AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಸ್ವಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ

Gurmeet Ram Rahim Singh ಪಂಚಕುಲಾದ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ನಾಲ್ವರು ಸಹ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ.

ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಸ್ವಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ
ಗುರ್ಮೀತ್ ರಾಮ್ ರಹೀಮ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 08, 2021 | 12:25 PM

Share

ಪಂಚಕುಲಾ: ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಸ್ವಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ (Gurmeet Ram Rahim Singh) ಮತ್ತು ಇತರ ನಾಲ್ವರು ಆರೋಪಿಗಳು ಶಿಕ್ಷೆಗೊಳಗಾಗಿದ್ದಾರೆ. ರಾಮ್ ರಹೀಮ್ ಸಿಂಗ್ ನ ಡೇರಾ ಸಚ್ಚಾ ಸೌದಾದ ಮಾಜಿ ಬೆಂಬಲಿಗ ರಂಜಿತ್ ಸಿಂಗ್ ಜುಲೈ 10, 2002 ರಂದು ಹತ್ಯೆಗೀಡಾಗಿದ್ದರು. ಪಂಚಕುಲಾದ ಕೇಂದ್ರೀಯ ತನಿಖಾ ದಳ (CBI) ವಿಶೇಷ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಸಿಂಗ್ ಮತ್ತು ನಾಲ್ವರು ಸಹ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ವರದಿಗಳ ಪ್ರಕಾರ, ಅಕ್ಟೋಬರ್ 12 ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

ಈ ಹಿಂದೆ ಅತ್ಯಾಚಾರ, ಕೊಲೆಗೆ ಶಿಕ್ಷೆ ವಿಧಿಸಲಾಗಿತ್ತು ಪ್ರಸ್ತುತ ವಿವಾದಿತ ದೇವಮಾನವ ತನ್ನ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. 2017 ರ ಆಗಸ್ಟ್‌ನಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಅತ್ಯಾಚಾರ ಪ್ರಕರಣದಲ್ಲಿ ಆತನನ್ನು ದೋಷಿ ಎಂದು ಘೋಷಿಸಿತು. 2002 ರ ಜುಲೈ 10 ರಂದು ಕುರುಕ್ಷೇತ್ರದ ಖಾನಪುರ ಕೋಲಿಯನ್ ಗ್ರಾಮದಲ್ಲಿ ಡೇರಾ ಮುಖ್ಯಸ್ಥನ ವಿರುದ್ಧ ಪ್ರತಿಭಟಿಸಿದ ನಂತರ ರಂಜಿತ್ ಸಿಂಗ್ ಅವರನ್ನು ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

2019 ಜನವರಿಯಲ್ಲಿ, ಪತ್ರಕರ್ತನ ಹತ್ಯೆಯ ಪ್ರಕರಣದಲ್ಲಿ 16 ವರ್ಷಗಳ ನಂತರ ಸ್ವಘೋಷಿತ ದೇವಮಾನವ ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿತು. ಈ ವರ್ಷದ ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ನೋಡಲು ದೇರಾ ಮುಖ್ಯಸ್ಥನಿಗೆ ‘ತುರ್ತು ಪೆರೋಲ್’ ನೀಡಲಾಯಿತು. ಪೆರೋಲ್ ಪಡೆಯಲು ಸಿಂಗ್ ಜೈಲು ಅಧಿಕಾರಿಗಳಿಗೆ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ  ತಾಯಿಯನ್ನು ಭೇಟಿ ಮಾಡಲು ಗುರುಗ್ರಾಮಕ್ಕೆ ಹೋಗಿದ್ದರು.

ಇದನ್ನೂ ಓದಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಭಾರತ-ಚೀನಾ ಪಡೆ ಮುಖಾಮುಖಿ; ಚೀನಾ ಯೋಧರ ಬಂಧನ ನಡೆದಿಲ್ಲ ಎಂದ ಕೇಂದ್ರ ಸರ್ಕಾರ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್