ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು
ಸಾವುImage Credit source: The Statesman
Follow us
| Updated By: Digi Tech Desk

Updated on:Jul 31, 2023 | 10:47 AM

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್‌ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ  ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸಿದರು.

ಮತ್ತಷ್ಟು ಓದಿ: Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:07 am, Mon, 31 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ