AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ​ ಆರ್.ವೆಂಕಟರಮಣಿ ನೇಮಕ

ಭಾರತದ ಮುಂದಿನ ಅಟಾರ್ನಿ ಜನರಲ್​ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿಯವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Breaking News: ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ​ ಆರ್.ವೆಂಕಟರಮಣಿ ನೇಮಕ
ಹಿರಿಯ ವಕೀಲ ಆರ್.ವೆಂಕಟರಮಣಿ
TV9 Web
| Edited By: |

Updated on:Sep 28, 2022 | 9:44 PM

Share

ನವದೆಹಲಿ: ಭಾರತದ ಮುಂದಿನ ಅಟಾರ್ನಿ ಜನರಲ್ (Attorney General) ​ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿಯವರನ್ನು (R Venkataramani) ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೆ.ಕೆ.ವೇಣುಗೋಪಾಲ್‌ರಿಂದ ತೆರವಾಗಿದ್ದ ಸ್ಥಾನಕ್ಕೆ ಆರ್.ವೆಂಕಟರಮಣಿಯವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಪ್ರಸ್ತಾಪವನ್ನು ನಿರಾಕರಿಸಿದ ಮುಕುಲ್ ರೋಹಟಗಿ

ನವದೆಹಲಿ: ಕೇಂದ್ರ ಸರ್ಕಾರ ಮುಕುಲ್ ರೋಹಟಗಿ  ಅವರನ್ನು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಕ ಮಾಡಿತ್ತು, ಆದರೆ ಮುಕುಲ್ ರೋಹಟಗಿ ಅವರು ಕೇಂದ್ರ ಸರ್ಕಾರದ  ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಇವರ ನಿರಾಕರಣೆಗೆ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಮುಕುಲ್ ರೋಹಟಗಿ ಅಕ್ಟೋಬರ್ 1 ರಿಂದ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ತಮ್ಮ ಎರಡನೇ ಅವಧಿಯನ್ನು ಪ್ರಾರಂಭಿಸಬೇಕಿತ್ತು. ಕೆಕೆ ವೇಣುಗೋಪಾಲ್ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30 ಕ್ಕೆ ಕೊನೆಗೊಳ್ಳಲಿದ್ದು, ಅವರ ಸ್ಥಾನವನ್ನು ರೋಹಟಗಿ ವಹಿಸಲಿದ್ದರು.

ರೋಹಟಗಿ ಅವರು ಈ ಹಿಂದೆ ಜೂನ್ 2014 ರಲ್ಲಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡರು ಮತ್ತು ಜೂನ್ 2017 ರವರೆಗೆ ಸೇವೆ ಸಲ್ಲಿಸಿದರು. ಈಗ ಅವರನ್ನು ಎರಡನೇ ಬಾರಿಗೆ ಈ ನೇಮಕ ಮಾಡಲಾಗಿತ್ತು. ಪ್ರಸ್ತುತ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರ ಸೇವೆ ಜೂನ್ 30 ರಂದು ಕೊನೆಗೊಂಡಿದೆ, ಆದರೆ ಅವರ ಸೆ.30ರ ವರೆಗೆ ಸೇವೆಯನ್ನು ವಿಸ್ತರಿಸಲಾಗಿದೆ.

ವೇಣುಗೋಪಾಲ್ ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಸೆಪ್ಟೆಂಬರ್ 30 ರ ನಂತರ ಅಧಿಕಾರದಲ್ಲಿ ಇರುವುದಿಲ್ಲ ಎಂದು ಸೂಚಿಸಿದ್ದರು. ವೇಣುಗೋಪಾಲ್ ಅವರು ಮೊದಲು 1 ಜುಲೈ 2017 ರಂದು ಕೇಂದ್ರ ಸರ್ಕಾರದ ಉನ್ನತ ಕಾನೂನು ಅಧಿಕಾರಿಯಾಗಿ ಅಟಾರ್ನಿ ಜನರಲ್ ಆಗಿ ಅಧಿಕಾರ ವಹಿಸಿಕೊಂಡರು. ಸೇವೆ ಮುಗಿದ ನಂತರ, ಅವರಿಗೆ 3 ತಿಂಗಳ ವಿಸ್ತರಣೆಯನ್ನು ನೀಡಲಾಯಿತು. ವೇಣುಗೋಪಾಲ್ ಅವರು ಯಾವುದೇ ಹೆಚ್ಚಿನ ವಿಸ್ತರಣೆಯನ್ನು ತೆಗೆದುಕೊಳ್ಳಲು ನಿರಾಕರಿಸಿದರು, ಆದ್ದರಿಂದ ಸರ್ಕಾರವು ಹೊಸ ಅಟಾರ್ನಿ ಜನರಲ್ ಅನ್ನು ನೇಮಿಸಲು ನಿರ್ಧರಿಸಿತ್ತು

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Wed, 28 September 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್