AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಐ ಅಧಿಕಾರಿ ಮಹಿಳೆಯ ಉಡುಪಿನಲ್ಲಿ ಶವವಾಗಿ ಪತ್ತೆ

ಎಎಐ ಅಧಿಕಾರಿಯೊಬ್ಬರು ಮಹಿಳಾ ಉಡುಪಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉತ್ತರಾಖಂಡದಲ್ಲಿ ಈ ಘಟನೆ ನಡೆದಿದೆ.

ಎಎಐ ಅಧಿಕಾರಿ ಮಹಿಳೆಯ ಉಡುಪಿನಲ್ಲಿ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jun 25, 2024 | 9:25 AM

Share

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಹಿರಿಯ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉತ್ತರಾಖಂಡದ ಪಂತ್​ನಗರದಲ್ಲಿರುವ ವಿಮಾನ ನಿಲ್ದಾಣದ ಏರ್​ ಟ್ರಾಫಿಕ್ ಕಂಟ್ರೋಲ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ವ್ಯವಸ್ಥಾಪಕ ಆಶಿಶ್ ಚೌನ್ಸಾಲಿ ಭಾನುವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಅವರು ತುಟಿಯಲ್ಲಿ ಲಿಪ್​ಸ್ಟಿಕ್ ಇತ್ತು, ಮಹಿಳೆಯ ಬಟ್ಟೆಯನ್ನು ಧರಿಸಿದ್ದರು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮ್ಯಾಕ್ಸಿ ಡ್ರೆಸ್​, ಬಿಂದಿ, ಲಿಪ್​ಸ್ಟಿಕ್ ಮತ್ತು ಬಳೆಗಳು ಸೇರಿದಂತೆ ಮಹಿಳೆಯರಂತೆ ಕಾಣುತ್ತಿದ್ದರು. ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ, ಒಮ್ಮೆ ಮನೆಗೆ ಹೋಗಿ ವಿಚಾರಿಸೋಣ ಎಂದು ಸಹೋದ್ಯೋಗಿಗಳು ಮನೆಗೆ ಬಂದಿದ್ದಾರೆ.

ಒಳಗಡೆಯಿಂದ ಮನೆ ಲಾಕ್​ ಆಗಿದ್ದ ಕಾರಣ, ಕೊಠಡಿಯ ಬಾಗಿಲು ಒಡೆದು ನೋಡಿದ್ದಾರೆ ಆಗ ಅವರು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರೊಳಗಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ಓದಿ:ಬಿಹಾರದ ಸೇತುವೆ ಕೆಳಗೆ ರುಂಡವಿಲ್ಲದ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆ

ದೈಹಿಕ ಹಲ್ಲೆಯೂ ಕಂಡುಬಂದಿಲ್ಲ, ಆ ಮನೆಯಲ್ಲಿ ಅವರ ಹೊರತಾಗಿ ಬೇರಾರು ಅಲ್ಲಿಗೆ ಬಂದಿದ್ದಾರೆ ಎಂದೆನಿಸುತ್ತಿರಲಿಲ್ಲ ಎಂದು ಎಸ್​ಎಸ್​ಪಿ ಮಂಜುನಾಥ್ ಟಿಸಿ ಹೇಳಿದ್ದಾರೆ. ಪೊಲೀಸರು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ, ಹಿಂದಿನ ದಿನ ರಾತ್ರಿ ಅವರೊಂದಿಗಿದ್ದ ಸಂಬಂಧಿ ಹಾಗೂ ಸಹೋದ್ಯೋಗಿಗಳ ವಿಚಾರಣೆ ನಡೆಸಲಾಗುತ್ತಿದೆ.

ಹಿಂದಿನ ದಿನ ರಾತ್ರಿ ಇಬ್ಬರು ಸಂಬಂಧಿಕರು ಅವರ ಮನೆಗೆ ಬಂದಿದ್ದರು, ಊಟ ಮಾಡಿ ತಮ್ಮ ಅಪಾರ್ಟ್​ಮೆಂಟ್​ಗೆ ಹೊಂದಿರುಗಿದ್ದರು. ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಮಾವಿನ ತೋಟಕ್ಕೆ ಹೋಗಬೇಕೆಂದು ಎಲ್ಲರೂ ನಿರ್ಧರಿಸಿದ್ದರು , ಅಧಿಕಾರಿಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ, ಹಾಗಾಗಿ ಅಲ್ಲಿಗೆ ಬಂದು ಬಾಗಿಲು ಒಡೆದು ನೋಡಿದ್ದಾರೆ. ಆದರೆ ಅವರು ಮಹಿಳಾ ಉಡುಪಿನಲ್ಲಿ ಏಕೆ ಇದ್ದರು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪೊಲೀಸರು ಅಧಿಕಾರಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅವರ ಸಾವಿಗೆ ಕಾರಣ ತಿಳಿಯಲಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!