AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2018ರ ಅತ್ಯಾಚಾರ ಪ್ರಕರಣ; ಕ್ರಿಶ್ಚಿಯನ್ ಪಾದ್ರಿ ಬಜಿಂದರ್ ಸಿಂಗ್ ಅಪರಾಧಿ ಎಂದು ಕೋರ್ಟ್ ತೀರ್ಪು

2018ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಕ್ರಿಶ್ಚಿಯನ್ ಪಾದ್ರಿ ಬಜಿಂದರ್ ಸಿಂಗ್ ದೋಷಿ ಎಂದು ಮೊಹಾಲಿ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯವು ಏಪ್ರಿಲ್ 1ರಂದು ಶಿಕ್ಷೆಯನ್ನು ಪ್ರಕಟಿಸಲಿದೆ. 2018 ರ ಜಿರಾಕ್‌ಪುರ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿವಾದಾತ್ಮಕ ಪಾದ್ರಿ ಬಜಿಂದರ್ ಸಿಂಗ್ ಅವರನ್ನು ದೋಷಿ ಎಂದು ಮೊಹಾಲಿ ಪೋಕ್ಸೊ ನ್ಯಾಯಾಲಯವು ತೀರ್ಪು ನೀಡಿದೆ. ನ್ಯಾಯಾಲಯವು ಏಪ್ರಿಲ್ 1ರಂದು ಅವರ ಶಿಕ್ಷೆಯನ್ನು ಪ್ರಕಟಿಸಲಿದೆ. 2018ರಲ್ಲಿ ಲಂಡನ್‌ಗೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಬಂಧಿಸಲ್ಪಟ್ಟ ಬಜಿಂದರ್ ಸಿಂಗ್ ವಿರುದ್ಧ ಹಲವಾರು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

2018ರ ಅತ್ಯಾಚಾರ ಪ್ರಕರಣ; ಕ್ರಿಶ್ಚಿಯನ್ ಪಾದ್ರಿ ಬಜಿಂದರ್ ಸಿಂಗ್ ಅಪರಾಧಿ ಎಂದು ಕೋರ್ಟ್ ತೀರ್ಪು
Bajinder Singh
ಸುಷ್ಮಾ ಚಕ್ರೆ
|

Updated on: Mar 28, 2025 | 4:40 PM

Share

ನವದೆಹಲಿ, ಮಾರ್ಚ್ 28: 2018ರ ಜಿರಾಕ್‌ಪುರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಕ್ರಿಶ್ಚಿಯನ್ ಪಾದ್ರಿ ಬಜಿಂದರ್ ಸಿಂಗ್ (Bajinder Singh) ಅವರನ್ನು ದೋಷಿ ಎಂದು ಮೊಹಾಲಿಯ ವಿಶೇಷ ಪೋಕ್ಸೊ ನ್ಯಾಯಾಲಯವು ತೀರ್ಪು ನೀಡಿದೆ. ಏಪ್ರಿಲ್ 1ರಂದು ನ್ಯಾಯಾಲಯದ ಮುಂದೆ ಬಜಿಂದರ್ ಸಿಂಗ್ ಹಾಜರಾದರು. ಬಜಿಂದರ್ ಸಿಂಗ್ ಶುಕ್ರವಾರ ಇತರ 6 ಆರೋಪಿಗಳೊಂದಿಗೆ ನ್ಯಾಯಾಲಯದ ಮುಂದೆ ಹಾಜರಾದರು. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 5 ಸಹ-ಆರೋಪಿಗಳನ್ನು ಖುಲಾಸೆಗೊಳಿಸಲಾಯಿತು.

ಸ್ವಯಂ ಘೋಷಿತ ದೇವಮಾನವ ಪಾದ್ರಿ ಮತ್ತು ಪಂಜಾಬ್ ಪ್ರವಾದಿ ಬಜಿಂದರ್ ಸಿಂಗ್ 2018ರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ಪಂಜಾಬ್‌ನ ಮೊಹಾಲಿಯ ನ್ಯಾಯಾಲಯವು ಪಾದ್ರಿಯನ್ನು ಲೈಂಗಿಕ ದುರುಪಯೋಗದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಮಾರ್ಚ್ 19ರಂದು ಪಾದ್ರಿ ಬಜಿಂದರ್ ಸಿಂಗ್ ಸೇರಿದಂತೆ 6 ಆರೋಪಿಗಳು 2018ರಲ್ಲಿ ಪಂಜಾಬ್‌ನ ಜಿರಾಕ್‌ಪುರದ ಮಹಿಳೆಯೊಬ್ಬರು ಹೂಡಿದ್ದ ಲೈಂಗಿಕ ಕಿರುಕುಳ ಆರೋಪದ ವಿಚಾರಣೆಗಾಗಿ ಮೊಹಾಲಿಯ ನ್ಯಾಯಾಲಯಕ್ಕೆ ಹಾಜರಾದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಇದನ್ನೂ ಓದಿ
Image
ನಿಮ್ಮ ಅಮೆರಿಕ ವೀಸಾ ಸಂದರ್ಶನ ರದ್ದಾಗಿದೆಯೇ? ಕಾರಣ ಇಲ್ಲಿದೆ ನೋಡಿ
Image
ಪರ ಪುರುಷರ ಜತೆ ಮಾತನಾಡಬೇಡ ಎಂದಿದ್ದಕ್ಕೆ ಕಾಫಿಗೆ ವಿಷ ಬೆರೆಸಿದ ಮಹಿಳೆ
Image
ಪ್ರೇಯಸಿಯನ್ನು ಭೇಟಿಯಾಗಲು ಬಂದವನಿಗೆ ಮದುವೆ ಮಾಡಿಸಿದ ಕುಟುಂಬಸ್ಥರು
Image
ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತೆ ಬಾಲಕಿಯ ಅಪಹರಿಸಿದ

ಈ ಪ್ರಕರಣವು 2018ರಲ್ಲಿ ಜಿರಾಕ್‌ಪುರದ ಮಹಿಳೆಯೊಬ್ಬರು ಬಜೀಂದರ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಲಂಡನ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಅವರನ್ನು ಜುಲೈ 2018ರಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಜಿರಾಕ್‌ಪುರ ಪೊಲೀಸರು ಪವಾಡಗಳ ಮೂಲಕ ಕಾಯಿಲೆಗಳನ್ನು ಗುಣಪಡಿಸುವುದಾಗಿ ಹೇಳಿಕೊಂಡ ಬಜಿಂದರ್ ಸಿಂಗ್ ಮತ್ತು ಇತರ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಇತರ ಆರೋಪಿಗಳಲ್ಲಿ ಅಕ್ಬರ್ ಭಟ್ಟಿ, ರಾಜೇಶ್ ಚೌಧರಿ, ಸುಚಾ ಸಿಂಗ್, ಜತಿಂದರ್ ಕುಮಾರ್, ಸಿತಾರ್ ಅಲಿ ಮತ್ತು ಸಂದೀಪ್ ಅಲಿಯಾಸ್ ಪೆಹ್ಲ್ವಾನ್ ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತದೇ ಬಾಲಕಿಯ ಅಪಹರಿಸಿದ ವ್ಯಕ್ತಿ

ಚಂಡೀಗಢದ ಸೆಕ್ಟರ್ 63ರಲ್ಲಿರುವ ತನ್ನ ನಿವಾಸದಲ್ಲಿ ಬಜಿಂದರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಳು. ನಂತರ ಈ ಘಟನೆಯನ್ನು ಬೇರೆಯವರಿಗೆ ಹೇಳಿದರೆ ಅಥವಾ ಅವರ ಬೇಡಿಕೆಗಳನ್ನು ಈಡೇರಿಸಲು ನಿರಾಕರಿಸಿದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಅವರು ಬೆದರಿಕೆ ಹಾಕಿದ್ದರು ಎಂದು ಆಕೆ ಆರೋಪಿಸಿದ್ದರು. ಆದರೆ ಆ ವರ್ಷದ ಕೊನೆಯಲ್ಲಿ ಅವರಿಗೆ ಜಾಮೀನು ನೀಡಲಾಯಿತು. ಸ್ವಘೋಷಿತ ದೇವಮಾನವ ಲಂಡನ್‌ಗೆ ವಿಮಾನ ಹತ್ತುವಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ