AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರ ನಜಮ್ ಹೇಳಿದ್ದಾರೆ.

Zafaryab Jilani: ಹಿರಿಯ ವಕೀಲ, ಎಐಎಂಪಿಎಲ್​​​ಬಿ ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ ನಿಧನ
ಜಫರ್ಯಾಬ್ ಜಿಲಾನಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 17, 2023 | 2:17 PM

Share

ಹಿರಿಯ ವಕೀಲ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ(AIMPLB) ಕಾರ್ಯದರ್ಶಿ ಜಫರ್ಯಾಬ್ ಜಿಲಾನಿ (Zafaryab Jilani) ಬುಧವಾರ ಲಕ್ನೋದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ನಂತರ ಬೆಳಿಗ್ಗೆ 11.50 ರ ಸುಮಾರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಅಪ್ಪ ನಿಧನರಾದರು ಎಂದು ಜಿಲಾನಿ ಅವರ ಮಗ ನಜಮ್ ಜಫರ್ಯಾಬ್ ಪಿಟಿಐಗೆ ತಿಳಿಸಿದ್ದಾರೆ. ಜಿಲಾನಿ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ವಕೀಲರಾಗಿದ್ದ ಜಿಲಾನಿ ಅವರು ಉತ್ತರ ಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದರು.ಬುಧವಾರ ಸಂಜೆ ಲಕ್ನೋದ ಐಶ್‌ಬಾಗ್ ಸ್ಮಶಾನದಲ್ಲಿ ತಂದೆಯ ಅಂತ್ಯಕ್ರಿಯೆ ನಡೆಯಲಿದೆ ಎಂದು ನಜಮ್ ಹೇಳಿದ್ದಾರೆ.

ಇದನ್ನೂ ಓದಿ: Manipur violence: ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಜನರಿಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಜಫರ್ಯಾಬ್ ಜಿಲಾನಿ ಅವರು ಬಾಬರಿ ಮಸೀದಿ ಪ್ರಕರಣದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ವಾದಿಸಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಚಾಲಕರೂ ಆಗಿದ್ದಾರೆ.ಅಲ್ಲಾ ಅವರಿಗೆ ಕ್ಷಮಾಪಣೆ ಮತ್ತು ಶಕ್ತಿಯನ್ನು ನೀಡಲಿ ಹಿರಿಯ ಮುಸ್ಲಿಂ ಧರ್ಮಗುರು ಖಾಲಿದ್ ರಶೀದ್ ಫರಂಗಿ ಮಹಾಲಿ ಹೇಳಿದ್ದಾರೆ.

ಫೆಬ್ರವರಿ 1986 ರಲ್ಲಿ, ಮಸೀದಿಯ ಬೀಗಗಳನ್ನು ತೆರೆಯಲು ಫೈಜಾಬಾದ್ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ, ದೇಗುಲವನ್ನು ಬೆಂಬಲಿಸುವ ಅಭಿಯಾನವನ್ನು ಪ್ರಾರಂಭಿಸಲು ಮತ್ತು ಹಿಂದುತ್ವದ ಅಲೆಯನ್ನು ಹೆಚ್ಚಿಸುವ ಉದ್ದೇಶದಿಂದ ಬಾಬರಿ ಮಸೀದಿ ಕ್ರಿಯಾ ಸಮಿತಿಯನ್ನು ರಚಿಸಲಾಯಿತು. ಜಿಲಾನಿಯವರು ಸಮಿತಿಯ ಸಂಚಾಲಕರಾದರು. ಅಂದಿನಿಂದ, ಜಿಲಾನಿಯವರ ಜೀವನವು ಸಂಪೂರ್ಣವಾಗಿ ಬಾಬರಿ ಮಸೀದಿಯ ಉದ್ದೇಶಕ್ಕಾಗಿ ಸಮರ್ಪಿತವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Wed, 17 May 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!