AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯ ಮದುವೆಯಲ್ಲಿ ಭಾಗಿಯಾಗಲು ಮನೀಶ್ ಸಿಸೋಡಿಯಾಗೆ 3 ದಿನಗಳ ಜಾಮೀನು

ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಫೆಬ್ರವರಿ 26, 2023 ರಂದು ಮಾಜಿ ಉಪಮುಖ್ಯಮಂತ್ರಿಯನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಫೆಬ್ರವರಿ 13-15 ರವರೆಗೆ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಮನೀಶ್ ಸಿಸೋಡಿಯಾಗೆ ಜಾಮೀನು ನೀಡಿದ್ದಾರೆ .

ಸೊಸೆಯ ಮದುವೆಯಲ್ಲಿ ಭಾಗಿಯಾಗಲು ಮನೀಶ್ ಸಿಸೋಡಿಯಾಗೆ 3 ದಿನಗಳ ಜಾಮೀನು
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
|

Updated on:Feb 12, 2024 | 6:02 PM

Share

ದೆಹಲಿ ಫೆಬ್ರುವರಿ 12: ಆಪಾದಿತ ಅಬಕಾರಿ ನೀತಿ “ಹಗರಣ”ದಲ್ಲಿ ಬಂಧಿತರಾಗಿರುವ ಹಿರಿಯ ಎಎಪಿ (AAP) ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ತಮ್ಮ ಸೊಸೆಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ (Delhi) ನ್ಯಾಯಾಲಯ ಸೋಮವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಫೆಬ್ರವರಿ 13-15 ರವರೆಗೆ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಮನೀಶ್ ಸಿಸೋಡಿಯಾಗೆ ಜಾಮೀನು ನೀಡಿದ್ದಾರೆ. ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಫೆಬ್ರವರಿ 26, 2023 ರಂದು ಮಾಜಿ ಉಪಮುಖ್ಯಮಂತ್ರಿಯನ್ನು ಬಂಧಿಸಿತ್ತು. ಸಿಬಿಐ ಅವರನ್ನು ಬಂಧಿಸಿದ ನಂತರ, ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 9 ರಂದು ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಅವರನ್ನು ಬಂಧಿಸಿತ್ತು.

ಅನೇಕ ಜಾಮೀನು ವಿಚಾರಣೆಯ ಸಮಯದಲ್ಲಿ, ಸರ್ಕಾರದ ಅನುಮೋದಕರ ಸಾಕ್ಷ್ಯವನ್ನು ಹೊರತುಪಡಿಸಿ ಇಡಿ ತನ್ನ ವಿರುದ್ಧ ಯಾವುದೇ ಬಲವಾದ ಸಾಕ್ಷ್ಯಗಳನ್ನು ಹೊಂದಿಲ್ಲ ಎಂದು ಎಎಪಿ ನಾಯಕ ವಾದಿಸಿದರು.

ಎಎಪಿ ನಾಯಕನ ಜಾಮೀನು ಅರ್ಜಿಯನ್ನು ನ್ಯಾಯಾಲಯಗಳು ತಿರಸ್ಕರಿಸಿದರೆ, ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಮನೀಶ್ ಸಿಸೋಡಿಯಾ ಅವರಿಗೆ ವಾರಕ್ಕೊಮ್ಮೆ ತಮ್ಮ ಅನಾರೋಗ್ಯದ ಪತ್ನಿಯನ್ನು ಬಂಧನದಲ್ಲಿದ್ದಾಗ ಭೇಟಿ ಮಾಡಲು ಅವಕಾಶ ನೀಡಿದರು. ವಾರಕ್ಕೆ ಎರಡು ಬಾರಿ ಪತ್ನಿಯನ್ನು ಭೇಟಿ ಮಾಡಲು ಅನುಮತಿ ನೀಡುವಂತೆ ಜನವರಿಯಲ್ಲಿ ಸಿಸೋಡಿಯಾ ನ್ಯಾಯಾಲಯಕ್ಕೆ ಮನವಿ ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.

“ಈ ಹಿಂದೆ, ನನ್ನ ಹೆಂಡತಿಯನ್ನು ಭೇಟಿ ಮಾಡಲು ನ್ಯಾಯಾಲಯವು ನನಗೆ ಅನುಮತಿ ನೀಡಿತ್ತು. ನ್ಯಾಯಾಲಯವು ವಿಧಿಸಿದ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ” ಎಂದು ಮನೀಶ್ ಸಿಸೋಡಿಯಾ ಅವರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು.

ದೆಹಲಿ ಕೋರ್ಟ್ ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯವು ಫೆಬ್ರವರಿ 17 ರಂದು ಸಮನ್ಸ್ ನೀಡಿತ್ತು. ಫೆಡರಲ್ ಏಜೆನ್ಸಿ ಹೊರಡಿಸಿದ ನೋಟಿಸ್‌ಗಳನ್ನು ತಪ್ಪಿಸಿದ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ಸಮನ್ಸ್ ಬಂದಿದೆ.

ಇದನ್ನೂ ಓದಿ: ಬಿಹಾರದ ಮಾಜಿ ಮುಖ್ಯಮಂತ್ರಿ, ಭಾರತ ರತ್ನ ಕರ್ಪೂರಿ ಠಾಕೂರ್ ಕುಟುಂಬ ಭೇಟಿ ಮಾಡಿದ ಮೋದಿ 

ಪ್ರಕರಣದಲ್ಲಿ ಇಡಿ ಎಎಪಿ ನಾಯಕನಿಗೆ 5 ಬಾರಿ ಸಮನ್ಸ್ ನೀಡಿದೆ, ಆದರೆ ಅರವಿಂದ್ ಕೇಜ್ರಿವಾಲ್ ಸಮನ್ಸ್‌ಗೆ ಪ್ರತಿಕ್ರಿಯಿಸಲಿಲ್ಲ. ಇದು ಲೋಕಸಭೆ ಚುನಾವಣೆಗೆ ಮುನ್ನ ಅವರನ್ನು ಬಂಧಿಸಲು ಕೇಂದ್ರದ ಪಿತೂರಿಯಾಗಿದೆ ಎಂದು ಆರೋಪಿಸಿದರು.”ನೀವು ಸಮನ್ಸ್ ಕಳುಹಿಸುವಷ್ಟು ಶಾಲೆಗಳನ್ನು ನಾವು ನಿರ್ಮಿಸುತ್ತೇವೆ. ನೀವು ನಿಮ್ಮ ಧರ್ಮವನ್ನು ಮಾಡಿ, ನಾವು ನಮ್ಮದನ್ನು ಮಾಡುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Mon, 12 February 24

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು