AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ 11 ಮಹಿಳಾ ವಕೀಲರಿಗೆ ಹಿರಿಯ ನ್ಯಾಯವಾದಿ ಸ್ಥಾನಮಾನ ನೀಡಿ ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್

ಶೋಭಾ ಗುಪ್ತಾ, ಸ್ವರೂಪಮಾ ಚತುರ್ವೇದಿ, ಲಿಜ್ ಮ್ಯಾಥ್ಯೂ, ಕರುಣಾ ನುಂಡಿ, ಉತ್ತರಾ ಬಬ್ಬರ್, ಹರಿಪ್ರಿಯಾ ಪದ್ಮನಾಭನ್, ಅರ್ಚನಾ ಪಾಠಕ್ ದವೆ, ಶಿರಿನ್ ಖಜುರಿಯಾ, ಎನ್ಎಸ್ ನಪ್ಪಿನೈ, ಎಸ್ ಜನನಿ ಮತ್ತು ನಿಶಾ ಬಾಗ್ಚಿ ಅವರಿಗೆ ಹಿರಿಯ ವಕೀಲರ ಸ್ಥಾನಮಾನ ನೀಡಲಾಗಿದೆ.

ಒಂದೇ ದಿನ 11 ಮಹಿಳಾ ವಕೀಲರಿಗೆ ಹಿರಿಯ ನ್ಯಾಯವಾದಿ ಸ್ಥಾನಮಾನ ನೀಡಿ ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Jan 19, 2024 | 8:38 PM

Share

ದೆಹಲಿ ಜನವರಿ 19: ಒಂದೇ ದಿನದಲ್ಲಿ 11 ಮಹಿಳಾ ವಕೀಲರಿಗೆ ಹಿರಿಯ ವಕೀಲರ (Senior Advocate) ಸ್ಥಾನಮಾನ ನೀಡಿ ಸುಪ್ರೀಂಕೋರ್ಟ್ (Supreme Court) ಶುಕ್ರವಾರ ಇತಿಹಾಸ ಸೃಷ್ಟಿಸಿದೆ. ನ್ಯಾಯಾಲಯದ ಇತಿಹಾಸದಲ್ಲಿ ಇದುವರೆಗೆ 12 ಮಹಿಳಾ ವಕೀಲರಿಗೆ ಮಾತ್ರ ಹಿರಿಯ ವಕೀಲರ ಸ್ಥಾನಮಾನ ನೀಡಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಅವರ ನೇತೃತ್ವದಲ್ಲಿ, 11 ಮಹಿಳೆಯರು ಮತ್ತು 34 ಫಸ್ಟ್ ಜನರೇಷನ್ ವಕೀಲರು ಸೇರಿದಂತೆ 56 ವಕೀಲರಿಗೆ ಹಿರಿಯ ವಕೀಲರ ಸ್ಥಾನಮಾನವನ್ನು ನೀಡಲಾಯಿತು.

11 ವಕೀಲೆಯರು ಯಾರೆಲ್ಲಾ?

ಶೋಭಾ ಗುಪ್ತಾ, ಸ್ವರೂಪಮಾ ಚತುರ್ವೇದಿ, ಲಿಜ್ ಮ್ಯಾಥ್ಯೂ, ಕರುಣಾ ನುಂಡಿ, ಉತ್ತರಾ ಬಬ್ಬರ್, ಹರಿಪ್ರಿಯಾ ಪದ್ಮನಾಭನ್, ಅರ್ಚನಾ ಪಾಠಕ್ ದವೆ, ಶಿರಿನ್ ಖಜುರಿಯಾ, ಎನ್ಎಸ್ ನಪ್ಪಿನೈ, ಎಸ್ ಜನನಿ ಮತ್ತು ನಿಶಾ ಬಾಗ್ಚಿ.

ಫಸ್ಟ್ ಜನರೇಷನ್ ವಕೀಲರ ಪಟ್ಟಿಯಲ್ಲಿ ಅಮಿತ್ ಆನಂದ್ ತಿವಾರಿ, ಸೌರಭ್ ಮಿಶ್ರಾ ಮತ್ತು ಅಭಿನವ್ ಮುಖರ್ಜಿ ಸೇರಿದ್ದಾರೆ.ಇಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೆಚ್ಚಿನ ಸಂಖ್ಯೆಯ ಮಹಿಳಾ ವಕೀಲರಿಗೆ ಹಿರಿಯ ವಕೀಲರ ಸ್ಥಾನಮಾನ ನೀಡುವ ನಿರ್ಧಾರವನ್ನು ಸ್ವಾಗತಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮತ್ತು ಹಿರಿಯ ವಕೀಲೆ ಐಶ್ವರ್ಯ ಭಾಟಿ, ಇದು ಸುಪ್ರೀಂ ಕೋರ್ಟ್‌ನ ಐತಿಹಾಸಿಕ ಹೆಜ್ಜೆಯಾಗಿದೆ. “ಮಹಿಳಾ ವಕೀಲರ ಅರ್ಹತೆಯನ್ನು ಗುರುತಿಸುವ ಮೂಲಕ ನಿಜವಾಗಿಯೂ ಲಿಂಗ ಸಮಾನತೆ ಜತೆಗೆ ಇದು ಅವರಿಗೆ ಗೌರವವನ್ನು ತೋರಿಸುತ್ತದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಇದುವರೆಗೆ ಇಬ್ಬರು ನಿವೃತ್ತ ನ್ಯಾಯಾಧೀಶರು ಸೇರಿದಂತೆ 14 ಮಹಿಳೆಯರಿಗೆ ಮಾತ್ರ ಹಿರಿಯ ವಕೀಲ ಸ್ಥಾನಮಾನವನ್ನು ನೀಡಿತ್ತು.

2019 ರಲ್ಲಿ, ಸುಪ್ರೀಂ ಕೋರ್ಟ್ ಏಕಕಾಲದಲ್ಲಿ ಆರು ಮಹಿಳಾ ವಕೀಲರಾದ ಮಾಧವಿ ದಿವಾನ್, ಮೇನಕಾ ಗುರುಸ್ವಾಮಿ, ಅನಿತಾ ಶೆಣೈ, ಅಪರಾಜಿತಾ ಸಿಂಗ್, ಐಶ್ವರ್ಯ ಭಾಟಿ ಮತ್ತು ಪ್ರಿಯಾ ಹಿಂಗೋರಾಣಿ ಅವರಿಗೆ ಹಿರಿಯ ವಕೀಲರ ಸ್ಥಾನಮಾನವನ್ನು ನೀಡಿತ್ತು.

ಸುಪ್ರೀಂ ಕೋರ್ಟ್‌ನಿಂದ ಹಿರಿಯ ವಕೀಲರಾಗಿ ಮಾಡಿದ ಮೊದಲ ವಕೀಲರು ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ. ನಂತರ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದರು. ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 57 ವರ್ಷಗಳ ನಂತರ 2007 ರಲ್ಲಿ ನ್ಯಾಯಮೂರ್ತಿ ಮಲ್ಹೋತ್ರಾ ನಾಮನಿರ್ದೇಶನಗೊಂಡರು.

ಇದನ್ನೂ ಓದಿ: ಬಿಲ್ಕಿಸ್ ಬಾನು ಪ್ರಕರಣದ ದೋಷಿಗಳು ಜ.21ರೊಳಗೆ ಶರಣಾಗಲು ಸುಪ್ರೀಂಕೋರ್ಟ್ ಆದೇಶ

ಇದರ ನಂತರ, 2013 ರಲ್ಲಿ, ಮೀನಾಕ್ಷಿ ಅರೋರಾ, ಕಿರಣ್ ಸೂರಿ ಮತ್ತು ವಿಭಾ ದತ್ತಾ ಮಖಿಜಾ ಅವರನ್ನು ಹಿರಿಯ ವಕೀಲರನ್ನಾಗಿ ಮಾಡಲಾಯಿತು. 2015 ರಲ್ಲಿ,  ವಿ ಮೋಹನ ಮತ್ತು ಮಹಾಲಕ್ಷ್ಮಿ ಪಾವನಿ ಅವರನ್ನು ನಾಮನಿರ್ದೇಶನ ಮಾಡಲಾಯಿತು. ಅಲ್ಲಿಗೆ ಸಂಖ್ಯೆ 6 ಆಯ್ತು.

2006 ರಲ್ಲಿ ನ್ಯಾಯಮೂರ್ತಿ ಶಾರದಾ ಅಗರ್ವಾಲ್ ಮತ್ತು 2015 ರಲ್ಲಿ ನ್ಯಾಯಮೂರ್ತಿ ರೇಖಾ ಶರ್ಮಾ  ಹೀಗೆ ಇಬ್ಬರು ನಿವೃತ್ತ ಮಹಿಳಾ ಹೈಕೋರ್ಟ್ ನ್ಯಾಯಾಧೀಶರನ್ನು ನಂತರ ನಾಮನಿರ್ದೇಶನ ಮಾಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?