AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸಿದ್ದ ವಕೀಲ ಅಭಯ್ ನಾಥ್ ಯಾದವ್ ಹೃದಯಾಘಾತದಿಂದ ಸಾವು

ಭಾನುವಾರ ರಾತ್ರಿ 10.30ಕ್ಕೆ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಬನಾರಸ್ ಬಾರ್ ಅಸೋಸಿಯೇಷನ್ ನ ಹಿರಿಯ ವಕೀಲ ನಿತ್ಯಾನಂದ ರಾಯ್ ಹೇಳಿದ್ದಾರೆ. ಯಾದವ್ ಅವರನ್ನು ತಕ್ಷಣವೇ ತ್ರಿಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸಿದ್ದ ವಕೀಲ ಅಭಯ್ ನಾಥ್ ಯಾದವ್ ಹೃದಯಾಘಾತದಿಂದ ಸಾವು
ಅಭಯ.ನಾಥ್ ಯಾದವ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 1:19 PM

Share

ದೆಹಲಿ: ಜ್ಞಾನವಾಪಿ ಪ್ರಕರಣದಲ್ಲಿ(Gyanvapi case) ಅಂಜುಮಾನ್ ಇಂತೆಜಾಮಿಯಾ ಮಸ್ಜಿದ್ ಸಮಿತಿಯ ( Anjuman Intezamia Masjid Committee)  ಪರ ವಾದಿಸಿದ್ದ ಹಿರಿಯ ವಕೀಲ ಅಭಯ್ ನಾಥ್ ಯಾದವ್ (Abhay Nath Yadav) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ ಭಾನುವಾರ ಅವರನ್ನು ವಾರಣಾಸಿಯಲ್ಲಿರುವ ಮಕ್ಭೂಲ್ ಅಲಾಂ ರೋಡ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ 10.30ಕ್ಕೆ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಬನಾರಸ್ ಬಾರ್ ಅಸೋಸಿಯೇಷನ್ ನ ಹಿರಿಯ ವಕೀಲ ನಿತ್ಯಾನಂದ ರಾಯ್ ಹೇಳಿದ್ದಾರೆ. ಯಾದವ್ ಅವರನ್ನು ತಕ್ಷಣವೇ ತ್ರಿಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆಮೇಲೆ ಅವರ ಕುಟುಂಬದ ಸದಸ್ಯರು ಶುಭಂ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಯಾದವ್ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.

ಶೃಂಗಾರ್ ಗೌರಿ ಮತ್ತು ಜ್ಞಾನವಾಪಿ ಪ್ರಕರಣದಲ್ಲಿ ಆಗಸ್ಟ್ 4ರಂದು ಮುಸ್ಲಿಂ ಕಕ್ಷಿದಾರರು ಸಲ್ಲಿಕೆಸಲಾಗುವ ಪ್ರತಿಕ್ರಿಯೆಯಲ್ಲಿ ಅಭಯ್  ನಾಥ್ ಯಾದವ್ ಅವರ ಪಾತ್ರ ಮಹತ್ತರವಾದುದಾಗಿದೆ.

ಜ್ಞಾನವಾಪಿ ಪ್ರಕರಣಗಲ್ಲಿ ಸುಪ್ರೀಂಕೋರ್ಟ್ ಅಕ್ಟೋಬರ್ ನಲ್ಲಿ ವಿಚಾರಣೆ ನಡೆಸಲಿದೆ. ಪ್ರಸ್ತುತ ಪ್ರಕರಣವನ್ನು ಸದ್ಯ ಕೆಳಗಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಮೂರ್ತಿ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ನರಸಿಂಹ ಅವರ ನ್ಯಾಯಪೀಠ ಈ  ಪ್ರಕರಣದ ವಿಚಾರಣೆ ನಡೆಸುತ್ತಿದೆ.

Published On - 1:07 pm, Mon, 1 August 22

ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು