AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು. ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ […]

ವೃದ್ಧಾಶ್ರಮದ ಮೇಲೆ ದಾಳಿ ಮಾಡಿದ ಸಚಿವ, ಮಹಿಳಾ ಆಯೋಗದ ಅಧ್ಯಕ್ಷೆಗೆ ಶಾಕ್​!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 01, 2020 | 5:21 PM

Share

ದೆಹಲಿ: ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ದೆಹಲಿಯ ನಾಂಗ್ಲೋಯಿನ ವೃದ್ಧಾಶ್ರಮವೊಂದರ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ರಾಜ್ರೇಂದ್ರ ಗೌತಮ್​ಗೆ ದಾಳಿ ಮಾಡಿದರು. ಈ ವೇಳೆ 19 ಹಿರಿಯ ವಿಶೇಷಚೇತನ ವೃದ್ಧರು ವಾಸಿಸುತ್ತಿದ್ದ ದಾರುಣ ಸ್ಥಿತಿಯನ್ನ ಕಂಡು ಒಂದು ಕ್ಷಣ ದಂಗಾಗಿ ಬಿಟ್ಟರು.

ಸಾಮಾಜಿಕ ಅಂತರವಿರಬೇಕಾದ ಇಂದಿನ ಪರಿಸ್ಥಿತಿಯಲ್ಲಿ ವೃದ್ಧರನ್ನ ಸರಿಯಾದ ಗಾಳಿ ಬೆಳಕಿಲ್ಲದ ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಸರ್ಕಾರೇತರ ಸಂಸ್ಥೆಯೊಂದು ನಿರ್ವಹಿಸುತ್ತಿದ್ದ ಈ ವೃದ್ಧಾಶ್ರಮದ ನಿವಾಸಿಗಳಿಗೆ ಸರಿಯಾದ ಊಟ ಹಾಗೂ ಶೌಚಾಲಯದ ವ್ಯವಸ್ಥೆ ಸಹ ಇರಲಿಲ್ಲವಂತೆ.

ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೋಣೆಗಳಿಲ್ಲದೆ ಶೌಚಾಲಯದ ದುರ್ವಾಸನೆ ತುಂಬಿಕೊಂಡಿದ್ದ ಒಂದೇ ಕೋಣೆಯಲ್ಲಿ ವಾಸವಿರಬೇಕಿತ್ತು. ಕೆಲವೊಮ್ಮೆ ದುರ್ನಾಥ ತಡೆಯೋಕಾಗದೆ ವಿಶೇಷಚೇತನ ವೃದ್ಧರು ತಾವೇ ಪ್ರಯಾಸಪಟ್ಟು ಶೌಚಾಲಯ ಮತ್ತು ಹೊಲಸು ಮಾಡಿಕೊಂಡ ಇತರರ ಹಾಸಿಗೆಯನ್ನ ಶುಚಿಗೊಳಿಸುತ್ತಿದ್ದರಂತೆ.

ದಿನದಲ್ಲಿ ನಾಲ್ಕೈದು ಗಂಟೆ ಕರೆಂಟ್​ ಕಟ್​ ಇಷ್ಟೇ ಅಲ್ಲ, ಸಂಸ್ಥೆಯು ವಿದ್ಯುತ್​ ಬಿಲ್ ಉಳಿಸಲು ದಿನದಲ್ಲಿ ನಾಲ್ಕೈದು ಗಂಟೆಗಳ ಕರೆಂಟ್​ ಸಹ ಆಫ್​ ಮಾಡುತ್ತಿದ್ದರಂತೆ. ವೃದ್ಧರಿಗೆ ಫ್ಯಾನ್ ಏಕೆ ಎಂದ ನೆಪವೊಡ್ಡಿ ಅದೂ ಸಹ ಕಸಿದುಕೊಂಡಿದ್ದರು. ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯರಿಗೆ ಅನ್ನ ಮತ್ತು ಸಾರು ಮಾತ್ರ ನೀಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ್ದಕ್ಕೆ ಸಂಸ್ಥೆಯ ಸಿಬ್ಬಂದಿ ಕೆಲ ಹಿರಿಯರಿಗೆ ಥಳಿಸಿಯೂ ಇದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗೌತಮ್ ತನಿಖೆ ನಡೆಸಲು ಸೂಚಿಸಿದ್ದಾರೆ. ಜೊತೆಗೆ, ವೃದ್ಧಾಶ್ರಮ ನಡೆಸುತ್ತಿದ್ದ ಮಾಲೀಕ ಮತ್ತು ಸರ್ಕಾರೇತರ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲು ಅಧ್ಯಕ್ಷೆ ಸ್ವಾತಿ ಮಲಿವಾಲ್​ ಆಗ್ರಹಿಸಿದ್ದಾರೆ.

Published On - 5:19 pm, Sat, 1 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ