AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆ ಕೆಂಪು ಕೋಟೆ ಸುತ್ತ ಬಿಗಿಭದ್ರತೆ, ಎಲ್ಲೆಲ್ಲೂ ಕಂಟೇನರ್​ಗಳು

ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅವಘಡ ನಡೆಯಬಾರದು ಎಂಬ ಕಾರಣಕ್ಕೆ ದೆಹಲಿ ಪೊಲೀಸರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ

ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆ ಕೆಂಪು ಕೋಟೆ ಸುತ್ತ ಬಿಗಿಭದ್ರತೆ, ಎಲ್ಲೆಲ್ಲೂ ಕಂಟೇನರ್​ಗಳು
ದೆಹಲಿಯ ಕೆಂಪುಕೋಟೆ ಸುತ್ತಲೂ ಪೊಲೀಸರು ಕಂಟೇನರ್​ಗಳನ್ನು ಪೇರಿಸಿದ್ದಾರೆ.
TV9 Web
| Edited By: |

Updated on: Aug 08, 2021 | 4:39 PM

Share

ದೆಹಲಿ: ಆಗಸ್ಟ್​ 15 ಹತ್ತಿರವಾಗುತ್ತಿದ್ದಂತೆ ದೆಹಲಿಯ ಕೆಂಪು ಕೋಟೆ ಸುತ್ತಲೂ ಶಿಪಿಂಗ್ ಕಂಟೇನರ್​ಗಳನ್ನು ಪೇರಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅವಘಡ ನಡೆಯಬಾರದು ಎಂಬ ಕಾರಣಕ್ಕೆ ದೆಹಲಿ ಪೊಲೀಸರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ. ಕಳೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ರೈತರು ನಡೆಸಿದ್ದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಬಾರಿ ಹಾಗೆ ಆಗಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಈ ಕಂಟೇನರ್​ಗಳನ್ನು ಸಿಂಗರಿಸಿ, ಬಣ್ಣ ಬಳಿಯಲಾಗುವುದು ಎಂದು ಹೇಳಿರುದ ದೆಹಲಿ ಪೊಲೀಸರು, ಈಚಿನ ದಿನಗಳಲ್ಲಿ ಡ್ರೋಣ್ ದಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕೆಂಪುಕೋಟೆಯಿಂದ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಕಳೆದ ವರ್ಷ ಗಣರಾಜ್ಯೋತ್ಸವ ಸಮಾರಂಭದ ನಂತರ ರೈತರ ಟ್ರ್ಯಾಕ್ಟರ್​ ರ‍್ಯಾಲಿ ದೆಹಲಿಯ ಕೆಂಪುಕೋಟೆ ತಲುಪಿತ್ತು. ಈ ವರ್ಷವೂ ಅಂಥ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಭಯೋತ್ಪಾದಕ ದಾಳಿಯ ಬೆದರಿಕೆಯೂ ಪೊಲೀಸರ ಈ ಕ್ರಮಕ್ಕೆ ಕಾರಣವಾಗಿದೆ.

(Security Tightened Near New Delhi Before Independence Day Huge Containers Used for Security)

ಇದನ್ನೂ ಓದಿ: Explainer | ಗಣರಾಜ್ಯೋತ್ಸವ ಪರೇಡ್; ಎಲ್ಲ ಎನ್​ಸಿಸಿ ಕೆಡೆಟ್​ಗಳ ಅತಿದೊಡ್ಡ ಕನಸು, ಆರ್​ಡಿ ಪರೇಡ್​ಗೆ ಆಯ್ಕೆಯಾಗುವುದು ಹೇಗೆ?

ಇದನ್ನೂ ಓದಿ: ಗಣರಾಜ್ಯೋತ್ಸವ ಸ್ತಬ್ಧಚಿತ್ರದಲ್ಲಿ ಶಿವಮೊಗ್ಗ ರಂಗಾಯಣ ರೆಪರ್ಟರಿ ಕಲಾವಿದರು

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ