AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಶ್ರೀ ಅರೆಸ್ಟ್

haitanyananda Saraswati arrested: ದಕ್ಷಿಣ ದೆಹಲಿಯ ವಸಂತ್‌ಕುಂಜ್‌ನಲ್ಲಿರೋ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕನಾಗಿದ್ದ ಶ್ರೀ ಚೈತನ್ಯಾನಂದ ಸರಸ್ವತಿ ಅನ್ನು ಪೊಲೀಸರ ಕೊನೆಗೂ ಆಗ್ರಾದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬರುತ್ತಿದ್ದಂತೆ ಚೈತನ್ಯಾನಂದ ಸರಸ್ವತಿ ತಲೆಮರೆಸಿಕೊಂಡಿದ್ದರು. ಇದೀಗ ಅರೆಸ್ಟ್​ ಮಾಡಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಶ್ರೀ ಅರೆಸ್ಟ್
ಚೈತನ್ಯಾನಂದ ಸರಸ್ವತಿ ಶ್ರೀ ಅರೆಸ್ಟ್
ಗಂಗಾಧರ​ ಬ. ಸಾಬೋಜಿ
|

Updated on:Sep 28, 2025 | 7:54 AM

Share

ದೆಹಲಿ, ಸೆಪ್ಟೆಂಬರ್​ 28: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 50 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿಯನ್ನು (Chaitanyananda Saraswati) ಪೊಲೀಸರು ಕೊನೆಗೂ ಆಗ್ರಾದಲ್ಲಿ ಬಂಧಿಸಿದ್ದಾರೆ (Arrested). ವಿದ್ಯಾರ್ಥಿಗಳು, ಮಹಿಳೆಯರು ನೀಡಿದ ದೂರನ್ನು ಸ್ವೀಕರಿಸಿದ್ದ ದೆಹಲಿ ಪೊಲೀಸರು ಎಫ್​ಐಆರ್​​ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಪಟಿಯಾಲ ಹೌಸ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲೂ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿತ್ತು.

ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್‌ನಲ್ಲಿ ಒಟ್ಟು 32 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲಿ 16 ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅಶ್ಲೀಲ ವಾಟ್ಸಾಪ್ ಸಂದೇಶ ಕಳಿಸೋದು, ಅನಗತ್ಯ ಲೈಂಗಿಕ ಸಂಪರ್ಕ ನಡಿಸಿದ್ದಾಗಿ ದೂರಿನಲ್ಲಿ ಉಲ್ಲೇಖವಾಗಿತ್ತು.

ಇದನ್ನೂ ಓದಿ
Image
ಚೈತನ್ಯಾನಂದ ಸ್ವಾಮಿ ಕೊಟ್ಟ ಕಿರುಕುಳದ ಬಗ್ಗೆ ವಿದ್ಯಾರ್ಥಿನಿಯರ ಮಾತು
Image
ಕಿರುಕುಳ ನೀಡಲೆಂದೇ ಇತ್ತು ಒಂದು ಕೊಠಡಿ, ಹರಿದ್ವಾರ ಪ್ರವಾಸದಲ್ಲೂ ಕಿರುಕುಳ
Image
ರಹಸ್ಯ ಕ್ಯಾಮರಾಗಳು, ಅಶ್ಲೀಲ ವಾಟ್ಸಾಪ್ ಚಾಟ್, 300 ಪುಟಗಳ ಪುರಾವೆ
Image
ದೆಹಲಿ ಚೈತನ್ಯಾನಂದ ಸ್ವಾಮೀಜಿಯ ಕಾಮ ಪುರಣ ಬಟಾಬಯಲು

ಇದನ್ನೂ ಓದಿ: ತೀಟೆ ತೀರಿಸಿಕೊಳ್ಳಲು ವಿದ್ಯಾರ್ಥಿನಿಯರಿಗೆ ಫಾರಿನ್ ಟ್ರಿಪ್ ಆಫರ್: ದೆಹಲಿ ಚೈತನ್ಯಾನಂದ ಸ್ವಾಮೀಜಿಯ ಕಾಮ ಪುರಣ ಬಟಾಬಯಲು

ಈ ಬಗ್ಗೆ ಪಟಿಯಾಲ ಹೌಸ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ 16 ವಿದ್ಯಾರ್ಥಿನಿಯರ ಹೇಳಿಕೆಗಳನ್ನ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಯು ವಿದ್ಯಾರ್ಥಿನಿಯರನ್ನ ವ್ಯವಸ್ಥಿತವಾಗಿ ಬ್ಲ್ಯಾಕ್‌ಮೇಲ್ ಮಾಡ್ತಿದ್ದನಂತೆ. ವಿದ್ಯಾರ್ಥಿನಿಯರನ್ನ ತನ್ನ ಕೋಣೆಗೆ ಕರೆಸಿಕೊಳ್ಳುತ್ತಿದ್ದು, ತಾನು ಹೇಳಿದಂತೆ ಕೇಳಬೇಕು. ಇಲ್ಲದಿದ್ರೆ, ಅಂಕಗಳನ್ನ ಕಡಿಮೆ ನೀಡ್ತೀನಿ ಅಂತಾ ಬೆದರಿಕೆ ಹಾಕುತ್ತಿದ್ನಂತೆ.

300 ಪುಟಗಳಿಗೂ ಹೆಚ್ಚು ಸಾಕ್ಷ್ಯ ಸಲ್ಲಿಕೆ

ಇನ್ನು ಸ್ವಾಮೀಜಿಯ ಜೊತೆ ಸಂಸ್ಥೆಯ ಡೀನ್ ಹಾಗೂ ಇಬ್ಬರು ಮಹಿಳಾ ಸಿಬ್ಬಂದಿಯೂ ಭಾಗಿಯಾಗಿ, ಸ್ವಾಮೀಜಿಗೆ ಸಹಕರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆಗಸ್ಟ್ 4 ಮತ್ತು 5 ರಂದು, ಶಾರದಾ ಪೀಠ ಪೊಲೀಸರಿಗೆ ದೂರು ಸಲ್ಲಿಸಿದ್ದು, 300 ಪುಟಗಳಿಗೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದೆ. ವಿದ್ಯಾರ್ಥಿಗಳ ಹೇಳಿಕೆ ದಾಖಲಿಸಿದ ನಂತರ ಹೊಸ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಶಾರದಾ ಪೀಠದ ಚೈತನ್ಯಾನಂದ ಸ್ವಾಮಿ ಕೊಟ್ಟ ಕಿರುಕುಳದ ಮಾಹಿತಿ ಎಳೆಎಳೆಯಾಗಿ ಬಿಚ್ಚಿಟ್ಟ ವಿದ್ಯಾರ್ಥಿನಿಯರು

ಶೃಂಗೇರಿಯ ಶಾರದಾ ಪೀಠವು ಸ್ವಾಮೀಜಿಯ ಪವರ್ ಆಫ್ ಅಟಾರ್ನಿ ರದ್ದು ಮಾಡಿ, 11 ಸದಸ್ಯರ ಹೊಸ ಆಡಳಿತ ಮಂಡಳಿ ರಚಿಸಲಾಗಿದೆ. ಇನ್ನು ಆರೋಪಿ ವಿದೇಶಕ್ಕೆ ಪಲಾಯನ ಮಾಡುವುದನ್ನ ತಡೆಯಲು ಲುಕ್ ಔಟ್ ನೋಟಿಸ್ ಕೂಡ ಹೊರಡಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 am, Sun, 28 September 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!