ಪೊಲೀಸ್ ಬೆಂಗಾವಲಿನಲ್ಲಿ ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ “ದೊಡ್ಡ ಭದ್ರತಾ ಲೋಪ” ಎಂದು ಹೇಳಿದ್ದಾರೆ. ಯಾವುದೇ ಆದೇಶ ಅಥವಾ ನ್ಯಾಯಾಲಯದ ಅಧಿಕಾರ ಇಲ್ಲದೆ, ಪ್ರತ್ಯೇಕತಾವಾದಿ ನಾಯಕನನ್ನು ಹೊರತರಲು ಹೇಗೆ ಅವಕಾಶ ನೀಡಲಾಯಿತು ಎಂದು ಮೆಹ್ತಾ ಕೇಳಿದ್ದು, ಜೈಲು  ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sat, 22 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ