AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರ ನಜಮ್ ಹೇಳಿದ್ದಾರೆ.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ
ಜಫರ್ಯಾಬ್ ಜಿಲಾನಿ
ರಶ್ಮಿ ಕಲ್ಲಕಟ್ಟ
|

Updated on:May 17, 2023 | 2:17 PM

Share

ಹಿರಿಯ ವಕೀಲ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ(AIMPLB) ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ (Zafaryab Jilani) ಬುಧವಾರ ಲಕ್ನೋದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ನಂತರ ಬೆಳಿಗ್ಗೆ 11.50 ರ ಸುಮಾರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಅಪ್ಪ ನಿಧನರಾದರು ಎಂದು ಜಿಲಾನಿ ಅವರ ಮಗ ನಜಮ್ ಜಫರ್ಯಾಬ್ ಪಿಟಿಐಗೆ ತಿಳಿಸಿದ್ದಾರೆ. ಜಿಲಾನಿ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ತಂದೆಯ ಅಂತ್ಯಕ್ರಿಯೆ ನಡೆಯಲಿದೆ ಎಂದು ನಜಮ್ ಹೇಳಿದ್ದಾರೆ.

ಇದನ್ನೂ ಓದಿ: Manipur violence: ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಜನರಿಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಜಫರ್ಯಾಬ್ ಜಿಲಾನಿ ಅವರು ಬಾಬರಿ ಮಸೀದಿ ಪ್ರಕರಣದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ವಾದಿಸಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಚಾಲಕರೂ ಆಗಿದ್ದಾರೆ.ಅಲ್ಲಾ ಅವರಿಗೆ ಕ್ಷಮಾಪಣೆ ಮತ್ತು ಶಕ್ತಿಯನ್ನು ನೀಡಲಿ ಹಿರಿಯ ಮುಸ್ಲಿಂ ಧರ್ಮಗುರು ಖಾಲಿದ್ ರಶೀದ್ ಫರಂಗಿ ಮಹಾಲಿ ಹೇಳಿದ್ದಾರೆ.

ಫೆಬ್ರವರಿ 1986 ರಲ್ಲಿ, ಮಸೀದಿಯ ಬೀಗಗಳನ್ನು ತೆರೆಯಲು ಫೈಜಾಬಾದ್ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ, ದೇಗುಲವನ್ನು ಬೆಂಬಲಿಸುವ ಅಭಿಯಾನವನ್ನು ಪ್ರಾರಂಭಿಸಲು ಮತ್ತು ಹಿಂದುತ್ವದ ಅಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಬಾಬರಿ ಮಸೀದಿ ಕ್ರಿಯಾ ಸಮಿತಿಯನ್ನು ರಚಿಸಲಾಯಿತು. ಜಿಲಾನಿಯವರು ಸಮಿತಿಯ ಸಂಚಾಲಕರಾದರು. ಅಂದಿನಿಂದ, ಜಿಲಾನಿಯವರ ಜೀವನವು ಸಂಪೂರ್ಣವಾಗಿ ಬಾಬರಿ ಮಸೀದಿಯ ಉದ್ದೇಶಕ್ಕಾಗಿ ಸಮರ್ಪಿತವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Wed, 17 May 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ