AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​​ ವಿರುದ್ಧ ಮಾತನಾಡಿದ್ದ ಮಾಜಿ ರಾಜ್ಯಪಾಲ ಅಜೀಜ್​ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Aziz Qureshi: ಅಜೀಜ್​ ಖುರೇಷಿ ಮೂಲತಃ ಮಧ್ಯಪ್ರದೇಶದ ಭೋಪಾಲ್​​ನ ಹಿರಿಯ ಕಾಂಗ್ರೆಸ್​ ನಾಯಕ. ಅವರಿಗೆ ಈಗ 81 ವರ್ಷ. ಉತ್ತರಾಖಂಡ, ಉತ್ತರಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಯೋಗಿ ಆದಿತ್ಯನಾಥ್​​ ವಿರುದ್ಧ ಮಾತನಾಡಿದ್ದ ಮಾಜಿ ರಾಜ್ಯಪಾಲ ಅಜೀಜ್​ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಅಜೀಜ್ ಖುರೇಷಿ
TV9 Web
| Edited By: |

Updated on: Sep 06, 2021 | 10:43 AM

Share

ಬರೇಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ (Uttar Pradesh Chief Minister Yogi Adityanath) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ, ಮಾಜಿ ರಾಜ್ಯಪಾಲ ಅಜೀಜ್​ ಖುರೇಷಿ (Aziz Quresh)ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣ (Sedition Case) ದಾಖಲಿಸಿದ್ದಾರೆ. ಸೆಪ್ಟೆಂಬರ್​ 4ರಂದು ಅಜೀಜ್​ ಖುರೇಷಿ, ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ, ಸದ್ಯ ಜೈಲಿನಲ್ಲಿರುವ ಅಜಂ ಖಾನ್​ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಅಜಂ ಖಾನ್ ಪತ್ನಿ ತಂಜೀಮ್​ ಫಾತ್ಮಾರ ಬಳಿ ಮಾತುಕತೆ ನಡೆಸಿದ್ದರು. ಅವರ ಮನೆಯಿಂದ ಹೊರಡುವಾಗ ಮಾಧ್ಯಮಗಳ ಜತೆ ಮಾತನಾಡಿದ್ದ ಅಜೀಜ್​ ಖುರೇಷಿ, ಯೋಗಿ ಆದಿತ್ಯನಾಥ್​ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

‘ಅಜಂ ಖಾನ್​ಗೆ ಇಲ್ಲಿನ ಸರ್ಕಾರ ಎಷ್ಟು ಹಿಂಸೆ ನೀಡುತ್ತಿದೆ ಎಂಬುದನ್ನು ವಿವರಿಸಬೇಕಾಗಿಲ್ಲ. ನಾನೀಗ ಇಲ್ಲಿಗೆ, ಫಾತ್ಮಾರಿಗೆ ಧೈರ್ಯ ತುಂಬಲು ಬಂದಿದ್ದೇನೆ. ನಾವು, ಜನರು ಆಕೆಯೊಂದಿಗೆ ಸದಾ ಇರುತ್ತೇವೆ. ಯೋಗಿ ಆದಿತ್ಯನಾಥ್​ ಸರ್ಕಾರ ರಾಕ್ಷಸ ಸರ್ಕಾರ ಮತ್ತು ಜನರ ರಕ್ತ ಹೀರುವ ಪಿಶಾಚಿಗಳು ಎಂದು ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲ, ಅಜೀಂ ಖಾನ್​ ನಮ್ಮ ಮುಸ್ಲಿಂ ಸಮುದಾಯದ ಒಳಿತಿಗಾಗಿ ಕೆಲಸ ಮಾಡಿದ್ದರು. ಆದರೆ ಕೆಲವರಿಗೆ ನಮ್ಮ ಸಮುದಾಯ ಶಿಕ್ಷಣವಂತರಾಗುವುದು, ಅವರಿಗೆ ಒಳಿತಾಗುವುದು ಇಷ್ಟವಿಲ್ಲ’ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಅಜೀಜ್ ಖುರೇಷಿಯವರ ಈ ಮಾತುಗಳ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕಾಶ್​ ಸೆಕ್ಷೇನಾ, ರಾಂಪುರ ಜಿಲ್ಲೆಯ ಸಿವಿಲ್​ ಲೈನ್ಸ್​ ಪೊಲೀಸ್​ ಠಾಣೆಯಲ್ಲಿ ಭಾನುವಾರ ರಾತ್ರಿ ದೂರು ದಾಖಲಿಸಿದ್ದರು. ಖುರೇಷಿಯವರ ಹೇಳಿಕೆ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ ಎರಡು ಸಮುದಾಯಗಳ ನಡುವೆ ವಾದ-ವಾಗ್ವಾದ ನಡೆಯುತ್ತಿದೆ. ಇದು ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂದೂ ಆಕಾಶ್​ ಉಲ್ಲೇಖಿಸಿದ್ದರು. ಅದರ ಬೆನ್ನಲ್ಲೇ ಯುಪಿ ಪೊಲೀಸರು ಅಜೀಜ್​ ಖುರೇಷಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಅಜೀಜ್​ ಖುರೇಷಿ ಕಾಂಗ್ರೆಸ್ ನಾಯಕ ಅಜೀಜ್​ ಖುರೇಷಿ ಮೂಲತಃ ಮಧ್ಯಪ್ರದೇಶದ ಭೋಪಾಲ್​​ನ ಹಿರಿಯ ಕಾಂಗ್ರೆಸ್​ ನಾಯಕ. ಅವರಿಗೆ ಈಗ 81 ವರ್ಷ. ಉತ್ತರಾಖಂಡ, ಉತ್ತರಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು ಅಜೀಂ ಖಾನ್​ ಮತ್ತು ಅವರ ಪುತ್ರ ಸದ್ಯ ಜೈಲಿನಲ್ಲಿದ್ದಾರೆ. ಫೋರ್ಜರಿ, ನಕಲಿ ಬರ್ತ್ ಸರ್ಟಿಫಿಕೇಟ್​ ಸೇರಿ ಹಲವು ಪ್ರಕರಣಗಳಲ್ಲಿ ಅಜೀಂ ಖಾನ್​, ಅವರ ಪತ್ನಿ ಮತ್ತು ಪುತ್ರ ಮೂವರೂ ಕಳೆದ ವರ್ಷ ಜೈಲು ಸೇರಿದ್ದರು. ಅದರಲ್ಲಿ ಪತ್ನಿ ಫಾತ್ಮಾಗೆ ಜಾಮೀನು ಸಿಕ್ಕಿದೆ.

ಇದನ್ನೂ ಓದಿ: ‘ನನ್ನ ಜೊತೆ ಮನೆಯಲ್ಲೇ ಇರು’ ಎಂದು ರಶ್ಮಿಕಾಗೆ ಒತ್ತಾಯ; ಹೀಗಾದರೆ ಕೆಲಸ ಮಾಡೋದು ಹೇಗೆ?

ಪಂಜಶಿರ್​ ಹೋರಾಟ ಪಡೆಯ ವಕ್ತಾರ ಫಾಹಿಮ್​ ದಷ್ಟಿ ಸಾವು; ಮೂವರು ಪ್ರಮುಖ ನಾಯಕರನ್ನು ಕೊಂದ ತಾಲಿಬಾನ್​

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ