AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರ ನಜಮ್ ಹೇಳಿದ್ದಾರೆ.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ
ಜಫರ್ಯಾಬ್ ಜಿಲಾನಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 17, 2023 | 2:17 PM

Share

ಹಿರಿಯ ವಕೀಲ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ(AIMPLB) ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ (Zafaryab Jilani) ಬುಧವಾರ ಲಕ್ನೋದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ನಂತರ ಬೆಳಿಗ್ಗೆ 11.50 ರ ಸುಮಾರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಅಪ್ಪ ನಿಧನರಾದರು ಎಂದು ಜಿಲಾನಿ ಅವರ ಮಗ ನಜಮ್ ಜಫರ್ಯಾಬ್ ಪಿಟಿಐಗೆ ತಿಳಿಸಿದ್ದಾರೆ. ಜಿಲಾನಿ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ತಂದೆಯ ಅಂತ್ಯಕ್ರಿಯೆ ನಡೆಯಲಿದೆ ಎಂದು ನಜಮ್ ಹೇಳಿದ್ದಾರೆ.

ಇದನ್ನೂ ಓದಿ: Manipur violence: ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಜನರಿಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಜಫರ್ಯಾಬ್ ಜಿಲಾನಿ ಅವರು ಬಾಬರಿ ಮಸೀದಿ ಪ್ರಕರಣದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ವಾದಿಸಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಚಾಲಕರೂ ಆಗಿದ್ದಾರೆ.ಅಲ್ಲಾ ಅವರಿಗೆ ಕ್ಷಮಾಪಣೆ ಮತ್ತು ಶಕ್ತಿಯನ್ನು ನೀಡಲಿ ಹಿರಿಯ ಮುಸ್ಲಿಂ ಧರ್ಮಗುರು ಖಾಲಿದ್ ರಶೀದ್ ಫರಂಗಿ ಮಹಾಲಿ ಹೇಳಿದ್ದಾರೆ.

ಫೆಬ್ರವರಿ 1986 ರಲ್ಲಿ, ಮಸೀದಿಯ ಬೀಗಗಳನ್ನು ತೆರೆಯಲು ಫೈಜಾಬಾದ್ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ, ದೇಗುಲವನ್ನು ಬೆಂಬಲಿಸುವ ಅಭಿಯಾನವನ್ನು ಪ್ರಾರಂಭಿಸಲು ಮತ್ತು ಹಿಂದುತ್ವದ ಅಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಬಾಬರಿ ಮಸೀದಿ ಕ್ರಿಯಾ ಸಮಿತಿಯನ್ನು ರಚಿಸಲಾಯಿತು. ಜಿಲಾನಿಯವರು ಸಮಿತಿಯ ಸಂಚಾಲಕರಾದರು. ಅಂದಿನಿಂದ, ಜಿಲಾನಿಯವರ ಜೀವನವು ಸಂಪೂರ್ಣವಾಗಿ ಬಾಬರಿ ಮಸೀದಿಯ ಉದ್ದೇಶಕ್ಕಾಗಿ ಸಮರ್ಪಿತವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Wed, 17 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​