AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಮದುವೆ ಮಂಟಪದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಈ ಮದುವೆ ನನಗೆ ಬೇಡವೆಂದು ಹಸೆಮಣೆಯಿಂದ ಕೆಳಗಿಳಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಂಟಪದಲ್ಲಿ ವಧುವಿನ ಮುಖ ನೋಡುತ್ತಿದ್ದಂತೆ ವರ ತನ್ನ ನಿರ್ಧಾರವನ್ನು ಬದಲಿಸಿದ್ದಾನೆ, ಇದಕ್ಕೆ ಕಾರಣವೇನು ಇಲ್ಲಿದೆ ಮಾಹಿತಿ.

ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ
ನಯನಾ ರಾಜೀವ್
|

Updated on: Jun 17, 2024 | 12:07 PM

Share

ವರನೊಬ್ಬ ಕೊನೆಯ ಕ್ಷಣದಲ್ಲಿ ಮದುವೆ ಬೇಡವೆಂದು ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್​ಪುರದಲ್ಲಿ ನಡೆದಿದೆ. ಮದುವೆ ಸಂತಸದಲ್ಲಿದ್ದ ಎರಡೂ ಕುಟುಂಬವು ನಿರಾಸೆಗೊಂಡಿವೆ. ವಧುವಿನ ಮುಖ ನೋಡಿದವನು ಇದ್ದಕ್ಕಿದ್ದಂತೆ ನನಗೆ ಈ ಮದುವೆ ಬೇಡ, ನನ್ನ ಹಣ ನನಗೆ ವಾಪಸ್ ಕೊಡಿ ಎಂದು ಹೇಳಲು ಶುರು ಮಾಡಿದ್ದ.

ಘಟನೆ ಹಿನ್ನೆಲೆ ಏನು? ಈ ಘಟನೆ ಚೌರಿಚೌರಾ ಎನ್ನುವ ಪ್ರದೇಶದಲ್ಲಿ ಡನೆದಿದೆ. ಹರ್ಯಾಣದಲ್ಲಿರುವ ಕುಟುಂಬವು ತನ್ನ ಮಗನಿಗೆ ವಧು ಹುಡುಕುತ್ತಿದ್ದರು. ಹೇಗೋ ಈ ಸಂಬಂಧ ಚೌರಿಚೌರಾಕ್ಕೆ ಬಂದಿತ್ತು, ಹುಡುಗಿನ ಫೋಟೊ ನೋಡಿ ಒಪ್ಪಿಗೆ ಸೂಚಿಸಿದ್ದರು. ಮದುವೆಯ ವೆಚ್ಚ ಭರಿಸಲು ಹಣವಿಲ್ಲ ಎಂದಿದ್ದಕ್ಕೆ ಹುಡುಗನ ಕುಟುಂಬದವರೇ ಮದುವೆಯ ಖರ್ಚಿಗೆಂದು ಹಣ ನೀಡಿದ್ದರು.

ಜೂನ್ 16ರಂದು ಮದುವೆಯ ಮೆರವಣಿಗೆ ಬಂದಿತ್ತು, ವಧು ಮಂಟಪದಲ್ಲಿ ಕುಳಿತಿದ್ದಳು, ಸಪ್ತಪದಿ ತುಳಿಯುವ ಮುನ್ನ ವಧುವಿನ ಮುಖ ನೋಡಿದ ವರ ಈಕೆ ಕಪ್ಪಗಿದ್ದಾಳೆ, ನಾನು ಫೋಟೊದಲ್ಲಿ ನೋಡಿದ್ದ ಹುಡುಗಿ ಇವಳಲ್ಲ, ಅವಳು ಬೆಳ್ಳಗಿದ್ದಳು, ಎಲ್ಲಾ ಸೇರಿ ನನಗೆ ಮೋಸ ಮಾಡಿದ್ದಾರೆ, ಹಣವನ್ನು ವಾಪಸ್ ಕೊಡಿ ಎಂದು ಹೇಳುತ್ತಾ ಗಲಾಟೆ ಮಾಡಿದ್ದಾನೆ.

ಮತ್ತಷ್ಟು ಓದಿ: ಅಮ್ಮ ನನಗೆ ಆ ಹುಡುಗ ಇಷ್ಟವಿಲ್ಲವೆಂದರೂ ಬಲವಂತದ ನಿಶ್ಚಿತಾರ್ಥ ಮಾಡಿಸಿದ ತಾಯಿ, ಆತ್ಮಹತ್ಯೆ ಮಾಡಿಕೊಂಡ ಮಗಳು

ವರನ ಮಾತು ಕೇಳಿ ಅಲ್ಲಿದ್ದವರಿಗೂ ಆಶ್ಚರ್ಯವಾಗಿತ್ತು, ನಂತರ ಎರಡೂ ಕಡೆಯವರಿಗೂ ವಾಗ್ವಾದ ಶುರುವಾಯಿತು, ಈ ಬಗ್ಗೆ ಅಲ್ಲಿದ್ದವರು ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ