Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದವನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್​ಗೆ ಹೆಣ್ಣು ಮಗು ಜನನ

ಆನ್​ಲೈನ್​ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾದ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಾಳೆ. ಸೀಮಾ ಹೈದರ್ ಆನ್​ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು.

ಪ್ರೀತಿಸಿದವನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್​ಗೆ ಹೆಣ್ಣು ಮಗು ಜನನ
ಸೀಮಾ ಹೈದರ್ -ಸಚಿನ್ ಮೀನಾImage Credit source: Business Today
Follow us
ನಯನಾ ರಾಜೀವ್
|

Updated on: Mar 18, 2025 | 2:10 PM

ನೋಯ್ಡಾ, ಮಾರ್ಚ್​ 18: ಆನ್​ಲೈನ್​ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾದ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಾಳೆ. ಸೀಮಾ ಹೈದರ್ ಆನ್​ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು.

ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದಿದು ಸಚಿನ್ ಮೀನಾರನ್ನು ಮದುವೆಯಾಗಿದ್ದಳು. ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದು ಅವರಿಬ್ಬರ ಹೊಸ ಅಧ್ಯಾಯವೆಂದೇ ಹೇಳಬಹುದು. ಪ್ರಸ್ತುತ ಗ್ರೇಟರ್ ನೋಯ್ಡಾದ ರಬುಪುರದಲ್ಲಿ ವಾಸಿಸುತ್ತಿರುವ ಈ ದಂಪತಿ ಸಂತೋಷದ ಜೀವನ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್

ಒಂದು ಸಿನಿಮಾ ರೀತಿಯ ಪ್ರೇಮಕಥೆ ಇಬ್ಬರೂ ಆನ್​ಲೈನ್ ಗೇಮ್ ಪಬ್ಜಿ ಆಡುವಾಗ ಪರಿಚಯವಾದರು. ಇಬ್ಬರು ಪರಸ್ಪರ ಪ್ರೀತಿಸಲು ಆರಮಭಿಸಿದರು. ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ, ಸೀಮಾ ಸಚಿನ್ ಜತೆ ಇರಲು ನೇಪಾಳದ ಮೂಲಕ ಅಕ್ರಮವಾಗಿ ಭಾರತವನ್ನು ದಾಟಿ ನಾಲ್ಕು ಮಕ್ಕಳನ್ನು ಕರೆದುಕೊಂಡು ಬಂದಿದ್ದಳು.

ಆದರೆ ಅದು ಸುಲಭವಾಗಿರಲಿಲ್ಲ. 2023ರ ಜುಲೈನಲ್ಲಿ ಕಾನೂನು ಹೋರಾಟಗಳು ಮತ್ತು ಬಂಧನವನ್ನು ಎದುರಿಸಬೇಕಾಯಿತು. ಕೊನೆಗೂ ಪ್ರೀತಿ ಗೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು