AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ

ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಾತ್ರಿಪಡಿಸುತ್ತದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ವೈವಿಧ್ಯಮಯ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯಲ್ಲಿ ವಿಶ್ವಾಸಾರ್ಹ ಪಾಲುದಾರನಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭರವಸೆ ನೀಡಿದ್ದಾರೆ.

ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Sep 10, 2024 | 10:07 PM

Share

ನವದೆಹಲಿ: “ಭಾರತವು ಸೆಮಿಕಂಡಕ್ಟರ್ ವಲಯದಲ್ಲಿ ತನ್ನ ಜಾಗತಿಕ ಜವಾಬ್ದಾರಿಯನ್ನು ಗುರುತಿಸಿ ಆ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂಬರುವ ಸಮಯವು ತಂತ್ರಜ್ಞಾನದಿಂದ ಚಾಲಿತವಾಗಿರುತ್ತದೆ. ಸೆಮಿಕಂಡಕ್ಟರ್ ‘ಡಿಜಿಟಲ್ ಯುಗ’ದ ಆಧಾರವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಸಂಜೆ ದೆಹಲಿಯ ತಮ್ಮ ನಿವಾಸದಲ್ಲಿ ‘ಸೆಮಿಕಂಡಕ್ಟರ್ ಎಕ್ಸಿಕ್ಯೂಟಿವ್ಸ್ ರೌಂಡ್‌ಟೇಬಲ್’ ಅಧ್ಯಕ್ಷತೆ ವಹಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಸೆಮಿಕಂಡಕ್ಟರ್ ಉದ್ಯಮವು ಶೀಘ್ರದಲ್ಲೇ ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಗಳ ತಳಹದಿಯಾಗಲಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, “ಪ್ರಜಾಪ್ರಭುತ್ವ ಮತ್ತು ತಂತ್ರಜ್ಞಾನವು ಒಟ್ಟಾಗಿ ಮಾನವೀಯತೆಯ ಕಲ್ಯಾಣವನ್ನು ಖಚಿತಪಡಿಸುತ್ತದೆ” ಎಂದು ಹೇಳಿದರು. ಸಾಮಾಜಿಕ, ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯಗಳ ಅಭಿವೃದ್ಧಿ, ಅಂತರ್ಗತ ಅಭಿವೃದ್ಧಿಗೆ ಉತ್ತೇಜನ ನೀಡುವುದು, ಅನುಸರಣೆ ಹೊರೆಯನ್ನು ಕಡಿಮೆ ಮಾಡುವುದು, ಉತ್ಪಾದನೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದು ಸೇರಿದಂತೆ ಅಭಿವೃದ್ಧಿಯ ಆಧಾರ ಸ್ತಂಭಗಳ ಕುರಿತು ಮೋದಿ ಮಾತನಾಡಿದರು.

ಭಾರತವು ವೈವಿಧ್ಯಮಯ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯಲ್ಲಿ ವಿಶ್ವಾಸಾರ್ಹ ಪಾಲುದಾರನಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕವಾಗಿ ಸ್ಪರ್ಧಾತ್ಮಕ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುವುದರತ್ತ ಭಾರತ ಗಮನವನ್ನು ಕೇಂದ್ರೀಕರಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಅನುಸಂಧಾನ್ ನ್ಯಾಷನಲ್ ರಿಸರ್ಚ್ ಫೌಂಡೇಶನ್‌ನ ಮೊದಲ ಆಡಳಿತ ಮಂಡಳಿ ಸಭೆ

“ಭಾರತವು ಹೈಟೆಕ್ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲು ಉತ್ತಮ ಮಾರುಕಟ್ಟೆಯಾಗಿದೆ. ಇಂದು ಸೆಮಿಕಂಡಕ್ಟರ್ ವಲಯದ ನಾಯಕರು ಹಂಚಿಕೊಂಡ ಉತ್ಸಾಹವು ಈ ವಲಯಕ್ಕಾಗಿ ಹೆಚ್ಚು ಶ್ರಮಿಸಲು ಸರ್ಕಾರವನ್ನು ಪ್ರೇರೇಪಿಸುತ್ತದೆ” ಎಂದು ಅವರು ಹೇಳಿದರು.

ಇದೇ ವೇಳೆ ಸಿಇಒಗಳು ಸೆಮಿಕಂಡಕ್ಟರ್ ವಲಯದ ಬೆಳವಣಿಗೆಗೆ ಭಾರತದ ಬದ್ಧತೆಯನ್ನು ಶ್ಲಾಘಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ